ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ವಂಟಮೂರಿ ಮಹಿಳೆ‌‌ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; 12 ಜನರಿಗೆ ಐದು ವರ್ಷ ಜೈಲು ಶಿಕ್ಷೆ

2023ರ ಡಿಸೆಂಬರ್ 11 ರಂದು ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಜನರ ಗುಂಪೊಂದು ಮಹಿಳೆಯನ್ನು ವಿವಸ್ತ್ರಗೊಳಿಸಿ, ಥಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿದ ಅಮಾನವೀಯ ಘಟನೆ ನಡೆದಿತ್ತು.

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಳಗಾವಿಯ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರು ಮಹಿಳೆಯರು ಸೇರಿದಂತೆ 12 ಜನರಿಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

2023ರ ಡಿಸೆಂಬರ್ 11 ರಂದು ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಜನರ ಗುಂಪೊಂದು ಮಹಿಳೆಯನ್ನು ವಿವಸ್ತ್ರಗೊಳಿಸಿ, ಥಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿದ ಅಮಾನವೀಯ ಘಟನೆ ನಡೆದಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ಇಂದು ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 12 ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಸಾಬೀತಾಗಿದ್ದು, ಪ್ರತಿಯೊಂದು ಸೆಕ್ಷನ್‌ಗೆ ಒಂದೊಂದು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.

ಅಪರಾಧಿಗಳಾದ ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ ನಾಯಿಕ, ಪಾರ್ವತಿ ನಾಯಕ, ಯಲ್ಲವ್ವ ನಾಯಿಕ, ಲಕ್ಕಪ್ಪ ನಾಯಿಕ, ಗಂಗವ್ವ ನಾಯಿಕ, ಸಂಗೀತಾ ಹೆಗ್ಗನಾಯಿಕ, ಸಂತೋಷ ನಾಯಿಕ, ಶೋಭಾ ನಾಯಿಕ, ಲಕ್ಕವ್ವ ನಾಯಿಕ ಹಾಗೂ ಶಿವಪ್ಪ ವನ್ನೂರಿಗೆ ಶಿಕ್ಷೆ ವಿಧಿಸಲಾಗಿದೆ.

ಪ್ರಾಸಿಕ್ಯೂಷನ್ ಪ್ರಕಾರ, ಆರೋಪಿಗಳು ಬಲವಂತವಾಗಿ ಮಹಿಳೆಯ ಮನೆಗೆ ನುಗ್ಗಿ, ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿ, ಆಕೆಯ ಮಂಗಳಸೂತ್ರವನ್ನು ಹರಿದು ಬೀದಿಗೆ ಎಸಿದಿದ್ದರು.

ಹೊಸ ವಂಟಮೂರಿ ಗ್ರಾಮದ ಯುವತಿ ಮತ್ತು ಯುವಕ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಯುವತಿಯ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ, ಹುಡುಗಿಯ ಮನೆಯವರು ಡಿಸೆಂಬರ್ 12, 2023 ರಂದು ಹುಡುಗಿಗೆ ಇನ್ನೊಬ್ಬ ಹುಡುಗನ ಜೊತೆ ನಿಶ್ಚಿತಾರ್ಥ ನಿಗದಿಪಡಿಸಿದ್ದರು. ಇದನ್ನು ತಿಳಿದ ನಂತರ, ಹುಡುಗಿ ತಾನು ಪ್ರೀತಿಸುತ್ತಿದ್ದ ಹುಡುಗನ ಜೊತೆ ಹಿಂದಿನ ರಾತ್ರಿ ಓಡಿಹೋಗಿದ್ದರು.

ಈ ವಿಷಯ ತಿಳಿದ ನಂತರ ಕೋಪಗೊಂಡ ಹುಡುಗಿಯ ಪೋಷಕರು ಹುಡುಗನ ಮನೆಗೆ ತೆರಳಿ ಅವರ ಮನೆಯನ್ನು ಧ್ವಂಸಗೊಳಿಸಿದ್ದರು. ಅಲ್ಲದೆ ಯುವತಿಯ ತಾಯಿಯನ್ನು ಥಳಿಸಿ, ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕುವ ಮೂಲಕ ಇಡೀ ಸಮಾಜ ತಲೆ ತಗ್ಗಿಸುವಂತೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್