ಯುವಕರನ್ನು ವಶಕ್ಕೆ ಪಡೆದ ಪೊಲೀಸರು  
ರಾಜ್ಯ

ಧಾರವಾಡದಲ್ಲಿ ನಟ ಪ್ರಕಾಶ್ ರಾಜ್ ಮುತ್ತಿಗೆ ಹಾಕಲು ಯತ್ನಿಸಿದ ಯುವಕರು: ವಶಕ್ಕೆ ಪಡೆದ ಪೊಲೀಸರು; Video

ಪ್ರಕಾಶ್ ರಾಜ್ ಅವರು ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸಮುದಾಯ ಜಗತ್ತು/ಜಾಥಾ' ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದರು.

ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಹೊರಭಾಗದಲ್ಲಿ ಇಂದು ಭಾನುವಾರ ಹೈಡ್ರಾಮಾ ನಡೆಯಿತು. ಧರ್ಮಸ್ಥಳ ಭಕ್ತರ ಸಂಘಟನೆ, ವಿವಿಧ ಹಿಂದೂ ಸಂಘಟನೆಗಳ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ನಟ ಪ್ರಕಾಶ್ ರಾಜ್ ಅವರನ್ನು ಮುತ್ತಿಗೆ ಹಾಕಲು ಯತ್ನಿಸಿದರು.

ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಹಲವು ಯುವಕರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸ್ ವಾಹನ ಹತ್ತಲು ಅವರು ಪ್ರತಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಘಟನೆಯ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಪ್ರಕಾಶ್ ರಾಜ್ ಅವರು ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸಮುದಾಯ ಜಗತ್ತು/ಜಾಥಾ' ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಬ್ಯಾನರ್‌ನಲ್ಲಿದ್ದ ಪ್ರಕಾಶ್ ರಾಜ್ ಅವರ ಭಾವಚಿತ್ರಕ್ಕೆ ಮಸಿ ಬಳಿಯಲು ಯತ್ನಿಸಿದ ಯುವಕರ ಗುಂಪೊಂದು, ಸಭಾಂಗಣದೊಳಗೆ ನುಗ್ಗಿ ನಟನಿಗೆ ಮುತ್ತಿಗೆ ಹಾಕಲು ಯತ್ನಿಸಿತು.

ಪ್ರಕಾಶ್ ರಾಜ್ ಅವರು ಹಿಂದೂ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಬಹುದು ಎಂದು ಆರೋಪಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಧರ್ಮಸ್ಥಳದ ಭಕ್ತರ ಬಳಗ ಹಾಗೂ ಬಿಜೆಪಿ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ ತೀವ್ರ ಪ್ರತಿಭಟನೆ ನಡೆಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 768ಕ್ಕೇರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ, ಸುರಂಗದೊಳಗೆ 100ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ!

‘ಮತ್ತೆ ಕಟ್ಟುತ್ತೇವೆ’! ನೇಪಾಳ ಪ್ರವಾಹದ ಬಳಿಕ ಅವಶೇಷ ನಡುವೆ ಬದುಕು ಕಟ್ಟಿಕೊಳ್ಳಲು ಪರದಾಟ, ಆಹಾರ, ನೀರು, ಔಷಧಿಗಾಗಿ ಸಂತ್ರಸ್ಥರ ಸಂಕಷ್ಟ

Nepal floods: ಪ್ರವಾಹ ಬಂದು 5 ದಿನವಾದರೂ ಸುಳಿವಿಲ್ಲ; ನೇಪಾಳದಲ್ಲಿ ನಾಪತ್ತೆಯಾದ ಉತ್ತರ ಪ್ರದೇಶದ 4 ಕಾರ್ಮಿಕರಿಗಾಗಿ ತೀವ್ರ ಹುಡುಕಾಟ

ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್: 7ನೇ ಮಹಡಿಯಿಂದ ಜಿಗಿದ ಟೆಕ್ಕಿಗಳು; ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

ಪ್ರವಾಹದ ಬಳಿಕ ನೇಪಾಳದಲ್ಲಿ ಭಾರೀ ಮಳೆ; ಉತ್ತರ ಪ್ರದೇಶದಲ್ಲಿ ನೆರೆ ಭೀತಿ, ನಾರಾಯಣಿ-ಗಂಡಕ್ ನೀರಿನ ಮಟ್ಟ ಏರಿಕೆ!