ಬೆಂಗಳೂರು ಪೊಲೀಸರು 
ರಾಜ್ಯ

ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಮಾಗಡಿ ರಸ್ತೆಯಲ್ಲಿ ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ, Video!

ಬೆಂಗಳೂರು ನಗರ ಪೊಲೀಸ್ ಗಸ್ತು ತಂಡವು ಮಾಗಡಿ ರಸ್ತೆಯಲ್ಲಿ ಹಠಾತ್ ಹೃದಯಾಘಾತದಿಂದ ಬಳಲುತ್ತಿದ್ದ 34 ವರ್ಷದ ಬೈಕ್ ಸವಾರನಿಗೆ CPR ಮಾಡುವ ಮೂಲಕ ಜೀವವನ್ನು ಉಳಿಸಿದೆ.

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಗಸ್ತು ತಂಡವು ಮಾಗಡಿ ರಸ್ತೆಯಲ್ಲಿ ಹಠಾತ್ ಹೃದಯಾಘಾತದಿಂದ ಬಳಲುತ್ತಿದ್ದ 34 ವರ್ಷದ ಬೈಕ್ ಸವಾರನಿಗೆ CPR ಮಾಡುವ ಮೂಲಕ ಜೀವವನ್ನು ಉಳಿಸಿದೆ.

​ಮಾಗಡಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅಗ್ನಿಶಾಮಕ ಠಾಣೆಯ ಬಳಿ ಈ ಘಟನೆ ಸಂಭವಿಸಿದೆ. 34 ವರ್ಷದ ರವಿ ಎಂಬುವರು ಬೈಕ್ ನಲ್ಲಿ ಹೋಗುತ್ತಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಬೈಕ್ ಅನ್ನು ರಸ್ತೆ ಪಕ್ಕ ನಿಲ್ಲಿಸಿ ಕೆಳಗೆ ಕುಸಿದು ಬಿದ್ದಿದ್ದಾರೆ.

ಹೊಯ್ಸಳ-88 ವಾಹನದಲ್ಲಿ ಗಸ್ತು ತಿರುಗುತ್ತಿದ್ದ ಸಿಬ್ಬಂದಿ ರವಿ ಕುಸಿದು ಬೀಳುತ್ತಿರುವುದನ್ನು ಗಮನಿಸಿದರು. ಪರಿಸ್ಥಿತಿಯ ತೀವ್ರತೆಯನ್ನು ಗುರುತಿಸಿದ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಸಚ್ಚಿದಾನಂದಮೂರ್ತಿ ಮತ್ತು ಹೆಡ್ ಕಾನ್‌ಸ್ಟೆಬಲ್ ಬಸವರಾಜು ಸ್ಥಳಕ್ಕೆ ಧಾವಿಸಿ ತಕ್ಷಣ ಸಿಪಿಆರ್ ನೀಡಲು ಪ್ರಾರಂಭಿಸಿದರು. ಸಕಾಲಿಕ ನೆರವು ರವಿಯನ್ನು ಸ್ಥಿರಗೊಳಿಸಲು ಸಹಾಯ ಮಾಡಿತು. ರವಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಮೃತರ ಸಂಖ್ಯೆ 675ಕ್ಕೆ ಏರಿಕೆ; ರಾಸುವಾ ಜಲವಿದ್ಯುತ್ ಯೋಜನೆ ಸ್ಥಳದಿಂದ ನಾಲ್ವರು ಭಾರತೀಯರ ರಕ್ಷಣೆ!

ಕಾರವಾರ ಮೆಡಿಕಲ್ ಕಾಲೇಜು, ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಗೆ ರಾಮಕೃಷ್ಣ ಹೆಗಡೆ ಹೆಸರು: ಸಿಎಂ ಘೋಷಣೆ

ಸ್ಮಾರ್ಟ್ ಫೋನ್ ವಿಚಾರವಾಗಿ ಘರ್ಷಣೆ: ತಂದೆಗೆ ಭಯಪಟ್ಟು ಗುಜರಾತ್ ನಿಂದ ಕರ್ನಾಟಕಕ್ಕೆ ನಾಲ್ವರು ಸಹೋದರಿಯರು ಪರಾರಿ!

ಹಾಸನದಲ್ಲಿ ಜಿಲ್ಲಾಧಿಕಾರಿ ದಬ್ಬಾಳಿಕೆ: ಅಧಿಕಾರಿಗಳು ಕೆಲಸ ಮಾಡುವುದಕ್ಕೆ ಆಗ್ತಿಲ್ಲ, ರಿಪೇರಿ ಮಾಡೋದು ಗೊತ್ತಿದೆ- ಹೆಚ್ ಡಿ ರೇವಣ್ಣ ಮತ್ತೆ ಗರಂ!

ವೈಟ್​ಫೀಲ್ಡ್ ಠಾಣೆಯಲ್ಲ 'ಡಾರ್ಕ್' ಫೀಲ್ಡ್ ಠಾಣೆ: ಹಿಂದೂ ಕಾರ್ಯಕರ್ತನ ಬಂಧನ ಸಂಬಂಧ ACP, DCP ವಿರುದ್ದ ಜಡ್ಜ್ ಗರಂ, Video!