ಶೂದ್ರ ಸೇವಾ ಸಂಸ್ಥೆ ಉದ್ಘಾಟಿಸಿದ ಸಿದ್ದರಾಮಯ್ಯ 
ರಾಜ್ಯ

ವಿದ್ಯಾವಂತರಲ್ಲೇ ಹೆಚ್ಚು ಜಾತಿ ಪ್ರೇಮ: ಮನುವಾದಿಗಳಿಂದ ಉದ್ದೇಶಪೂರ್ವಕವಾಗಿ ಚಾತುರ್ವರ್ಣ ವ್ಯವಸ್ಥೆ ಸೃಷ್ಟಿ; ಸಿದ್ದರಾಮಯ್ಯ

ಶೂದ್ರ ವರ್ಗದವರು ಅನೇಕ ವರ್ಷಗಳ ಕಾಲ ಅಕ್ಷರ ಸಂಸ್ಕೃತಿ, ಅವಕಾಶಗಳಿಂದ ದೂರ ಇರುವಂತಾಗಿತ್ತು. ಅವರು ಮೇಲ್ವರ್ಗದವರೊಂದಿಗೆ ಸ್ಪರ್ಧಿಸುವುದು ಅಸಾಧ್ಯ. ಅಕ್ಷರ ವಂಚಿತರಾದ ಅವರಿಗೆ ಅಕ್ಷರ ಕಲಿತವರಿಂದ ಸೋಲಾಗುವುದು ಸಾಮಾನ್ಯ.

ಬೆಂಗಳೂರು: ವಿದ್ಯಾವಂತ ವ್ಯಕ್ತಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಬದಲು ಜಾತಿವಾದ ಪಾಲಿಸುವುದು ಹಾಗೂ ಮೌಢ್ಯ ಮತ್ತು ಮೂಢನಂಬಿಕೆಗಳಿಗೆ ಬದ್ಧರಾಗಿರುವುದು ನಿಜಕ್ಕೂ ದುರದೃಷ್ಟಕರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸಾಮಾಜಿಕ ಸಮಾನತೆ ಮತ್ತು ವೈಚಾರಿಕ ಚಿಂತನೆ ಪ್ರತಿಪಾದಿಸುವ ಶೂದ್ರ ಸೇವಾ ಸಂಸ್ಥೆ ಎಂಬ ಸಂಘಟನೆ ಉದ್ಘಾಟಿಸಿದ ಮಾತನಾಡಿದ ಅವರು, ‘ಚಾತುರ್ವರ್ಣ ವ್ಯವಸ್ಥೆಯನ್ನು ಮನುವಾದಿಗಳು ಈ ದೇಶದಲ್ಲಿ ಉದ್ದೇಶಪೂರ್ವಕಾಗಿ ಸೃಷ್ಟಿಸಿದರು.

ಶೂದ್ರ ವರ್ಗದವರು ಅನೇಕ ವರ್ಷಗಳ ಕಾಲ ಅಕ್ಷರ ಸಂಸ್ಕೃತಿ, ಅವಕಾಶಗಳಿಂದ ದೂರ ಇರುವಂತಾಗಿತ್ತು. ಅವರು ಮೇಲ್ವರ್ಗದವರೊಂದಿಗೆ ಸ್ಪರ್ಧಿಸುವುದು ಅಸಾಧ್ಯ. ಅಕ್ಷರ ವಂಚಿತರಾದ ಅವರಿಗೆ ಅಕ್ಷರ ಕಲಿತವರಿಂದ ಸೋಲಾಗುವುದು ಸಾಮಾನ್ಯ. ನಮ್ಮ ಭಿನ್ನಾಭಿಪ್ರಾಯಗಳ ಪರಿಣಾಮ ಬ್ರಿಟಿಷರೂ ನಮ್ಮನ್ನು ಆಳಿದರು. ಎಲ್ಲ ವರ್ಗಗಳಲ್ಲಿ ಒಗ್ಗಟ್ಟು ಮೂಡಬೇಕು‌’ ಎಂದರು

ಬುದ್ಧ, ಬಸವಣ್ಣ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರಂತಹ ಸುಧಾರಕರು ಸಂವಿಧಾನದಲ್ಲಿ ಕಲ್ಪಿಸಿರುವ ಸಮಾನತಾವಾದಿ ಸಮಾಜವನ್ನು ನಿರ್ಮಿಸುವುದು ಪ್ರಸ್ತುತ ಪೀಳಿಗೆಯು ಮೂಢನಂಬಿಕೆಗಳನ್ನು ತೊರೆದು ವೈಚಾರಿಕತೆಯನ್ನು ಅಳವಡಿಸಿಕೊಳ್ಳದ ಹೊರತು ಅಸಾಧ್ಯ ಎಂದು ಅವರು ಒತ್ತಿ ಹೇಳಿದರು.

ತಮ್ಮ ಅಧಿಕಾರಾವಧಿಯಲ್ಲಿ ಜಾರಿಗೆ ತಂದ ಮೂಢನಂಬಿಕೆ ವಿರೋಧಿ ಕಾನೂನು ಸಮರ್ಪಕವಾಗಿ ಜಾರಿಗೆ ಬಂದಿಲ್ಲ ಎಂದರು. ಏಕೆಂದರೆ ವಿದ್ಯಾವಂತ ಜನರು ಇನ್ನೂ ಸಂಪ್ರದಾಯವನ್ನು ಅನುಸರಿಸುತ್ತಾರೆ. ಎಲ್ಲಾ ಹಿಂದುಳಿದ ವರ್ಗಗಳು ಒಂದಾಗಬೇಕೆಂದು ಅವರು ಒತ್ತಾಯಿಸಿದರು, ರಾಜ್ಯ ಖಾತರಿ ಯೋಜನೆಗಳು ಅಸಮಾನತೆಯ ನಿರ್ಮೂಲನೆಗೆ ಸಕ್ರಿಯವಾಗಿ ಸಹಾಯ ಮಾಡುತ್ತವೆ . ವ್ಯವಸ್ಥೆ ಬದಲಾವಣೆಗೆ ಎಲ್ಲರ ಪ್ರಯತ್ನ ಅಗತ್ಯ. ಅದಕ್ಕೆ ಸಮಯವೂ ಬೇಕು. ಸರಿಯಾದ ಮಾರ್ಗದಲ್ಲಿ ಹೋದಾಗಷ್ಟೇ ಯಶ ಸಿಗುತ್ತದೆ’ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video