ಕರ್ನಾಟಕ ಲೋಕಸೇವಾ ಆಯೋಗ (KPSC) Online Desk
ರಾಜ್ಯ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಶೋಧ ಕಾರ್ಯಾಚರಣೆ ನಡೆಸಿತ್ತು.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ ಕೇಂದ್ರ ಅಪರಾಧ ತನಿಖಾ ಇಲಾಖೆ(CID) ಅಧಿಕಾರಿಗಳು, ಎಲ್ಲಾ 329 ಅಭ್ಯರ್ಥಿಗಳಿಗೆ ಏಕಾಏಕಿ ನೋಟಿಸ್ ಜಾರಿ ಮಾಡಿದ್ದಾರೆ.

ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಶೋಧ ಕಾರ್ಯಾಚರಣೆ ನಡೆಸಿತ್ತು.

ಕೆಪಿಎಸ್ ಸಿ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದರು. ಅಲ್ಲದೆ ಕೆಲವು ಅಭ್ಯರ್ಥಿಗಳನ್ನು ಇಡಿ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ಕೆಲವರು ಅಕ್ರಮ ನಡೆಸಿರುವುದಾಗಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಇದೀಗ ಅಭ್ಯರ್ಥಿಗಳಿಗೂ ನೋಟಿಸ್ ನೀಡಿದೆ.

ನೋಟಿಸ್ ಪಡೆದಿರುವ ಎಲ್ಲಾ 329 ಅಭ್ಯರ್ಥಿಗಳು ಇಂದೇ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇಡಿ ನಡೆಸಿದ ಪ್ರತ್ಯೇಕ ವಿಚಾರಣೆ ವೇಳೆ ಲಭ್ಯವಾದ ಮಹತ್ವದ ಮಾಹಿತಿ ಮತ್ತು ತಪ್ಪೊಪ್ಪಿಗೆ ಹೇಳಿಕೆಗಳನ್ನು ಆಧರಿಸಿ ಸಿಐಡಿ ಅಧಿಕಾರಿಗಳು ಈ ಜಾಲವನ್ನು ಮತ್ತಷ್ಟು ಆಳವಾಗಿ ತನಿಖೆ ನಡೆಸಲು ಮುಂದಾಗಿದ್ದಾರೆ.

ಈಗಾಗಲೇ 329 ಅಭ್ಯರ್ಥಿಗಳಿಂದ ವಶಪಡಿಸಿಕೊಂಡಿರುವ 658 ಓಎಂಆರ್ ಕಾರ್ಬನ್ ಶೀಟ್‍ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ(FSL) ರವಾನಿಸಲಾಗಿದೆ. ಓಎಂಆರ್ ಶೀಟ್‍ಗಳೊಂದಿಗೆ ಕಾರ್ಬನ್ ಶೀಟ್‍ಗಳನ್ನು ತಾಳೆ ಹಾಕಿ ಪರಿಶೀಲಿಸುವ ಉದ್ದೇಶದಿಂದ ಅವುಗಳನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಲಾಗಿದೆ.

ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಗೋಲ್‌ಮಾಲ್‌ಗೆ ಸಂಬಂಧಿಸಿದಂತೆ ಅಧಿಕಾರಿಗಳು ಅಭ್ಯರ್ಥಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದು, ಮತ್ತಷ್ಟು ಸ್ಫೋಟಕ ಸತ್ಯಗಳು ಹೊರಬೀಳುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ