ಪ್ಯಾಂಗೋಲಿನ್ 
ರಾಜ್ಯ

'ಹನೂರು ಎನ್‌ಕೌಂಟರ್'ಗೆ ಬಿಗ್ ಟ್ವಿಸ್ಟ್: ತನಿಖೆಯಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಪ್ಯಾಂಗೋಲಿನ್ ಕಳ್ಳಸಾಗಣೆ ಜಾಲ ಪತ್ತೆ!

ಎನ್‌ಕೌಂಟರ್ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು, ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ಯಾಂಗೋಲಿನ್-ಕಳ್ಳಸಾಗಣೆ ಜಾಲವನ್ನು ಪತ್ತೆ ಮಾಡಿದ್ದಾರೆ.

ಮೈಸೂರು: ಕರ್ನಾಟಕದ ಅರಣ್ಯ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟ ಹನೂರು ಕಾಡಿನ ವಿವಾದಾತ್ಮಕ ಎನ್‌ಕೌಂಟರ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು, ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ಯಾಂಗೋಲಿನ್-ಕಳ್ಳಸಾಗಣೆ ಜಾಲವನ್ನು ಪತ್ತೆ ಮಾಡಿದ್ದಾರೆ.

ತನಿಖಾ ತಂಡದ ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳ ಪ್ರಕಾರ, ಚಾಮರಾಜನಗರ-ತಮಿಳುನಾಡು ಗಡಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೇಟೆಗಾರರು, ನಿರ್ವಾಹಕರು ಮತ್ತು ಕೊರಿಯರ್‌ಗಳ ಜಾಲವನ್ನು ನಿರ್ಮಿಸಿದ್ದು, ಮುನಿಯಾಂಡಿ ಎಂದು ಗುರುತಿಸಲಾದ ವ್ಯಕ್ತಿ ಇದರ ಕಿಂಗ್‌ಪಿನ್ ಎಂದು ಹೇಳಿದ್ದಾರೆ.

ಈ ಜಾಲವು ಸ್ಥಳೀಯ ವನ್ಯಜೀವಿ ಬೇಟೆಯನ್ನು ಮೀರಿ ವಿಸ್ತರಿಸಿದ್ದು, ಅಳಿವಿನಂಚಿನಲ್ಲಿರುವ ನಿರುಪದ್ರವಿ ಚಿಪ್ಪುಹಂದಿ(ಪ್ಯಾಂಗೋಲಿನ್) ಮತ್ತು ಇತರ ಅವಶೇಷಗಳನ್ನು ವಿದೇಶಿ ಮಾರುಕಟ್ಟೆಗಳಿಗೆ ಸಾಗಿಸುವುದನ್ನು ಒಳಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಹನೂರು ತನಿಖೆಗೆ ಸಂಬಂಧಿಸಿದಂತೆ ಹೊರಹೊಮ್ಮುತ್ತಿರುವ ಮಾಹಿತಿಯ ಪ್ರಕಾರ, ಮುನಿಯಾಂಡಿ ದೊಡ್ಡ ಕಳ್ಳಸಾಗಣೆ ಜಾಲದಲ್ಲಿ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಶಂಕಿಸಲಾಗಿದೆ. ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಸಹಚರರನ್ನು ಬಳಸಿಕೊಂಡು ಪ್ಯಾಂಗೋಲಿನ್‌ಗಳನ್ನು ಸಂಗ್ರಹಿಸಲು ಮತ್ತು ಅವುಗಳ ಅವಶೇಷಗಳನ್ನು ಗುಪ್ತ ಮಾರ್ಗಗಳ ಮೂಲಕ ಸಾಗಿಸಲು ಸಹಾಯ ಮಾಡುತ್ತಿದ್ದಾರೆ ಎನ್ನಲಾಗಿದೆ.

ಈ ಜಾಲದೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳಲ್ಲಿ ಒಬ್ಬರಾದ ರಾಬರ್ಟ್ ಪಿಂಟೊ ಪೆರಿಯನಾಯಗನ್ ಮೇಲೆ ತನಿಖಾಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ. ಎಂಎಸ್ಸಿ ಪದವಿ ಪಡೆದಿರುವ ಪಿಂಟೊ ಮುನಿಯಾಂಡಿಯೊಂದಿಗೆ ನಿಕಟ ಸಂಬಂಧ ಹೊಂದಿದ್ದಾನೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ತನಿಖಾಧಿಕಾರಿಗಳಿಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ಪ್ರಾಣಿಗಳನ್ನು ಬೇಟೆಯಾಡಿದ ನಂತರ ಪ್ಯಾಂಗೋಲಿನ್ ಅವಶೇಷಗಳನ್ನು ಸ್ವೀಕರಿಸಲು ಮತ್ತು ಮರೆಮಾಚಲು ಮುನಿಯಾಂಡಿ ಪಿಂಟೊಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಮುಂದಿನ ಸಾಗಣೆಗಾಗಿ ಇತರ ಗುಪ್ತ ಸ್ಥಳಗಳಿಗೆ ಸ್ಥಳಾಂತರಿಸುವ ಮೊದಲು ಅವಶೇಷಗಳನ್ನು ಪಿಂಟೊ ಅವರ ನಿವಾಸದಲ್ಲಿರುವ ನೀರಿನ ಸಂಪ್‌ನಲ್ಲಿ ರಹಸ್ಯವಾಗಿ ಸಂಗ್ರಹಿಸಲಾಗಿದೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

2019- 2023 ರವರೆಗೆ MUDA ದಲ್ಲಿ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು: ನಿವೇಶನ ಪಡೆದವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 472ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!