ಸಭೆಯಲ್ಲಿ ಸಚಿವ ಕೃಷ್ಣ ಭೈರೇಗೌಡ  
ರಾಜ್ಯ

'ಎಂ ಜಿ ರಸ್ತೆಗೂ ಕೊಳಗೇರಿ ಪ್ರದೇಶಕ್ಕೂ ತೆರಿಗೆ ಒಂದೇನಾ? ನನ್ನ ಮುಂದೆ ಅತಿ ಜಾಣ್ಮೆ ತೋರಿಸಬೇಡಿ' : ಅಧಿಕಾರಿಗಳ ಮೇಲೆ ರೇಗಿದ ಸಚಿವ ಕೃಷ್ಣ ಭೈರೇಗೌಡ ; Video

ಕರ್ನಾಟಕ ಹಾಗೂ ದೇಶಕ್ಕೆ ಬೆಂಗಳೂರು ‘ಚಿನ್ನದ ಮೊಟ್ಟೆ ಇಡುವ ಕೋಳಿ’ಯಂತಿದ್ದು, ನಗರದ ಅಭಿವೃದ್ಧಿಯನ್ನು ಮತ್ತಷ್ಟು ಸುಧಾರಿಸುವುದರ ಜೊತೆಗೆ ಅದನ್ನು ರಕ್ಷಿಸುವುದು ಪ್ರತಿಯೊಬ್ಬರ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದರು.

ಅಧಿಕಾರಿಗಳು ತಮ್ಮ ಎಲ್ಲ ನಿರ್ಧಾರಗಳು ಹಾಗೂ ಕಾರ್ಯಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಕೇಂದ್ರದಲ್ಲಿರಿಸಿಕೊಳ್ಳಬೇಕು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಕರೆ ನೀಡಿದರು. ಬೆಂಗಳೂರಿನ ಅಭಿವೃದ್ಧಿಗೆ ವೃತ್ತಿಪರ ಪ್ರಾಮಾಣಿಕತೆ, ಬಲಿಷ್ಠ ವ್ಯವಸ್ಥೆಗಳು ಹಾಗೂ ಉತ್ತಮ ಆಡಳಿತದ ಅಗತ್ಯವಿದೆ ಎಂದು ಅವರು ಹೇಳಿದರು.

ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಕೃಷ್ಣ ಭೈರೇಗೌಡ, ತಮ್ಮ ಜ್ಞಾನ, ಅನುಭವ ಹಾಗೂ ಪರಿಣತಿಯನ್ನು ಬಳಸಿಕೊಂಡು ಉತ್ತಮ ಪರಿಹಾರಗಳನ್ನು ಕಂಡುಕೊಳ್ಳಬೇಕು ಮತ್ತು ಸಾರ್ವಜನಿಕ ಆಡಳಿತದ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಹೇಳಿದರು.

ಸೂಕ್ತ ತಪಾಸಣೆ ಹಾಗೂ ನಿಯಂತ್ರಣ ವ್ಯವಸ್ಥೆಗಳು ಅತ್ಯಗತ್ಯವಾಗಿದ್ದು, ನಾಗರಿಕರಿಗೆ ಅನುಕೂಲವಾಗುವ ಕೆಲಸಗಳನ್ನು ಕೈಗೊಳ್ಳುವುದೇ ಮುಖ್ಯ ಗುರಿಯಾಗಬೇಕು ಎಂದು ಅವರು ತಿಳಿಸಿದರು.

ಎಂಜಿ ರಸ್ತೆಗೆ ಮತ್ತು ಕೊಳಗೇರಿ ಪ್ರದೇಶಕ್ಕೆ ವಾಣಿಜ್ಯ ತೆರಿಗೆ ಒಂದೇನಾ? ನನ್ನ ಮುಂದೆ ಅತಿಯಾದ ಜಾಣ್ಮೆ ತೋರಿಸಬೇಡಿ -ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರು Greater Bengaluru Authority (GBA) ವ್ಯಾಪ್ತಿಯ ಐದು ನಿಗಮಗಳ ಪರಿಶೀಲನಾ ಸಭೆಯಲ್ಲಿ ಚಾಮರಾಜಪೇಟೆ ಕಂದಾಯ ಕಚೇರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನನಗೆ ಯಾವುದೇ ವೈಯಕ್ತಿಕ ಹಿತಾಸಕ್ತಿಗಳಿಲ್ಲ. ಸಾರ್ವಜನಿಕ ಕೆಲಸಗಳು ಸರಿಯಾಗಿ ನಡೆಯಬೇಕು ಎಂಬುದಷ್ಟೇ ನನಗೆ ಮುಖ್ಯ. ಅಧಿಕಾರಿಗಳು ಕೈಗೊಳ್ಳುವ ಪ್ರತಿಯೊಂದು ನಿರ್ಧಾರವೂ ಅಂತಿಮವಾಗಿ ಉತ್ತಮ ಆಡಳಿತ ನೀಡಲು ಹಾಗೂ ಬೆಂಗಳೂರನ್ನು ಇನ್ನಷ್ಟು ಉತ್ತಮ ನಗರವನ್ನಾಗಿ ರೂಪಿಸಲು ನೆರವಾಗಬೇಕು ಎಂದು ಅವರು ಹೇಳಿದರು.

ತಮ್ಮ ಆಡಳಿತಾತ್ಮಕ ಜವಾಬ್ದಾರಿಗಳ ಅವಧಿಯಲ್ಲಿ ಇಲಾಖೆಗಳ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಅವುಗಳ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಸುಧಾರಣೆಗಳನ್ನು ಜಾರಿಗೆ ತರಲು ಪ್ರಯತ್ನಿಸಿರುವುದಾಗಿ ಹೇಳಿದರು.

ಸವಾಲಿನ ಜವಾಬ್ದಾರಿಗಳನ್ನು ವಹಿಸಿಕೊಳ್ಳುವ ಅಧಿಕಾರಿಗಳು, ಆ ಜವಾಬ್ದಾರಿಗಳನ್ನು ಮತ್ತೊಬ್ಬರಿಗೆ ಹಸ್ತಾಂತರಿಸುವ ವೇಳೆಗೆ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಅರ್ಥಪೂರ್ಣ ಸುಧಾರಣೆಗಳು ಗೋಚರಿಸುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಅಧಿಕಾರಿಗಳು ಹೆಮ್ಮೆಪಡುವಂತಹ ಹಾಗೂ ಸಮಾಜದ ಗೌರವ ಗಳಿಸುವಂತಹ ವ್ಯವಸ್ಥೆಗಳನ್ನು ನಿರ್ಮಿಸುವ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು. ಇದೇ ರೀತಿಯ ವಿಧಾನವನ್ನು ಬೆಂಗಳೂರಿನ ಅಭಿವೃದ್ಧಿಗೂ ಅನ್ವಯಿಸಿದರೆ, ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಹಕಾರದಿಂದ ನಗರದಲ್ಲಿ ಅರ್ಥಪೂರ್ಣ ಹಾಗೂ ಶಾಶ್ವತ ಸುಧಾರಣೆಗಳನ್ನು ತರಲು ಸಾಧ್ಯ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಎಲ್ಲಕ್ಕಿಂತಲೂ ಸಾರ್ವಜನಿಕ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡೋಣ, ನಾವು ಕಾರ್ಯನಿರ್ವಹಿಸುವ ವ್ಯವಸ್ಥೆಗಳನ್ನು ಬಲಪಡಿಸೋಣ ಮತ್ತು ನಾವು ಕಂಡುಕೊಂಡ ಬೆಂಗಳೂರಿಗಿಂತ ಉತ್ತಮ ಬೆಂಗಳೂರನ್ನು ಮುಂದಿನ ಪೀಳಿಗೆಗೆ ಬಿಟ್ಟುಹೋಗೋಣ ಎಂದು ಹೇಳಿದರು.

ಕರ್ನಾಟಕ ಮತ್ತು ದೇಶಕ್ಕೆ ಬೆಂಗಳೂರು ‘ಚಿನ್ನದ ಮೊಟ್ಟೆ ಇಡುವ ಕೋಳಿ’: ಕೃಷ್ಣ ಭೈರೇಗೌಡ ಕರ್ನಾಟಕ ಹಾಗೂ ದೇಶಕ್ಕೆ ಬೆಂಗಳೂರು ‘ಚಿನ್ನದ ಮೊಟ್ಟೆ ಇಡುವ ಕೋಳಿ’ಯಂತಿದ್ದು, ನಗರದ ಅಭಿವೃದ್ಧಿಯನ್ನು ಮತ್ತಷ್ಟು ಸುಧಾರಿಸುವುದರ ಜೊತೆಗೆ ಅದನ್ನು ರಕ್ಷಿಸುವುದು ಪ್ರತಿಯೊಬ್ಬರ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

Greater Bengaluru Authority (GBA) ವ್ಯಾಪ್ತಿಯ ಐದು ನಿಗಮಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಬೆಂಗಳೂರಿನ ಬೆಳವಣಿಗೆಯನ್ನು ಸಂರಕ್ಷಿಸುವುದರ ಜತೆಗೆ ನಗರದಲ್ಲಿ ಮತ್ತಷ್ಟು ಸುಧಾರಣೆಗಳನ್ನು ತರಲು ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!