ಕಾಂಗ್ರೆಸ್ ಎಂಎಲ್‌ಸಿ ನಜೀರ್ ಅಹ್ಮದ್ 
ರಾಜ್ಯ

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಂಗ್ರೆಸ್ ಎಂಎಲ್‌ಸಿ ನಜೀರ್‌ ಅಹ್ಮದ್‌ ಅಮಾನತಿಗೆ ಬಿಜೆಪಿ ಒತ್ತಾಯ

'ಗೌರವಾನ್ವಿತ ಪ್ರಧಾನಿ ಮೋದಿಯವರ ವಿರುದ್ಧ ಕಾಂಗ್ರೆಸ್ ಎಂಎಲ್‌ಸಿ ನಜೀರ್ ಅಹ್ಮದ್ ಅವರು ಅವಹೇಳನಕಾರಿ ಪದಗಳನ್ನು ಬಳಸಿರುವುಗು ಕೀಳು ಮಟ್ಟದ ರಾಜಕೀಯಕ್ಕೆ ಉದಾಹರಣೆಯಾಗಿದೆ' ಎಂದು ನಾರಾಯಣಸ್ವಾಮಿ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಎಂಎಲ್‌ಸಿ ನಜೀರ್ ಅಹ್ಮದ್ ಅವರನ್ನು ತಕ್ಷಣವೇ ಸದನದಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ವಿರೋಧ ಪಕ್ಷ ಬಿಜೆಪಿ ಕರ್ನಾಟಕ ವಿಧಾನ ಪರಿಷತ್ತಿನ ಅಧ್ಯಕ್ಷ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದೆ.

ನಜೀರ್ ಅಹ್ಮದ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೂ ಆಗಿದ್ದಾರೆ.

ಸೋಮವಾರ ಸದನವನ್ನು ದಿನದ ಮಟ್ಟಿಗೆ ಮುಂದೂಡಿದ ನಂತರ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಾಯಕರ ನಿಯೋಗ ಹೊರಟ್ಟಿ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿತು.

'ಗೌರವಾನ್ವಿತ ಪ್ರಧಾನಿ ಮೋದಿಯವರ ವಿರುದ್ಧ ಕಾಂಗ್ರೆಸ್ ಎಂಎಲ್‌ಸಿ ನಜೀರ್ ಅಹ್ಮದ್ ಅವರು ಅವಹೇಳನಕಾರಿ ಪದಗಳನ್ನು ಬಳಸಿರುವುಗು ಕೀಳು ಮಟ್ಟದ ರಾಜಕೀಯಕ್ಕೆ ಉದಾಹರಣೆಯಾಗಿದೆ' ಎಂದು ನಾರಾಯಣಸ್ವಾಮಿ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

'ವಿಧಾನ ಪರಿಷತ್ತಿನ ಕಲಾಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅತ್ಯಂತ ಕೀಳುಮಟ್ಟದ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ನಜೀರ್ ಅಹ್ಮದ್ ಅವರನ್ನು ತಕ್ಷಣವೇ ಸದನದಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಸೋಮವಾರ (ಫೆಬ್ರುವರಿ 2) ಅಧ್ಯಕ್ಷರಿಗೆ ದೂರು ಸಲ್ಲಿಸಲಾಗಿದೆ' ಎಂದು ಅವರು ಹೇಳಿದರು.

ಸದನದ ಘನತೆ ಮತ್ತು ಸಂಸದೀಯ ಮೌಲ್ಯಗಳನ್ನು ಕಸಿದುಕೊಳ್ಳಲಾಗಿದೆ ಮತ್ತು ಇದು ಅತ್ಯಂತ ಖಂಡನೀಯ. ಈ ನಡವಳಿಕೆಯು ಪ್ರಜಾಪ್ರಭುತ್ವದ ಆದರ್ಶಗಳಿಗೆ ವಿರುದ್ಧವಾಗಿದೆ ಮತ್ತು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿದ ಸದಸ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು.

'ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸುತ್ತಿದ್ದ ವೇಳೆ, ಕಾಂಗ್ರೆಸ್ ಪರಿಷತ್ ಸದಸ್ಯ ನಜೀರ್ ಅಹ್ಮದ್​ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ್ರೋಹಿ ಎಂದು ಹೇಳಿದರು. ಇದಕ್ಕೆ ಕೆರಳಿದ ಬಿಜೆಪಿ ಸದಸ್ಯರು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ನಜೀರ್ ಅಹ್ಮದ್​​ ಕ್ಷಮೆ ಕೇಳಬೇಕು ಎಂದು ವಿಪಕ್ಷಗಳ ಸದಸ್ಯರು ಪಟ್ಟು ಹಿಡಿದಿದ್ದು, ಸದಸ್ಯರ ವಾಗ್ವಾದ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಕೂಡಲೇ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ನಾಳೆಗೆ (ಫೆ.03) ಮುಂದೂಡಿದರು.

ಅಹ್ಮದ್ ಕ್ಷಮೆಯಾಚಿಸದೇ ಇರುವುದರಿಂದ ಮತ್ತು ಬಿಜೆಪಿ ಪ್ರತಿಭಟನೆ ಮುಂದುವರಿಸಿದ್ದರಿಂದ, ಅಧ್ಯಕ್ಷರು ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯವನ್ನು ಮತಕ್ಕೆ ಹಾಕಿದರು ಮತ್ತು ಗದ್ದಲದ ನಡುವೆಯೇ ಅದನ್ನು ಅಂಗೀಕರಿಸಲಾಯಿತು. ನಂತರ ಸದನವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!