ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ 
ರಾಜ್ಯ

ಪರಪ್ಪನ ಅಗ್ರಹಾರ ವಿಡಿಯೋ ತೋರ್ಸಿದ್ದೇ ತೋರ್ಸಿದ್ದು, ಗೃಹ ಇಲಾಖೆ ಯಾಕ್ರೀ ನಡೆಸ್ತಿದ್ದೀರಿ: RSS ಅಕೌಂಟ್ ಕೇಳೋದು ಬಿಟ್ಟು ರಾಜಿನಾಮೆ ಕೊಡಿ; HDK

ರಾಜ್ಯದಿಂದ ಆತ ಓಡಿ ಹೋಗಲು ನೀವೇ ಅವಕಾಶ ಮಾಡಿಕೊಟ್ಟಿದ್ದೀರಿ, ಏನಾದರೂ ನಿಮಗೆ ನಾಲಗೆಗೆ ಅಲ್ಪಸ್ವಲ್ಪ ಗೌರವ ಕೊಡೋದಿದ್ದೆ ಆದರೆ ಕೂಡಲೇ ರಾಜಿನಾಮೆ ನೀಡಿ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ವಿಡಿಯೋವನ್ನು ವಾರಗಟ್ಟಲೇ ತೋರ್ಸಿದ್ದೇ ತೋರಿಸಿದ್ದು, ಗೃಹ ಇಲಾಖೆಯನ್ನು ಸ್ವಚ್ಛ ಮಾಡ್ತೀನಿ, ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡುವುದಿಲ್ಲ ಅಂತಾ ಹೇಳಿದ್ರಿ. ಆದರೆ ಏನನ್ನೂ ಮಾಡಲಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಪ್ರಿಯಾಂಕ್ ಖರ್ಗೆ ವಿರುದ್ಧ ಹರಿ ಹಾಯ್ದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರ್ಯಾರ ಧ್ವನಿಯನ್ನು ಹೇಗೆ ಅಡಗಿಸಿಬೇಕೆಂದು ಪ್ಲಾನ್ ಮಾಡ್ತೀದ್ದೀರಾ. ನಮ್ಮ ಧ್ವನಿಯನ್ನು ನೀವು ನಿಲ್ಲಿಸಲು ಆಗೋದಿಲ್ಲ, ಕೆಪಿಎಸ್ ಸಿ ಹಗರಣ ಗ್ಯಾನೇಂದ್ರ ಎಲ್ಲಿದ್ದಾನೋ ಗೊತ್ತಿಲ್ಲ ಎಂದು ಹೇಳುತ್ತಿರಲ್ಲ, ಹಾಗಿದ್ದ ಮೇಲೆ ಗೃಹ ಇಲಾಖೆಯನ್ನು ಏಕೆ ನಡೆಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಿಂದ ಆತ ಓಡಿ ಹೋಗಲು ನೀವೇ ಅವಕಾಶ ಮಾಡಿಕೊಟ್ಟಿದ್ದೀರಿ, ಏನಾದರೂ ನಿಮಗೆ ನಾಲಗೆಗೆ ಅಲ್ಪಸ್ವಲ್ಪ ಗೌರವ ಕೊಡೋದಿದ್ದೆ ಆದರೆ ಕೂಡಲೇ ರಾಜಿನಾಮೆ ನೀಡಿ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಕಳೆದ ಹಲವು ದಿನಗಳಿಂದ ಏನು ನಡೆಯುತ್ತಿದೆ ಎಂಬುದನ್ನು ನಾನು ಗಮನಿಸುತ್ತಿದ್ದೇನೆ.

ಪಶುವೈದ್ಯಕೀಯ ವೈದ್ಯ ಹುದ್ದೆಗೆ, ನೇಮಕಾತಿ ಮಾಡಲು ಮತ್ತು ಕೆಪಿಎಸ್‌ಸಿ ಪ್ರಕ್ರಿಯೆಯಲ್ಲಿ ಯಶಸ್ವಿಯಾಗಲು ಅವರು 80 ಲಕ್ಷ ರೂ. ನಿಗದಿಪಡಿಸಿದ್ದಾರೆ ಎಂದು ಯುವಕನೊಬ್ಬ ಆರೋಪಿಸಿದ್ದಾರೆ. ಎಂದು ಕುಮಾರಸ್ವಾಮಿ ಹೇಳಿದರು.

ಕಳೆದ ವಾರ ಜಾರಿ ನಿರ್ದೇಶನಾಲಯವು ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿದೆ ಎಂದು ಅವರು ಹೇಳಿದರು. ಕರ್ನಾಟಕ ರಾಜ್ಯ ಸರಿಪಡಿಸಲಿಕ್ಕೆ ಯುವಕರು ನಿರುದ್ಯೋಗದ ವಿರುದ್ಧ ಬೀದಿಗೆ ಇಳಿದು ಹೋರಾಟ ಮಾಡಬೇಕು. ಸರ್ಕಾರದ ವಿರುದ್ಧ ಹೋರಾಟಕ್ಕೆ ಯುವಕರಿಗೆ ಕುಮಾರಸ್ವಾಮಿ ಕರೆ ನೀಡಿದ್ದಾರೆ.

ಆರ್‌ಎಸ್‌ಎಸ್ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕಾಗಿ ಅಧಿಕಾರಿಗಳ ಅಮಾನತುಗೆ ಪ್ರತಿಕ್ರಿಯಿಸಿದ ಅವರು, "ಅದು ವಿಷಯವಲ್ಲ. ಆರ್‌ಎಸ್‌ಎಸ್ ಮೆರವಣಿಗೆಯಲ್ಲಿ ಭಾಗವಹಿಸುವ ಮೂಲಕ ಅವರು ಯಾವ ಪ್ರಮುಖ ತಪ್ಪನ್ನು ಮಾಡಿದ್ದಾರೆ? ಅವರು ರಾಜ್ಯಕ್ಕೆ ಹಾನಿ ಮಾಡುತ್ತಿಲ್ಲ.

ಆರ್‌ಎಸ್‌ಎಸ್ ಸಭೆಗೆ ಹಾಜರಾಗುವುದರಿಂದ ಯಾವುದೇ ಹಾನಿಯಾಗಿದೆಯೇ? ಕರ್ನಾಟಕದಲ್ಲಿ ಯಾವುದೇ ಹಿಂಸಾಚಾರ ನಡೆದಿದೆಯೇ? ಎಂದು ಪ್ರಶ್ನಿಸಿದ್ದಾರೆ. ಪ್ರತಿನಿತ್ಯ ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಬದಲು ರಾಜ್ಯದ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಎಂದು ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ರಕ್ಷಾ ಬಂಧನದ ಇತಿಹಾಸ ಏನು? ಸಹೋದರರಿಗೆ ರಾಖಿ ಕಟ್ಟುವುದರ ಮಹತ್ವ ತಿಳಿದುಕೊಳ್ಳಿ!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು