ಸಾಂದರ್ಭಿಕ ಚಿತ್ರ 
ರಾಜ್ಯ

ಕನಕಪುರ: ಅಡುಗೆ ಅನಿಲ ಸೋರಿಕೆ; ಬೆಂಕಿ ದುರಂತದಲ್ಲಿ ಗಾಯಗೊಂಡಿದ್ದ ಮೂವರ ಸಾವು!

ಗ್ಯಾರೇಜ್ ಮುಂಭಾಗದಲ್ಲಿ ತಳ್ಳುಗಾಡಿ ಇಟ್ಟುಕೊಂಡು ಬಜ್ಜಿ-ಬೋಂಡ ಮತ್ತು ಕಾರ ಮಿಕ್ಸರ್ ಮಾರುವ ಹೋಟೆಲ್ ನಡೆಸುತ್ತಿದ್ದ ಪ್ರಶಾಂತ್, ಸೋಮವಾರ ಮನೆಯಲ್ಲೇ ಕಾರ ಮಿಕ್ಸರ್ ತಯಾರಿಸುತ್ತಿದ್ದಾಗ ಸಿಲಿಂಡರ್‌ ಪೈಪ್‌ನಿಂದ ಗ್ಯಾಸ್ ಸೋರಿಕೆಯಾಗಿತ್ತು.

ಕನಕಪುರ: ಅಡುಗೆ ಸಿಲಿಂಡರ್ ಪೈಪ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸಂಭವಿಸಿದ ದುರಂತದಲ್ಲಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಕನಕಪುರದ ಅಮರನಾರಾಯಣ ಬ್ಲಾಕ್ ನ ಪ್ರಶಾಂತ್ (22), ಅವರ ತಾಯಿ ಸವಿತಾ (45) ಮತ್ತು ತಂದೆ ಸಿದ್ದರಾಜು (50) ಸಾವನ್ನಪ್ಪಿದ್ದಾರೆ.

ಗ್ಯಾರೇಜ್ ಮುಂಭಾಗದಲ್ಲಿ ತಳ್ಳುಗಾಡಿ ಇಟ್ಟುಕೊಂಡು ಬಜ್ಜಿ-ಬೋಂಡ ಮತ್ತು ಕಾರ ಮಿಕ್ಸರ್ ಮಾರುವ ಹೋಟೆಲ್ ನಡೆಸುತ್ತಿದ್ದ ಪ್ರಶಾಂತ್, ಸೋಮವಾರ ಮನೆಯಲ್ಲೇ ಕಾರ ಮಿಕ್ಸರ್ ತಯಾರಿಸುತ್ತಿದ್ದಾಗ ಸಿಲಿಂಡರ್‌ ಪೈಪ್‌ನಿಂದ ಗ್ಯಾಸ್ ಸೋರಿಕೆಯಾಗಿತ್ತು.

ಬೆಂಕಿ ಹೆಚ್ಚಾಗುತ್ತಿರುವುದನ್ನು ಕಂಡ ಪ್ರಶಾಂತ್, ಸಿಲಿಂಡರ್ ಹೊತ್ತಿಕೊಂಡು ಮನೆಗೆ ಬೆಂಕಿ ಹತ್ತಬಹುದೆಂದು ಭಯಪಟ್ಟು ಅದನ್ನು ನಂದಿಸಲು ನೀರಿನ ತೊಟ್ಟಿಯಲ್ಲಿ ಹಾಕಲು ಪ್ರಯತ್ನಿಸಿದರು. ಆ ಸಮಯದಲ್ಲಿ ಅವರಿಗೆ ತೀವ್ರವಾಗಿ ಬೆಂಕಿ ತಗಲಿ ಗಂಭೀರ ಸುಟ್ಟ ಗಾಯಗಳಾಗಿದ್ದವು.

ಬೆಂಕಿ ತಗುಲಿ ಸುಟ್ಟ ಗಾಯಗಳಾದಾಗ ಭಯಗೊಂಡ ಪ್ರಶಾಂತ್ ಮತ್ತು ಅವರ ತಂದೆ, ತಾಯಿ ಗ್ಯಾಸ್ ಸ್ಟವ್ ಸಿಲಿಂಡರ್ ಅಲ್ಲೇ ಬಿಟ್ಟು ಮನೆಯ ಒಳಗೆ ಓಡಿದ್ದಾರೆ. ಮನೆಯ ಅಕ್ಕಪಕ್ಕದವರು ಬೆಂಕಿ ಹತ್ತಿಕೊಂಡಿರುವುದನ್ನು ನೋಡಿ ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿಯನ್ನು ತಿಳಿಸಿದ್ದಾರೆ, ಅಗ್ನಿಶಾಮಕ ದಳದವರು ಬಂದು ಬೆಂಕಿಯನ್ನು ನಂದಿಸಿದ್ದರು.

ಘಟನೆಯ ಮಾಹಿತಿ ತಿಳಿದ ಗ್ಯಾಸ್ ಏಜೆನ್ಸಿ ಅವರು ಕಠಿಣ ಸ್ಥಳಕ್ಕೆ ಭೇಟಿ ನೀಡಿ ಯಾವ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದನ್ನು ಪರಿಶೀಲಿಸಿ ಮನೆಯ ಒಳಗಡೆ ಇದ್ದಂತಹ ಗ್ಯಾಸ್ ತುಂಬಿದ್ದ ಮತ್ತೊಂದು ಸಿಲಿಂಡರನ್ನು ಹೊರಗಡೆ ತೆಗೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ