ಪ್ರಾತಿನಿಧಿಕ ಚಿತ್ರ AI generated
ರಾಜ್ಯ

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು; ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!

'ಅವರು ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಮಾಲ್ಡಾ ತಲುಪುವ ನಿರೀಕ್ಷೆಯಿದೆ ಮತ್ತು ಅಲ್ಲಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುವುದು' ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ಈ ಹಿಂದೆ ವಶಕ್ಕೆ ಪಡೆಯಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಸೋಮವಾರ ಗಡಿಪಾರು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮ ವಲಸಿಗರ ವಿರುದ್ಧ ನಗರಾದ್ಯಂತ ನಡೆಸಿದ ಕಾರ್ಯಾಚರಣೆಯ ಭಾಗವಾಗಿ ನಗರದ 10 ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಅವರು ಹೇಳಿದರು.

'ಇಂದು, 10 ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಗಡೀಪಾರು ಮಾಡುವ ಉದ್ದೇಶದಿಂದ SMVT ಬೆಂಗಳೂರು ಟರ್ಮಿನಲ್‌ನಿಂದ ಪಶ್ಚಿಮ ಬಂಗಾಳದ ಮಾಲ್ಡಾ ರೈಲು ನಿಲ್ದಾಣಕ್ಕೆ ಕಳುಹಿಸಲಾಯಿತು' ಎಂದು ಪೊಲೀಸ್ ಉಪ ಆಯುಕ್ತ (ಎಲೆಕ್ಟ್ರಾನಿಕ್ ಸಿಟಿ) ಎಂ. ನಾರಾಯಣ ತಿಳಿಸಿದರು.

ಅವರನ್ನು 20 ಪೊಲೀಸ್ ಸಿಬ್ಬಂದಿ ಕರೆದೊಯ್ದರು ಎಂದು ಅವರು ಹೇಳಿದರು.

'ಅವರು ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಮಾಲ್ಡಾ ತಲುಪುವ ನಿರೀಕ್ಷೆಯಿದೆ ಮತ್ತು ಅಲ್ಲಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುವುದು' ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮ ವಲಸಿಗರ ಕುರಿತಾದ ಮಾಹಿತಿಯನ್ನು ಹಂಚಿಕೊಳ್ಳುವಂತೆ ನಾಗರಿಕರನ್ನು ಕೋರಿರುವ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರ ಸಹಕಾರ ಅತ್ಯಗತ್ಯವಾದರೂ, ಅದು ಕಾನೂನಿನ ಚೌಕಟ್ಟಿನೊಳಗೇ ಇರಬೇಕು. ನಗರದ ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ಶಂಕಿತ ಅಕ್ರಮ ವಲಸಿಗರನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಬೆಂಗಳೂರಿನಲ್ಲಿ ನಡೆಯುತ್ತಿರುವ 'ಆಪರೇಷನ್ ಮುಕ್ತ' ಮುಂದುವರಿಯಲಿದೆ ಎಂದೂ ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪದಿದ್ದರೆ TVK ಸಂಪುಟದಿಂದ ಕಾಂಗ್ರೆಸ್ ಹೊರಬರಲಿದೆ: ಸಚಿವ

ಇಸ್ಲಾಂ ಧರ್ಮವೇ ಶ್ರೇಷ್ಠ: ಸಿಎಂ ಡಿಕೆಶಿಯ 6ನೇ ಗ್ಯಾರಂಟಿ- ಹಿಂದೂಗಳಿಗೆ ‘ಸುನ್ನತ್ ಗ್ಯಾರಂಟಿ' ರಾಯರೆಡ್ಡಿ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ!

'ಮಹಿಳೆಯರು ಚಿನ್ನವಿದ್ದಂತೆ, ಪೆಟ್ಟಿಗೆಯೊಳಗಿಟ್ಟು ಜೋಪಾನ ಮಾಡಿ': ಮನೆಯಿಂದ ಹೊರಗೆ ಕಾಲಿಡಲು ಬಿಟ್ಟರೆ 'ಭಾರಿ ವಿನಾಶ' ಎಂದ ಕೇರಳದ ಧರ್ಮಗುರು!