ಚಾಮರಾಜನಗರ ಹನೂರ್ ಎನ್ ಕೌಂಟರ್  
ರಾಜ್ಯ

ಚಾಮರಾಜನಗರ ಹನೂರು ಎನ್‌ಕೌಂಟರ್ ಪ್ರಕರಣ ತನಿಖೆ CID ಗೆ ವರ್ಗಾವಣೆ

ಹನೂರು ಎನ್‌ಕೌಂಟರ್ ಮತ್ತು ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ.

ಚಾಮರಾಜನಗರ ಜಿಲ್ಲೆಯ ಹನೂರು ಎನ್‌ಕೌಂಟರ್ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಪರಾಧ ತನಿಖಾ ಇಲಾಖೆ (CID)ಗೆ ವರ್ಗಾಯಿಸಲಾಗಿದೆ. ಈ ಕುರಿತು ರಾಜ್ಯ ಡಿಜಿಪಿ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.

ಹನೂರು ಎನ್‌ಕೌಂಟರ್ ಮತ್ತು ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಎಫ್‌ಐಆರ್‌ಗಳು ದಾಖಲಾಗಿದ್ದವು.

ಎಲ್ಲಾ ಪ್ರಕರಣಗಳ ದಾಖಲೆಗಳು ಹಾಗೂ ಸಂಬಂಧಿತ ದಾಖಲೆಪತ್ರಗಳನ್ನು ಸಿಐಡಿಗೆ ಹಸ್ತಾಂತರಿಸುವಂತೆ ಚಾಮರಾಜನಗರ ಪೊಲೀಸರಿಗೆ ಸೂಚಿಸಲಾಗಿದೆ. ನಾಲ್ಕು ಎಫ್‌ಐಆರ್‌ಗಳ ಪೈಕಿ ಎರಡು ಹನೂರು ಪೊಲೀಸ್ ಠಾಣೆಯಲ್ಲಿ, ಒಂದು ರಾಮಾಪುರದಲ್ಲಿ ಹಾಗೂ ಮತ್ತೊಂದು ಕೊಳ್ಳೇಗಾಲದಲ್ಲಿ ದಾಖಲಾಗಿವೆ.

ಇನ್ನೊಂದೆಡೆ ಇಂದು ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕರು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಮೂವರು ತಮಿಳರು ಕ್ರೂರವಾಗಿ ಹಿಂಸೆಗೊಳಗಾಗಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ. “ಇದು ಕೊಲೆ” ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏನು ಕ್ರಮ ಕೈಗೊಳ್ಳುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ, ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಕೈಗೊಂಡು, ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ವಾಸಿಸುತ್ತಿದ್ದ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಎಂಬ ಮೂವರು ತಮಿಳರನ್ನು ಆಗಸ್ಟ್ 15ರ ಮುಂಜಾನೆ ಕಾವೇರಿ ವನ್ಯಜೀವಿಧಾಮ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದರು ಎಂದು ತಮಿಳು ನಾಡು ಆರೋಪಿಸಿದೆ.

ಘಟನೆಯ ಬಳಿಕ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಈ ಆರೋಪಿತ ಕ್ರೂರ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದು, ಘಟನೆ ಕುರಿತು ಕರ್ನಾಟಕ ಅರಣ್ಯ ಇಲಾಖೆ ನೀಡಿರುವ ವಿವರಣೆ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!