ಸಂಗ್ರಹ ಚಿತ್ರ 
ರಾಜ್ಯ

ಆರ್ಥಿಕ ದುರ್ಬಲ ವರ್ಗದ ದಂಪತಿಗಳಿಗೆ ಸಿಹಿಸುದ್ದಿ: ಆಯುಷ್ಮಾನ್ ಯೋಜನೆಯಡಿ IVF ಚಿಕಿತ್ಸೆಗೆ ಸರ್ಕಾರ ಅಸ್ತು..!

ಮೊದಲ ಹಂತದಲ್ಲಿ ಈ ಯೋಜನೆಯನ್ನು ಒಂದು ವರ್ಷದ ಪ್ರಾಯೋಗಿಕ ಯೋಜನೆಯಾಗಿ ಜಾರಿಗೊಳಿಸಲಾಗುತ್ತಿದ್ದು, 120 ಆದ್ಯತಾ ಕುಟುಂಬ (PHH) ಹಾಗೂ ಬಡತನ ರೇಖೆಗಿಂತ ಕೆಳಗಿನ (BPL) ಪಡಿತರ ಚೀಟಿದಾರರಿಗೆ ಇದರ ಪ್ರಯೋಜನ ದೊರೆಯಲಿದೆ.

ದಾವಣಗೆರೆ/ಚಿತ್ರದುರ್ಗ: ಕರ್ನಾಟಕ ಸರ್ಕಾರವು ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮಹತ್ವದ ನೆರವು ನೀಡುವ ನಿಟ್ಟಿನಲ್ಲಿ ಸಹಾಯಕ ಸಂತಾನೋತ್ಪತ್ತಿ ತಂತ್ರಜ್ಞಾನ (ART) ಚಿಕಿತ್ಸಾ ವಿಧಾನಗಳನ್ನು ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ (AB-PMJAY-CM’s ArK) ಯೋಜನೆಯ ವ್ಯಾಪ್ತಿಗೆ ಸೇರ್ಪಡೆಗೊಳಿಸಿದೆ.

ಇದರಿಂದ ಇನ್ಮುಂದೆ ಐವಿಎಫ್ (IVF), ಇಂಟ್ರಾಸೈಟೋಪ್ಲಾಸ್ಮಿಕ್ ಸ್ಪರ್ಮ್ ಇಂಜೆಕ್ಷನ್ (ICSI) ಹಾಗೂ ಫ್ರೋಜನ್ ಎಂಬ್ರಿಯೋ ಟ್ರಾನ್ಸ್‌ಫರ್ (FET) ಸೇರಿದಂತೆ ಹಲವು ಸಂತಾನೋತ್ಪತ್ತಿ ಚಿಕಿತ್ಸೆಗಳು ಯೋಜನೆಯಡಿ ಲಭ್ಯವಾಗಲಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ವಿಧಾನ ಪರಿಷತ್‌ನಲ್ಲಿ ಎಂಎಲ್‌ಸಿ ಡಾ. ಧನಂಜಯ್ ಸರ್ಜಿ ಕೇಳಿದ ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.

ಮೊದಲ ಹಂತದಲ್ಲಿ ಈ ಯೋಜನೆಯನ್ನು ಒಂದು ವರ್ಷದ ಪ್ರಾಯೋಗಿಕ ಯೋಜನೆಯಾಗಿ ಜಾರಿಗೊಳಿಸಲಾಗುತ್ತಿದ್ದು, 120 ಆದ್ಯತಾ ಕುಟುಂಬ (PHH) ಹಾಗೂ ಬಡತನ ರೇಖೆಗಿಂತ ಕೆಳಗಿನ (BPL) ಪಡಿತರ ಚೀಟಿದಾರರಿಗೆ ಇದರ ಪ್ರಯೋಜನ ದೊರೆಯಲಿದೆ.

ಸಂತಾನೋತ್ಪತ್ತಿ ಚಿಕಿತ್ಸೆಗೆ ಹೆಚ್ಚಿನ ಹಣ ಖರ್ಚಾಗುವುದರಿಂದ ಆರ್ಥಿಕವಾಗಿ ದುರ್ಬಲ ಕುಟುಂಬಗಳು ಇಂತಹ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆಯ ವೆಚ್ಚದ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.

ಬಂಜೆತನದಿಂದಾಗಿ ಅನೇಕ ದಂಪತಿಗಳು ಸಾಮಾಜಿಕ ಹಾಗೂ ಭಾವನಾತ್ಮಕ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಆದರೆ ಸಂತಾನೋತ್ಪತ್ತಿ ಚಿಕಿತ್ಸೆಗಳು ದುಬಾರಿಯಾಗಿರುವುದರಿಂದ ಬಹುತೇಕ ಕುಟುಂಬಗಳಿಗೆ ಅವು ಕೈಗೆಟುಕದಂತಿವೆ.

ART ಚಿಕಿತ್ಸಾ ವಿಧಾನಗಳ ವೆಚ್ಚ ಹೆಚ್ಚಾಗಿದ್ದು, ಅನೇಕ ದಂಪತಿಗಳಿಗೆ ಇವುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ಪರಿಗಣಿಸಿರುವ ಸರ್ಕಾರ, ಕರ್ನಾಟಕದಲ್ಲಿ ಈ ಚಿಕಿತ್ಸೆಯನ್ನು ಆರೋಗ್ಯ ಕರ್ನಾಟಕ ಯೋಜನೆಯಡಿ ಜಾರಿಗೆ ತರಲು ನಿರ್ಧರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'Economic D-Day' ಘೋಷಣೆ: Iran ವಿರುದ್ಧ ಅಮೆರಿಕಾ ಆರ್ಥಿಕ ದಿಗ್ಬಂಧನ ಅಸ್ತ್ರ; ಇದು ಆರ್ಥಿಕ ಭಯೋತ್ಪಾದನೆ-‘ಜಗತ್ತನ್ನು ವಸಾಹತು ಮಾಡುವ ಹುನ್ನಾರ’- ಇರಾನ್ ಆಕ್ರೋಶ

ಹಾರ್ಮುಜ್ ಜಲಸಂಧಿ ನಮ್ಮದೇ: ಟ್ರಂಪ್ ಸ್ಫೋಟಕ ಹೇಳಿಕೆ; ನಮ್ಮ ಭೂಪ್ರದೇಶಕ್ಕೆ ಕೈಹಾಕಿದರೆ ಸರ್ವನಾಶ ಗ್ಯಾರಂಟಿ- ಟೆಹ್ರಾನ್ ಖಡಕ್ ವಾರ್ನಿಂಗ್

Somalia ಕರಾವಳಿಯಲ್ಲಿ ಹಡಗುಗಳ ಹೈಜಾಕ್: ಕಡಲ್ಗಳ್ಳರ ವಶದಲ್ಲಿದ್ದ 22 ಮಂದಿ ಭಾರತೀಯರು ಸೇಫ್; ಕೇಂದ್ರ ಸರ್ಕಾರ

ಪ್ರಜ್ವಲ್ ರೇವಣ್ಣ ಪ್ರಕರಣದ ಸಾಕ್ಷಿಗೆ ಬೆದರಿಕೆ: ತನಿಖೆ ನಡೆಸಲು SIT ಗೆ ನ್ಯಾಯಾಲಯದ ಆದೇಶ!

ತೆಲಂಗಾಣ Hazelo Pharmaದಲ್ಲಿ ಭೀಕರ ಅಗ್ನಿ ಅವಘಡ; ಇಬ್ಬರ ದುರ್ಮರಣ, ಎಂಟು ಮಂದಿಗೆ ಗಂಭೀರ ಗಾಯ..!