ಎನ್ ರವಿಕುಮಾರ್ 
ರಾಜ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಕಲಬುರಗಿ DC ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಕೋರ್ಟ್ ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಿದೆ.

ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ 42ನೇ ಅಡಿಷನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACJM) ಸಂದೀಪ್ ಪಾಟೀಲ್ ಅವರು, ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ್ದಾರೆ.

ಕಳೆದ ವರ್ಷ ಕಲಬುರಗಿಯಲ್ಲಿ ನಡೆದ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ ಕಠಿಣ ಕ್ರಮ ಕೈಗೊಂಡಿದ್ದು, ಬಂಧನ ವಾರಂಟ್ ಹೊರಡಿಸಿದೆ.

ಪ್ರಕರಣ ಸಂಬಂಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ರವಿಕುಮಾರ್ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ವಿಚಾರಣೆ ನಡೆಸಿದ್ದ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು. ಅಧೀನ ನ್ಯಾಯಾಲಯದಿಂದ ಸಮನ್ಸ್ ಬಂದಿದ್ದರೂ ಕೋರ್ಟ್‌ಗೆ ಗೈರಾದ ಕಾರಣ ಈಗ ಎಸಿಜೆಎಂ ನ್ಯಾಯಾಲಯವು ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

'2ನೇ ಟೆಸ್ಟ್ ಪಂದ್ಯ ಕೂಡ ಶ್ರೀಲಂಕಾ ಕೈ ಜಾರಿ ಹೋಗಿದೆ': Harsha Bhogle ಹೇಳಿದ್ದೇನು?