ನಳಿನ್ ಕುಮಾರ್ ಕಟೀಲ್ 
ರಾಜ್ಯ

ರಾಜ್ಯದಲ್ಲಿ ಹದಗೆಟ್ಟ ಹಣಕಾಸು ಪರಿಸ್ಥಿತಿ, ಶ್ವೇತಪತ್ರ ಬಿಡುಗಡೆ ಮಾಡಬೇಕು- ನಳಿನ್ ಕುಮಾರ್ ಕಟೀಲ್!

ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಕರ್ನಾಟಕ ಸರ್ಕಾರ ಆರೋಪಿಸಿದೆ. ಆದರೆ, ಶ್ವೇತಪತ್ರ ಬಿಡುಗಡೆ ಮಾಡಿದರೆ ಕೇಂದ್ರದಿಂದ ರಾಜ್ಯಕ್ಕೆ ಬಿಡುಗಡೆಯಾದ ನಿಜವಾದ ಹಣ ಎಷ್ಟು ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ಕಟೀಲು ಹೇಳಿದ್ದಾರೆ.

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ಕೇಂದ್ರದಿಂದ ಬಿಡುಗಡೆಯಾದ ಅನುದಾನವನ್ನು ಸ್ಪಷ್ಟವಾಗಿ ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕೆಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಕರ್ನಾಟಕ ಸರ್ಕಾರ ಆರೋಪಿಸಿದೆ. ಆದರೆ, ಶ್ವೇತಪತ್ರ ಬಿಡುಗಡೆ ಮಾಡಿದರೆ ಕೇಂದ್ರದಿಂದ ರಾಜ್ಯಕ್ಕೆ ಬಿಡುಗಡೆಯಾದ ನಿಜವಾದ ಹಣ ಎಷ್ಟು ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ಕಟೀಲು ಹೇಳಿದ್ದಾರೆ.

37,370 ಕೋಟಿ ರೂ. ಬಾಕಿ ಬಿಲ್ ಪಾವತಿಯಾಗದೆ ಬಾಕಿ ಉಳಿದಿದೆ. ಕೇಂದ್ರ ಸರ್ಕಾರ ಬಾಕಿ ಅನುದಾನವನ್ನು ಬಿಡುಗಡೆ ಮಾಡದ ಕಾರಣಕ್ಕೆ ಬಿಲ್ ಕ್ಲಿಯರ್ ಮಾಡಲು ಸಾಧ್ಯವಾಗಿಲ್ಲ ಎಂಬ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಕ್ಕೆ ಪ್ರತಿಕ್ರಿಯಿಸಿದ ಕಟೀಲ್, ರಾಜ್ಯ ಸರ್ಕಾರದ ಆಡಳಿತಾತ್ಮಕ ವೈಫಲ್ಯವು ಗುತ್ತಿಗೆದಾರರ ಬಿಲ್ ಪಾವತಿಯಾಗದಿರಲು ಕಾರಣವಾಗಿದೆ ಎಂದಿದ್ದಾರೆ.

ಸರ್ಕಾರಿ ನೌಕರರಿಗೆ ಸಂಬಳ ನೀಡಲು ಹಣವಿಲ್ಲದಂತಹ ಪರಿಸ್ಥಿತಿಯನ್ನು ರಾಜ್ಯ ಶೀಘ್ರದಲ್ಲೇ ಎದುರಿಸಲಿದೆ. ಈ ಹಿಂದೆ ಹಲವಾರು ಬಜೆಟ್‌ಗಳನ್ನು ಮಂಡಿಸಿರುವ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೊದಲು ರಾಜ್ಯದ ಆದಾಯ ಮತ್ತು ವೆಚ್ಚವನ್ನು ನಿರ್ಣಯಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಸರಕಾರ ಜಾರಿಗೆ ತಂದ ಐದು ಖಾತರಿ ಯೋಜನೆಗಳ ಆರ್ಥಿಕ ಹೊರೆಯಿಂದ ಕರ್ನಾಟಕ ದಿವಾಳಿಯತ್ತ ಸಾಗುತ್ತಿದೆ. ಆದರೂ ಸಿದ್ದರಾಮಯ್ಯ ಕೇಂದ್ರದ ಮೇಲೆ ಆರೋಪ ಹೊರಿಸಲು ಯತ್ನಿಸುತ್ತಿದ್ದಾರೆ. ತೆರಿಗೆ ಹಂಚಿಕೆ ಕುರಿತು ಹಣಕಾಸು ಸಚಿವೆ ನಿರ್ಮಲಾ ಸ್ಪಷ್ಟನೆಗೆ ಅವರು ಏಕೆ ಪ್ರತಿಕ್ರಿಯಿಸಿಲ್ಲ? ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಬಿ-ಜಿ ರಾಮ್ ಜಿ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ರಾಷ್ಟ್ರೀಯ ಭದ್ರತೆ ಕುರಿತು ಮಾತನಾಡುತ್ತೇನೆಂದು Rahul Gandhi ಹೇಳುತ್ತಿದ್ದಂತೆ ನಕ್ಕ Congress ಸಂಸದ, Video!

ಲೋಕಸಭೆಯಲ್ಲಿ ತೀವ್ರ ಕೋಲಾಹಲ: 8 ಕಾಂಗ್ರೆಸ್ ಸಂಸದರ ಅಮಾನತು; ಕಲಾಪ ನಾಳೆಗೆ ಮುಂದೂಡಿಕೆ

ಉತ್ತರ ಕನ್ನಡ: ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ: ದೂರ ನೀಡಿದ್ದಕ್ಕೆ ಹತ್ಯೆ; ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

Cricket: ಇತಿಹಾಸ ಬರೆದ ಭಾರತ: ಆಸ್ಟ್ರೇಲಿಯಾ-ವೆಸ್ಟ್ ಇಂಡೀಸ್ ಜಂಟಿ ವಿಶ್ವದಾಖಲೆ ಉಡೀಸ್!

SCROLL FOR NEXT