ಪ್ರಿಯಾಂಕ್ ಖರ್ಗೆ 
ರಾಜ್ಯ

ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಪ್ರಿಯಾಂಕ್ ಖರ್ಗೆ

ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬೆಂಗಳೂರು: ಇದೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆ ಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ್ ಅವರು ರಾಜ್ಯ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿಯು ಮುಕ್ತಾಯಗೊಳ್ಳುತ್ತಿರುವುದರಿಂದ ಮುಂದಿನ ಚುನಾವಣೆ ನಡೆಸುವವರೆಗೂ ಆಡಳಿತಾಧಿಕಾರಿಯನ್ನು ನೇಮಿಸುವ ಬದಲು ಈಗಿರುವ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಬೇಕೆಂದು ತಿಳಿಸಿದರು.

ಇದಕ್ಕೆ ಉತ್ತರಿಸಿದ ಸಚಿವರು, ಚುನಾವಣೆ ನಡೆಸುವುದು ತುಂಬಾ ತಡವಾಗುವುದಾದರೆ ಮಾತ್ರ ಕಾನೂನಿನಡಿ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಲು ಅವಕಾಶವಿರುತ್ತದೆ ಎಂದರು.

ಆದರೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ. ಚುನಾವಣೆಯನ್ನು ಸರ್ಕಾರ ಆದಷ್ಟು ಬೇಗ ನಡೆಸಲಿದೆ. ಆದಾಗ್ಯೂ ಚುನಾವಣೆ ನಡೆಸುವುದು ತಡವಾದಲ್ಲಿ ಸದಸ್ಯರ ಮನವಿ ಕುರಿತು ಕಾನೂನಿನಡಿ ಪರಿಶೀಲಿಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video