ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕದಲ್ಲಿನ ರೈಲ್ವೆ ಯೋಜನೆಗಳಿಗೆ ಬಜೆಟ್ ನಲ್ಲಿ 7,748 ಕೋಟಿ ರೂ ನಿಗದಿ: ಅಶ್ವಿನಿ ವೈಷ್ಣವ್

ಬಜೆಟ್‌ನಲ್ಲಿ ಘೋಷಿಸಲಾದ ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಹೈದರಾಬಾದ್ ಬುಲೆಟ್ ಟ್ರೈನ್ ಕಾರಿಡಾರ್‌ಗಳು ಬೆಂಗಳೂರಿನ ಜನರಿಗೆ ದೊಡ್ಡ ಬದಲಾವಣೆಯನ್ನು ತರಲಿವೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇತ್ತೀಚಿಗೆ ಮಂಡಿಸಿದ 2026-27ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,748 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸೋಮವಾರ ತಿಳಿಸಿದ್ದಾರೆ.

ವಿಡಿಯೋ ಸಂವಾದದಲ್ಲಿ ಮಾತನಾಡಿದ ಸಚಿವರು, ದೊಡ್ಡ ಪ್ರಮಾಣದ ಅನುದಾನ ಹಂಚಿಕೆಯು ಮೂಲಸೌಕರ್ಯ ಅಭಿವೃದ್ಧಿಗೆ ನೆರವಾಗಲಿದೆ. ರಾಜ್ಯದಲ್ಲಿ ಪ್ರಸ್ತುತ 52,950 ಕೋಟಿ ರೂ. ಮೌಲ್ಯದ ರೈಲ್ವೆ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಮಾಹಿತಿ ನೀಡಿದ್ದಾರೆ.

ಹೊಸ ಟ್ರ್ಯಾಕ್ ನಿರ್ಮಾಣ, ಸಮಗ್ರವಾಗಿ ನಿಲ್ದಾಣದ ಪುನರಾಭಿವೃದ್ಧಿ ಮತ್ತಿತರ ಸುರಕ್ಷತಾ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಬಜೆಟ್‌ನಲ್ಲಿ ಘೋಷಿಸಲಾದ ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಹೈದರಾಬಾದ್ ಬುಲೆಟ್ ಟ್ರೈನ್ ಕಾರಿಡಾರ್‌ಗಳು ಬೆಂಗಳೂರಿನ ಜನರಿಗೆ ದೊಡ್ಡ ಬದಲಾವಣೆಯನ್ನು ತರಲಿವೆ ಎಂದು ಹೇಳಿದರು.

ಈ ಕಾರಿಡಾರ್ ನಿಂದ ಬೆಂಗಳೂರು-ಚೆನ್ನೈ ನಡುವೆ ಕೇವಲ ಒಂದು ಗಂಟೆ 13 ನಿಮಿಷಗಳಲ್ಲಿ ಪ್ರಯಾಣಿಸಬಹುದಾಗಿದೆ. ಬೆಂಗಳೂರು ಮತ್ತು ಹೈದರಾಬಾದ್ ನಡುವಿನ ಪ್ರಯಾಣದ ಅವಧಿ ಕೇವಲ ಎರಡು ಗಂಟೆ ಆಗಲಿದೆ.ಈ ಯೋಜನೆಯಿಂದ ಬೆಂಗಳೂರಿನಲ್ಲಿ ಉತ್ಪಾದನೆ, ವಿನ್ಯಾಸ ಮತ್ತು ಐಟಿ ಸೇವೆಗಳಿಗೆ ಪ್ರೋತ್ಸಾಹ ಸಿಗಲಿದೆ ಎಂದು ಅವರು ತಿಳಿಸಿದರು.

ಅಮೃತ್ ಸ್ಟೇಷನ್ ಯೋಜನೆಯಡಿ, 2,110 ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿ 61 ನಿಲ್ದಾಣಗಳನ್ನು ಪುನರ್ ಅಭಿವೃದ್ಧಿಗೆ ಗುರುತಿಸಲಾಗಿದೆ. 5 ನಿಲ್ದಾಣಗಳಲ್ಲಿ ಬಾಗಲಕೋಟ, ಧಾರವಾಡ, ಗದಗ, ಗೋಕಾಕ ರಸ್ತೆ ಮತ್ತು ಮುನಿರಾಬಾದ್ ಪುನರ್ ಅಭಿವೃದ್ಧಿ ಕಾರ್ಯಗಳು ಈಗಾಗಲೇ ಪೂರ್ಣಗೊಂಡಿದ್ದು, ಬಾದಾಮಿ, ಅಳ್ನಾವರ, ಕೊಪ್ಪಳ ಮತ್ತು ಬಂಟ್ವಾಳ ರೈಲು ನಿಲ್ದಾಣಗಳು ಉದ್ಘಾಟನೆಗೆ ಸಜ್ಜಾಗಿವೆ ಎಂದು ಮಾಹಿತಿ ನೀಡಿದರು.

2014 ರಿಂದ ರಾಜ್ಯದಲ್ಲಿ ಸುಮಾರು 1,750 ಕಿಮೀ ಹೊಸ ರೈಲು ಹಳಿಗಳನ್ನು ನಿರ್ಮಿಸಲಾಗಿದೆ. 3,368 ಮಾರ್ಗ ಕಿಲೋಮೀಟರ್ (97%) ರೈಲ್ವೆ ಮಾರ್ಗವನ್ನು ವಿದ್ಯುದೀಕರಣಗೊಳಿಸಲಾಗಿದೆ. ಜೊತೆಗೆ 707 ಮೇಲ್ಸೇತುವೆ ಮತ್ತು ಕೆಳಸೇತುವೆಗಳನ್ನು ನಿರ್ಮಿಸಲಾಗಿದೆ. 138 ಕಿಮೀ ಮಾರ್ಗದ KSR ಬೆಂಗಳೂರು-ಮೈಸೂರು ವಿಭಾಗವು 72.76 ಕೋಟಿ ರೂ. ವೆಚ್ಚದಲ್ಲಿ ಸ್ವಯಂಚಾಲಿತ ಸಿಗ್ನಲ್‌ಗಳನ್ನು ಪಡೆಯಲಿದೆ ಎಂದು ವಿವರಿಸಿದರು.

ಕರ್ನಾಟಕದಲ್ಲಿ ಹೊಸ ರೈಲು ಮಾರ್ಗಗಳ ನಿರ್ಮಾಣಕ್ಕೆ 3,085 ಕೋಟಿ ರೂ. ಮತ್ತು ಜೋಡಿ ಹಳಿಗಳ ನಿರ್ಮಾಣಕ್ಕೆ 1,534 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!