ಪ್ರಹ್ಲಾದ್ ಜೋಶಿ  
ರಾಜ್ಯ

KPSC ಹಗರಣದಲ್ಲಿ ಸರ್ಕಾರ ಪಾಲುದಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ; Video

ಅಧಿಕಾರಿ ಗಂಗ್ವಾರ್ ನಾಪತ್ತೆಯಾಗಿದ್ದು, ಇದೀಗ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಸರ್ಕಾರದ ಗಮನಕ್ಕೆ ಬಾರದೆ ಹಿರಿಯ ಅಧಿಕಾರಿಯೊಬ್ಬರು ಹೇಗೆ ನಾಪತ್ತೆಯಾಗಲು ಸಾಧ್ಯ ಎಂದು ಪ್ರಶ್ನಿಸಿದರು. ರಾಜ್ಯದ ಆಡಳಿತ ಯಂತ್ರವೇ ಅವರನ್ನು ರಕ್ಷಿಸುವಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದರು.

ಬೆಂಗಳೂರು: KPSC ನೇಮಕಾತಿ ಹಗರಣಕ್ಕೆ ಸಂಬಂಧ ಹೊಂದಿದ್ದಾರೆ ಎನ್ನಲಾದ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಕಾಂಗ್ರೆಸ್ ಸರ್ಕಾರ ರಕ್ಷಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

ಅಧಿಕಾರಿ ಗಂಗ್ವಾರ್ ನಾಪತ್ತೆಯಾಗಿದ್ದು, ಇದೀಗ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಸರ್ಕಾರದ ಗಮನಕ್ಕೆ ಬಾರದೆ ಹಿರಿಯ ಅಧಿಕಾರಿಯೊಬ್ಬರು ಹೇಗೆ ನಾಪತ್ತೆಯಾಗಲು ಸಾಧ್ಯ ಎಂದು ಪ್ರಶ್ನಿಸಿದರು. ರಾಜ್ಯದ ಆಡಳಿತ ಯಂತ್ರವೇ ಅವರನ್ನು ರಕ್ಷಿಸುವಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದರು.

ಈ ವಿಚಾರದಲ್ಲಿ ಸರ್ಕಾರದ ಪಾತ್ರವಿದೆ. ಸರ್ಕಾರವೇ ಇದರಲ್ಲಿ ಪಾಲುದಾರ. ಈ ಹಗರಣದಿಂದ ಸರ್ಕಾರವೇ ಲಾಭ ಪಡೆದಿದೆ ಎಂದು ಪ್ರಹ್ಲಾದ್ ಜೋಶಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆರೋಪಿಸಿದರು.

ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆ ನಡೆದ ಸಂದರ್ಭದಲ್ಲಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಕರ್ನಾಟಕ ಲೋಕಸೇವಾ ಆಯೋಗದ (KPSC) ಪರೀಕ್ಷಾ ನಿಯಂತ್ರಕರಾಗಿದ್ದರು. ಈ ನೇಮಕಾತಿಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಗಂಗ್ವಾರ್ ಅವರಿಗೆ ಸಂಬಂಧಿಸಿದ ಬೆಂಗಳೂರಿನ ಹಾಗೂ ಉತ್ತರ ಪ್ರದೇಶದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿತ್ತು. ಉದ್ಯೋಗಾಕಾಂಕ್ಷಿಗಳಿಂದ ಭಾರಿ ಮೊತ್ತದ ಹಣವನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂಬ ಆರೋಪಗಳೂ ಕೇಳಿಬಂದಿವೆ.

ED ಅಥವಾ CID ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರೆ, ಇಡೀ ಸರ್ಕಾರದ ಹಗರಣ ಬಯಲಾಗುತ್ತದೆ. ಇಂದು ಸರ್ಕಾರದಲ್ಲಿ ಕುಳಿತಿರುವ ಅನೇಕರು ಸಿಕ್ಕಿಬೀಳುತ್ತಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

2019- 2023 ರವರೆಗೆ MUDA ದಲ್ಲಿ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು: ನಿವೇಶನ ಪಡೆದವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!