ಸಮರ್ಥ್ ಶಾಮನೂರು 
ರಾಜ್ಯ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

ನಿನ್ನೆ ಸಂಜೆ ಸಮರ್ಥ್ ಶಾಮನೂರು ಅವರು ಬೆಂಗಳೂರಿನಿಂದ ದಾವಣಗೆರೆಗೆ ಕಾರಿನಲ್ಲಿ ತೆರಳುತ್ತಿದ್ದರು.

ಚಿತ್ರದುರ್ಗ: ದಾವಣಗೆರೆ ಕಾಂಗ್ರೆಸ್ ಶಾಸಕ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆಆರ್‌ ಹಳ್ಳಿ ಗೇಟ್‌ ಬಳಿ ಸೋಮವಾರ ಸಂಜೆ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಶಾಸಕರು ಅಪಾಯದಿಂದ ಪಾರಾಗಿದ್ದಾರೆ.

ನಿನ್ನೆ ಸಂಜೆ ಸಮರ್ಥ್ ಶಾಮನೂರು ಅವರು ಬೆಂಗಳೂರಿನಿಂದ ದಾವಣಗೆರೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಸಂಡೂರು ಮೂಲದ ಸಂದೀಪ್‌ ಎನ್ನುವವರ ಇನೋವಾ ಕಾರು, ಬೆಂಗಳೂರಿನಿಂದ ಹಿರಿಯೂರು ಕಡೆಗೆ ಹೋಗುವಾಗ ಕೆಆರ್‌ ಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಹಿಂಬದಿಯಲ್ಲೇ ಬರುತ್ತಿತ್ತು ಸಮರ್ಥ್ ಅವರ ಕಾರು, ಪಲ್ಟಿಯಾದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಪಲ್ಟಿಯಾದ ಕಾರಿನಲ್ಲಿದ್ದ ಸಂದೀಪ್ (45) ಎಂಬುವವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳು ಸಂದೀಪ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದಲ್ಲಿ ಶಾಸಕ ಸಮರ್ಥ್ ಶಾಮನೂರು ಅವರಿಗೆ ಯಾವುದೇ ಗಾಯಗಳಾಗಿಲ್ಲ. ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಅಪಘಾತದ ನಂತರ ಮತ್ತೊಂದು ಕಾರಿನಲ್ಲಿ ದಾವಣಗೆರೆಗೆ ಪ್ರಯಾಣ ಮುಂದುವರಿಸಿದ್ದಾರೆ.

ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ