ಕಾರಿನಲ್ಲಿ ಪತ್ತೆಯಾದ ಹಣ 
ರಾಜ್ಯ

ಹೊಸೂರು ರಸ್ತೆಯಲ್ಲಿ ಕಾರೊಂದರಲ್ಲಿ 9 ಕೋಟಿ ರೂ ವಶಪಡಿಸಿಕೊಂಡ ಐಟಿ ಅಧಿಕಾರಿಗಳು!

ಹೊಸೂರು ರಸ್ತೆಯ ಸಿಗ್ನಲ್ ಒಂದರ ಬಳಿ ಪೊಲೀಸರು KL 20 T 8629 ನೋಂದಣಿ ಸಂಖ್ಯೆಯ ಕಾರನ್ನು ತಡೆದು ನಿಲ್ಲಿಸಿದ್ದಾರೆ. ಬೆಂಗಳೂರಿನಿಂದ ಹೊಸೂರಿನ ಕಡೆಗೆ ತೆರಳುತ್ತಿದ್ದ ಈ ಕಾರನ್ನು ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳೊಂದಿಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.

ಬೆಂಗಳೂರು: ಹೊಸೂರು ರಸ್ತೆಯಲ್ಲಿ ತಮಿಳುನಾಡಿನ ಆಭರಣ ವ್ಯಾಪಾರಿಯೊಬ್ಬರ ಕಾರನ್ನು (SUV) ತಡೆದು ನಿಲ್ಲಿಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಅದರಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ.ಗಳ ಲೆಕ್ಕಕ್ಕೆ ಸಿಗದ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.

ಅಧಿಕಾರಿಗಳ ಪ್ರಕಾರ, ತಮಿಳುನಾಡಿನ ಕಡೆಗೆ ಹಣವನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ, ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ಘಟಕ-22ರ ಉಪ ನಿರ್ದೇಶಕ ಜಗದೀಶ್ ಅವರು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ರಾತ್ರಿ ಗಸ್ತು ಸಿಬ್ಬಂದಿಯ ನೆರವು ಕೋರಿದ್ದಾರೆ.

ರಾತ್ರಿ ಸುಮಾರು 10.30ರ ಸುಮಾರಿಗೆ, ಬಿಇಟಿಎಲ್ (BETL) ಟೋಲ್ ದಾಟಿದ ನಂತರ ಹೊಸೂರು ರಸ್ತೆಯ ಸಿಗ್ನಲ್ ಒಂದರ ಬಳಿ ಪೊಲೀಸರು KL 20 T 8629 ನೋಂದಣಿ ಸಂಖ್ಯೆಯ ಕಾರನ್ನು ತಡೆದು ನಿಲ್ಲಿಸಿದ್ದಾರೆ. ಬೆಂಗಳೂರಿನಿಂದ ಹೊಸೂರಿನ ಕಡೆಗೆ ತೆರಳುತ್ತಿದ್ದ ಈ ಕಾರನ್ನು ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳೊಂದಿಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.

ನಂತರ ಅವರನ್ನು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಕಾರನ್ನು ಪರಿಶೀಲಿಸಿದಾಗ ಅಧಿಕಾರಿಗಳಿಗೆ 9 ಕೋಟಿ ರೂ. ಹಣ ಪತ್ತೆಯಾಯಿತು. ಕಾರಿನಲ್ಲಿದ್ದವರ ಪೈಕಿ ಒಬ್ಬರನ್ನು ತಮಿಳುನಾಡಿನ ತೂತುಕುಡಿಯ 'ಸಿಂಧು ಜ್ಯುವೆಲರ್ಸ್'ನ ಸಚಿನ್ (42) ಎಂದು ಗುರುತಿಸಲಾಗಿದೆ.

ಅವರನ್ನು ಮುಂದಿನ ವಿಚಾರಣೆಗಾಗಿ ಆದಾಯ ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದ್ದಾರೆ. ಇದೇ ವೇಳೆ, ತಮಿಳುನಾಡಿನಲ್ಲಿರುವ ಸಚಿನ್ ಅವರ ನಿವಾಸದ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಹೆಚ್ಚುವರಿಯಾಗಿ 1.3 ಕೋಟಿ ರೂ. ಹಣವನ್ನು ವಶಪಡಿಸಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

IAS ಅಧಿಕಾರಿ ನಿಗೂಢ ಕಣ್ಮರೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ನಾಪತ್ತೆ ಆಗಿಲ್ಲ, ಆದ್ರೆ...: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

CAA ಅರ್ಜಿದಾರರಿಗೆ ಗುಡ್‌ನ್ಯೂಸ್: ಹಿಂದೂ, ಸಿಖ್, ಜೈನ ನಿರಾಶ್ರಿತರಿಗೆ 6 ತಿಂಗಳಲ್ಲಿ ಭಾರತೀಯ ಪೌರತ್ವ: Amit shah

ಅದು ಎಲ್ಲಿಂದ ಹಿಡ್ಕೊಂಡು ಬಂದಿದ್ದಾರೋ ಈ ಡಿಸಿನಾ?: ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ವಿರುದ್ಧ ಎಚ್.ಡಿ.ರೇವಣ್ಣ ಕೆಂಡಾಮಂಡಲ

ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು ₹5 ಕೋಟಿಗೆ ಬೇಡಿಕೆ; ಪಂಜಾಬ್ CM ಪತ್ನಿ ವಿರುದ್ಧ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಿಂದಲೇ ಗಂಭೀರ ಆರೋಪ!

'ನಾವು ದೇಶದ್ರೋಹಿಗಳಾ?.. ಗಾಂಧಿ, ನೆಹರು, ಪಟೇಲ್, ಬೋಸ್ ನಿರ್ಧರಿಸಿದ ಆವೃತ್ತಿಯನ್ನೇ ಹಾಡುತ್ತಿದ್ದೇವೆ: ವಂದೇ ಮಾತರಂ ವಿವಾದಕ್ಕೆ Kharge ತಿರುಗೇಟು