ಬಸವರಾಜ್ ಕನ್ನಾಳೆ  
ರಾಜ್ಯ

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!

ಸಿಐಡಿ ತನಿಖೆ ವೇಳೆ ಸ್ಫೋಟ ವಿಚಾರ ಬಯಲಾಗಿದ್ದು, ಎಲ್ಲಾ ಪರೀಕ್ಷೆಗಳ ಉಸ್ತುವಾರಿ ಹಾಗೂ ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅವರೇ ಈ ಪ್ರಶ್ನೆಪತ್ರಿಕೆ ಸೋರಿಕೆಯ ಸೂತ್ರಧಾರ ಅನ್ನೋ ವಿಚಾರ ತಿಳಿದುಬಂದಿದೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಬಂಧನ ಬೆನ್ನಲ್ಲೇ, ಮಧ್ಯವರ್ತಿ, ಬಿಜೆಪಿ ಮುಖಂಡ ಹಾಗೂ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಬಸವರಾಜ್ ಕನ್ನಾಳೆ ಅವರನ್ನು ಬಂಧಿಸಿದೆ.

ಸಿಐಡಿ ಅಧಿಕಾರಿಗಳು ಬಂಧಿತ ಇಬ್ಬರು ಆರೋಪಿಗಳನ್ನು ಸೋಮವಾರ ಕೋರ್ಟ್​​ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರನ್ನು ಸೆಪ್ಟೆಂಬರ್​​ 9ರ ವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರ ಗ್ರಾಮದ ನಿವಾಸಿ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರನ್ನು ಭಾನುವಾರ ದೆಹಲಿಯ ವಿಮಾನ ನಿಲ್ದಾಣದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

ಈ ಮಧ್ಯೆ ಭಾಲ್ಕಿ ತಾಲೂಕಿನ ಡೋಣಗಾಪುರ್ ಗ್ರಾಮದ ಹಾಗೂ ಭಾಲ್ಕಿ ನಗರದ ಲೆಕ್ಚರರ್ ಕಾಲನಿಯಲ್ಲಿರುವ ಬಸವರಾಜ್ ಕನ್ನಾಳೆ ಮನೆಗೂ ಸಿಐಡಿ ಅಧಿಕಾರಿಗಳು ಭೇಟಿ ನೀಡಿ ಶೋಧ ನಡೆಸಿದ್ದಾರೆ.

ತನಿಖೆ ವೇಳೆ ಸ್ಫೋಟಕ ವಿಚಾರ ಬಯಲು

ಸಿಐಡಿ ತನಿಖೆ ವೇಳೆ ಸ್ಫೋಟ ವಿಚಾರ ಬಯಲಾಗಿದ್ದು, ಎಲ್ಲಾ ಪರೀಕ್ಷೆಗಳ ಉಸ್ತುವಾರಿ ಹಾಗೂ ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅವರೇ ಈ ಪ್ರಶ್ನೆಪತ್ರಿಕೆ ಸೋರಿಕೆಯ ಸೂತ್ರಧಾರ ಅನ್ನೋ ವಿಚಾರ ತಿಳಿದುಬಂದಿದೆ.

40 ಲಕ್ಷ ರೂಪಾಗೆ ಪ್ರಶ್ನೆ ಪತ್ರಿಕೆ ಮಾರಾಟ

ಐಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಿದ್ದು, ಅವುಗಳನ್ನು ಮಧ್ಯವರ್ತಿ ಹಾಗೂ ಬೀದರ್ ಜಿಲ್ಲೆ ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಮೂಲ ಅಭ್ಯರ್ಥಿಗಳಿಗೆ ಒಂದಕ್ಕೆ 40 ಲಕ್ಷ ರೂಪಾಯಿಯಂತೆ ಮಾರಾಟ ಮಾಡಿದ್ದರಂತೆ. ಅಷ್ಟೇ ಅಲ್ಲದೇ ಸಾಕ್ಷ್ಯ ನಾಶಪಡಿಸಲು ಓಎಂಆರ್ ಶೀಟ್ ತಿದ್ದುಪಡಿ ಹಾಗೂ ಸ್ಟ್ರಾಂಗ್ ರೂಮ್ ಸಿಸಿಟಿವಿ ದೃಶ್ಯಾವಳಿಗಳನ್ನು ಅಳಿಸಲು ಯತ್ನಿಸಿರೋದು ತನಿಖೆಯಲ್ಲಿ ಪತ್ತೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

ನೇಪಾಳ ಪ್ರವಾಹ: ಲೈಕ್ಸ್ ಗಾಗಿ ನಕಲಿ ವಿಡಿಯೋ, ಸುಳ್ಳು ಮಾಹಿತಿ ಪ್ರಸಾರ; 72 ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ಕಟ್ಟುನಿಟ್ಟಿನ ಸೂಚನೆ!

ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದ 'Batwara 1947': ಸನ್ನಿ ಡಿಯೋಲ್ ಮುಸ್ಲಿಂ ಪಾತ್ರ ಜನರಿಗೆ ಇಷ್ಟವಾಗಲಿಲ್ಲವೇ! ಶಬಾನಾ ಆಜ್ಮಿ ಹೇಳಿದ್ದೇನು?

Hit And Run: ಪಾದಚಾರಿಗೂ ಜೀವಂತವಾಗಿ ರಸ್ತೆ ದಾಟುವ ಹಕ್ಕಿದೆ: ದೆಹಲಿ ಕೋರ್ಟ್