ಸಿಎಂ ಡಿಕೆಶಿವಕುಮಾರ್ 
ರಾಜ್ಯ

ನೇಪಾಳ ಪ್ರವಾಹ: ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಪತ್ತೆಗೆ ಪ್ರಯತ್ನ, ಮಾಹಿತಿ ಪಡೆದ ಸಿಎಂ ಡಿಕೆ ಶಿವಕುಮಾರ್!

"33 ಮಂದಿಯ ಪೈಕಿ, ಇಬ್ಬರು ಬಂದಿದ್ದಾರೆ, ಇತರರನ್ನು ಪತ್ತೆಹಚ್ಚಲಾಗಿದೆ. 14 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದರು. ಸಿಲುಕಿರುವವರಲ್ಲಿ ಇಬ್ಬರು ಮೈಸೂರಿನವರು ಮತ್ತು ಉಳಿದವರು ಬೆಂಗಳೂರಿನವರು ಎಂದು ಅವರು ತಿಳಿಸಿದರು.

ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದ ನಂತರ ಅಲ್ಲಿ ಸಿಲುಕಿರುವ ಕನ್ನಡಿಗರನ್ನು ಪತ್ತೆಹಚ್ಚಲು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA)ದೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ತಿಳಿಸಿದ್ದಾರೆ.

ಕನ್ನಡಿಗರ ರಕ್ಷಣಾ ಕಾರ್ಯಾಚರಣೆಯ ಪ್ರಗತಿ ಕುರಿತು ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಿಂದ ಸಮೀರ್ ಶುಕ್ಲಾ ಅವರಿಂದ ಸಮಗ್ರ ಮಾಹಿತಿ ಪಡೆಯಲಾಗಿದೆ. ಅವರ ಪ್ರಕಾರ, ನೇಪಾಳದಲ್ಲಿ ಕರ್ನಾಟಕದ 33 ಮಂದಿ ಇದ್ದರು. ಇವರಲ್ಲಿ ಇಬ್ಬರು ವಾಪಸಾಗಿದ್ದಾರೆ ಮತ್ತು ಇತರರನ್ನು ಪತ್ತೆಹಚ್ಚಲಾಗಿದೆ ಆದಾಗ್ಯೂ, ಇನ್ನೂ 14 ಮಂದಿಯ ಪತ್ತೆ ಕಾರ್ಯ ಬಾಕಿ ಇದೆ ಎಂದರು.

"33 ಮಂದಿಯ ಪೈಕಿ, ಇಬ್ಬರು ಬಂದಿದ್ದಾರೆ, ಇತರರನ್ನು ಪತ್ತೆಹಚ್ಚಲಾಗಿದೆ. 14 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದರು. ಸಿಲುಕಿರುವವರಲ್ಲಿ ಇಬ್ಬರು ಮೈಸೂರಿನವರು ಮತ್ತು ಉಳಿದವರು ಬೆಂಗಳೂರಿನವರು ಎಂದು ಅವರು ತಿಳಿಸಿದರು.

ಸಂಕಷ್ಟಕ್ಕೆ ಸಿಲುಕಿರುವ ನಾಗರಿಕರು ದೆಹಲಿಯನ್ನು ತಲುಪಿದ ತಕ್ಷಣ ಅವರನ್ನು ಬರಮಾಡಿಕೊಳ್ಳಲು ಮತ್ತು ಅವರು ಬೆಂಗಳೂರಿಗೆ ಮರಳಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ವ್ಯವಸ್ಥೆ ಮಾಡಲಿದೆ .ಅವರು ದೆಹಲಿಯಲ್ಲಿ ಒಂದು ದಿನ ಉಳಿಯಲು ಬಯಸಿದರೂ, ಅವರ ಆರೋಗ್ಯದ ಬಗ್ಗೆ ನಾವು ಕಾಳಜಿ ವಹಿಸುತ್ತೇವೆ ಮತ್ತು ಬೇರೆ ಏನಾದರೂ ಸಮಸ್ಯೆಗಳಿದ್ದರೆ ಅವುಗಳನ್ನು ಬಗೆಹರಿಸುತ್ತೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಲಾರಕ್ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರ: ಜೋರ್ಡಾನ್‌ನ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ!

ನಾಗೇಂದ್ರ ರಾಜೀನಾಮೆಗೆ ರಾಜ್ಯಪಾಲರ ಅಂಗೀಕಾರ: ಸಂಪುಟದ ಎರಡು ಖಾಲಿ ಸ್ಥಾನ ಭರ್ತಿಗೆ ದೆಹಲಿಗೆ ತೆರಳಿದ ಸಿಎಂ ಡಿಕೆಶಿ!

ಮಧ್ಯಪ್ರದೇಶ: ಚಿತ್ರಕೂಟದಲ್ಲಿ 2 ದಶಕಗಳಲ್ಲೇ ಅತ್ಯಂತ ಭೀಕರ ಪ್ರವಾಹ, ಉಕ್ಕಿ ಹರಿದ ಮಂದಾಕಿನಿ ನದಿ; 1,000 ಜನರ ರಕ್ಷಣೆ

ಕೃಷ್ಣ ಜನ್ಮಾಷ್ಟಮಿಗೂ ಮುನ್ನ ಮಥುರಾದಲ್ಲಿ ಬಿಗಿ ಭದ್ರತೆ

ಉದ್ಯಾನವನದ 5% ಭೂಮಿ ಪರಭಾರೆಗೆ ವಿರೋಧ; ಲಾಲ್‌ಬಾಗ್ ನಲ್ಲಿ ಜನಾಂದೋಲನ; ಉದ್ಯಾನ ರಕ್ಷಣೆ ಅಪರಾಧವಾದರೆ ಪ್ರತಿದಿನ ಅಪರಾಧ ಮಾಡ್ತೇನೆ- ತೇಜಸ್ವಿ ಸೂರ್ಯ