ಜ್ಞಾನೇಂದ್ರ ಕುಮಾರ್ online desk
ರಾಜ್ಯ

KPSC ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

ಜಾರಿ ನಿರ್ದೇಶನಾಲಯ ಈ ಹಿಂದೆ ಕೆಪಿಎಎಸ್ ಮಾಜಿ ಅಧ್ಯಕ್ಷ, ಸದಸ್ಯರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿತ್ತು.

ಬೆಂಗಳೂರು: ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ಹಗರಣ (KPSC Scam) ಪ್ರಕರಣದ ಸಂಬಂಧ ಸಿಐಡಿ ಕೆಪಿಎಸ್​​ಸಿ ಕಚೇರಿ ಮೇಲೆ ದಾಳಿ ಮಾಡಿ ಇದೀಗ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ವಶಕ್ಕೆ ಪಡೆದುಕೊಂಡಿದೆ.

ಜಾರಿ ನಿರ್ದೇಶನಾಲಯ ಈ ಹಿಂದೆ ಕೆಪಿಎಎಸ್ ಮಾಜಿ ಅಧ್ಯಕ್ಷ, ಸದಸ್ಯರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿತ್ತು. ಈಗ ಪಶು ವೈದ್ಯಾಧಿಕಾರಿಗಳ ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್ ಅವರನ್ನ ಸಿಐಡಿ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದ್ದು, ಎರಡು ದಿನಗಳ ಬಳಿಕ ಅವರನ್ನ ವಶಕ್ಕೆ ಪಡೆದಿದೆ.

ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ, ಅಂಕ ತಿದ್ದುಪಡಿ ಹಾಗೂ ನೇಮಕಾತಿಯಲ್ಲಿನ ಅಕ್ರಮಗಳ ಕುರಿತಂತೆ ಸಿಐಡಿ ವಿಶೇಷ ತನಿಖಾ ತಂಡ ತೀವ್ರ ತನಿಖೆ ನಡೆಸುತ್ತಿದೆ. ಪ್ರಕರಣದ ತನಿಖೆಯ ಭಾಗವಾಗಿ ಸಿಐಡಿ ಅಧಿಕಾರಿಗಳು ನಿನ್ನೆ (ಆ.28) ಸತತ 11 ಗಂಟೆಗಳ ಕಾಲ ಜ್ಞಾನೇಂದ್ರ ಕುಮಾರ್ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು. ತನಿಖಾ ಪ್ರಕ್ರಿಯೆಗೆ ಸರಿಯಾಗಿ ಸ್ಪಂದಿಸದ ಕಾರಣ ಅಂತಿಮವಾಗಿ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆಯಲು ಸಿಐಡಿ ಸಿದ್ಧತೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಐಕಾನಿಕ್ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ನಲ್ಲಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಫೋಟೋ!

Nepal floods: ಮೃತರ ಸಂಖ್ಯೆ 675ಕ್ಕೆ ಏರಿಕೆ; ರಾಸುವಾ ಜಲವಿದ್ಯುತ್ ಯೋಜನೆ ಸ್ಥಳದಿಂದ ನಾಲ್ವರು ಭಾರತೀಯರ ರಕ್ಷಣೆ!

ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಮಾಗಡಿ ರಸ್ತೆಯಲ್ಲಿ ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ, Video!

'ಪ್ರತಿ ಬಾರಿ ಬಿದ್ದಾಗಲೂ, ಇದು ನನ್ನ ಜೀವನದ ಕೊನೆಯ ಕ್ಷಣ ಅನಿಸುತಿತ್ತು: ನೇಪಾಳದ ದಿಢೀರ್ ಪ್ರವಾಹದಿಂದ ಬದುಕುಳಿದ ವ್ಯಕ್ತಿಯೊಬ್ಬರ ಭಯಾನಕ ಅನುಭವ!

ಕಾರವಾರ ಮೆಡಿಕಲ್ ಕಾಲೇಜು, ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಗೆ ರಾಮಕೃಷ್ಣ ಹೆಗಡೆ ಹೆಸರು: ಸಿಎಂ ಘೋಷಣೆ