ಯತೀಂದ್ರ ಸಿದ್ದರಾಮಯ್ಯ 
ರಾಜ್ಯ

2019- 2023 ರವರೆಗೆ MUDA ದಲ್ಲಿ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು: ನಿವೇಶನ ಪಡೆದವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್!

ಸಂಪೂರ್ಣ ಆದೇಶವನ್ನ ನಾವು ಪ್ರಾಧಿಕಾರಕ್ಕೆ ಕಳುಹಿಸಿದ್ದೇವೆ. 2018 ರ ಹಿಂದೆ ಸೈಟು ಪಡೆದಿರುವ ಬಗ್ಗೆಯೂ ಪರಿಶೀಲನೆ ನಡೆದಿದೆ. ಅಲ್ಲಿ ಅಕ್ರಮಗಳಾಗಿದ್ದರೇ ಅವುಗಳನ್ನು ರದ್ದು ಮಾಡುತ್ತೇವೆ

ಮೈಸೂರು: 2019 ರಿಂದ 2023ರ ವರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಲ್ಲಿ ಹಂಚಿಕೆಯಾಗಿರುವ ಎಲ್ಲಾ ಸೈಟುಗಳನ್ನು ರದ್ದುಪಡಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಡಾ ಸೈಟು ಹಂಚಿಕೆ ಹಗರಣ ಸಂಬಂಧ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ದಿಂದ 50:50 ಅನುಪಾತದಲ್ಲಿ ಸೈಟು ಪಡೆದ ಗ್ರಾಹಕರಿಗೆ ಶಾಕ್‌ ಕೊಟ್ಟಿದ್ದಾರೆ. 2019 ರಿಂದ 2023ರ ವರೆಗಿನ ಎಲ್ಲಾ 50:50 ಸೈಟುಗಳನ್ನ ರದ್ದುಪಡಿಸಲಾಗಿದೆ. 1,100 ಕ್ಕೂ ಸೈಟುಗಳನ್ನ ರದ್ದುಮಾಡಲಾಗಿದೆ ಎಂದಿದ್ದಾರೆ.

ಸಂಪೂರ್ಣ ಆದೇಶವನ್ನ ನಾವು ಪ್ರಾಧಿಕಾರಕ್ಕೆ ಕಳುಹಿಸಿದ್ದೇವೆ. 2018 ರ ಹಿಂದೆ ಸೈಟು ಪಡೆದಿರುವ ಬಗ್ಗೆಯೂ ಪರಿಶೀಲನೆ ನಡೆದಿದೆ. ಅಲ್ಲಿ ಅಕ್ರಮಗಳಾಗಿದ್ದರೇ ಅವುಗಳನ್ನು ರದ್ದು ಮಾಡುತ್ತೇವೆ. ರಸ್ತೆಗೆ ತಮ್ಮ ಜಮೀನು ಕೊಟ್ಟು ಪರಿಹಾರ ಪಡೆದವರು ಕೂಡ ನಿವೇಶನ ಪಡೆದಿದ್ದಾರೆ. ಸಾಕಷ್ಟು ಅಕ್ರಮ ನಡೆದಿದೆ, ಹೀಗಾಗಿ ಎಲ್ಲವನ್ನೂ ರದ್ದು ಮಾಡಿದ್ದೇವೆ ಎಂದು ಸಚಿವರು ಹೇಳಿದ್ದಾರೆ.

50:50 ಸೈಟುಗಳು ಮತ್ತು ಸೈಟುಗಳಲ್ಲಿ ಮನೆ ಕಟ್ಟಿದವರ ಲಿಸ್ಟ್ ತರಿಸುತ್ತಿದ್ದೇನೆ. ಸದ್ಯಕ್ಕೆ ಎಲ್ಲವನ್ನೂ ರದ್ದು ಮಾಡಲಾಗಿದೆ. ಕಾನೂನಾತ್ಮಕ ಹೋರಾಟ ಇರುವ ಸೈಟುಗಳ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ರಕ್ಷಾ ಬಂಧನದ ಇತಿಹಾಸ ಏನು? ಸಹೋದರರಿಗೆ ರಾಖಿ ಕಟ್ಟುವುದರ ಮಹತ್ವ ತಿಳಿದುಕೊಳ್ಳಿ!