ಪ್ರಿಯಾಂಕ್ ಖರ್ಗೆ 
ರಾಜ್ಯ

ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಪ್ರಿಯಾಂಕ್ ಖರ್ಗೆ

ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬೆಂಗಳೂರು: ಇದೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆ ಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ್ ಅವರು ರಾಜ್ಯ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿಯು ಮುಕ್ತಾಯಗೊಳ್ಳುತ್ತಿರುವುದರಿಂದ ಮುಂದಿನ ಚುನಾವಣೆ ನಡೆಸುವವರೆಗೂ ಆಡಳಿತಾಧಿಕಾರಿಯನ್ನು ನೇಮಿಸುವ ಬದಲು ಈಗಿರುವ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಬೇಕೆಂದು ತಿಳಿಸಿದರು.

ಇದಕ್ಕೆ ಉತ್ತರಿಸಿದ ಸಚಿವರು, ಚುನಾವಣೆ ನಡೆಸುವುದು ತುಂಬಾ ತಡವಾಗುವುದಾದರೆ ಮಾತ್ರ ಕಾನೂನಿನಡಿ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಲು ಅವಕಾಶವಿರುತ್ತದೆ ಎಂದರು.

ಆದರೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ. ಚುನಾವಣೆಯನ್ನು ಸರ್ಕಾರ ಆದಷ್ಟು ಬೇಗ ನಡೆಸಲಿದೆ. ಆದಾಗ್ಯೂ ಚುನಾವಣೆ ನಡೆಸುವುದು ತಡವಾದಲ್ಲಿ ಸದಸ್ಯರ ಮನವಿ ಕುರಿತು ಕಾನೂನಿನಡಿ ಪರಿಶೀಲಿಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ನಿಮ್ಮ ಖಾಲಿ ಭರವಸೆಗಳ ಯುಗ ಅಂತ್ಯಗೊಂಡಿದೆ, ‘ಸೋಲನ್ನು ಒಪ್ಪಂದವೆಂದು ತೋರಿಸದಿರಿ’; ಅಮೆರಿಕಾ ಕುರಿತು ಇರಾನ್ ವ್ಯಂಗ್ಯ, ಶಾಂತಿ ಪ್ರಸ್ತಾವ ತಿರಸ್ಕೃತ..?

ಅದಕ್ಕಾಗಿಯೇ ಪರಮಾಣು ಶಸ್ತ್ರಾಸ್ತ್ರ ಬೇಕು: ಇರಾನ್ ಯುದ್ಧದ ಬಗ್ಗೆ ಕಿಮ್ ಸ್ಫೋಟಕ ಹೇಳಿಕೆ

ತಮಿಳುನಾಡು ವಿಧಾನಸಭಾ ಚುನಾವಣೆ: AIADMKಯ 23 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

West Asia war: ಮಿತ್ರರಾಷ್ಟ್ರಗಳಿಗಷ್ಟೇ ಹಾರ್ಮುಜ್‌ ಜಲಸಂಧಿ ತೆರೆದ ಇರಾನ್‌; 15 ಅಂಶಗಳ ಶಾಂತಿ ಸೂತ್ರ ಮುಂದಿಟ್ಟ ಅಮೆರಿಕಾ, ಒಪ್ಪುತ್ತದೆಯೇ ಟೆಹ್ರಾನ್..?

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಕೌಟುಂಬಿಕ ಹಿಂಸಾಚಾರ ಪ್ರಕರಣಗಳಲ್ಲಿ ತೀವ್ರ ಹೆಚ್ಚಳ!

SCROLL FOR NEXT