ವಶಪಡಿಸಿಕೊಂಡಿರುವ ಸ್ಫೋಟಕ 
ರಾಜ್ಯ

ಬೆಂಗಳೂರಿನ ವಸತಿ ಪ್ರದೇಶದಲ್ಲಿ ಭಾರೀ ಸ್ಫೋಟಕ ಪತ್ತೆ; ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ!

ಕಲ್ಲು ಬಂಡೆಗಳನ್ನು ಒಡೆಯಲು "ಅಕ್ರಮವಾಗಿ" ಬಳಸಲಾಗುತ್ತಿದ್ದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಅನುಮಾನಸ್ಪದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಷಯನಗರದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿತ್ತು.

ಕಲ್ಲು ಬಂಡೆಗಳನ್ನು ಒಡೆಯಲು "ಅಕ್ರಮವಾಗಿ" ಬಳಸಲಾಗುತ್ತಿದ್ದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ.

ವಶಪಡಿಸಿಕೊಂಡ ವಸ್ತುಗಳಲ್ಲಿ ಕಲ್ಲು-ಕ್ರಷರ್ ಪೌಡರ್, ಲೈವ್ ಜೆಲೆಟಿನ್ ಸ್ಟಿಕ್‌ಗಳು, ಜೆಲ್ ಸ್ಫೋಟಕಗಳು, ಒಂದು ಟ್ರ್ಯಾಕ್ಟರ್ ಮತ್ತು ಒಂದು ನಿರ್ಮಾಣ ವಾಹನ ಸೇರಿವೆ ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ವಸತಿ ಬಡಾವಣೆಯೊಳಗಿನ ಒಂದು ಸ್ಥಳದಲ್ಲಿ ಕಲ್ಲು ಬಂಡೆಗಳನ್ನು ಒಡೆಯಲು ಸ್ಫೋಟಕಗಳನ್ನು ಬಳಸಲಾಗುತ್ತಿದ್ದು, ಇದು ಸುತ್ತಮುತ್ತಲಿನ ಕಟ್ಟಡಗಳಿಗೆ ಹಾನಿಯಾಗುತ್ತಿದೆ ಎಂದು ದೂರು ನೀಡಲಾಗಿದೆ.

ದೂರಿನ ಆಧಾರದ ಮೇಲೆ, ಹುಳಿಮಾವು ಪೊಲೀಸರು ಮಂಗಳವಾರ ಅಕ್ಷಯನಗರದಲ್ಲಿ ತಪಾಸಣೆ ನಡೆಸಿದರು.

ತನಿಖೆಯ ಸಮಯದಲ್ಲಿ, ಬಾಂಬ್ ನಿಷ್ಕ್ರಿಯ ದಳದ ಜೊತೆಗೆ ಪೊಲೀಸರು ದೂರುದಾರರು ಸೂಚಿಸಿದ ಸ್ಥಳವನ್ನು ಪರಿಶೀಲಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಪಾಸಣೆಯ ಸಮಯದಲ್ಲಿ, ಪೊಲೀಸರು ತಲಾ 20 ಕೆಜಿ ತೂಕದ ನಾಲ್ಕು ಚೀಲಗಳ ಕ್ರಷರ್ ಪುಡಿ(ಒಟ್ಟು 80 ಕೆಜಿ), 20 ಜೆಲ್ ಸ್ಫೋಟಕ ಕಡ್ಡಿಗಳು ಮತ್ತು 30 ಲೈವ್ ಡಿಟೋನೇಟರ್(ಜೆಲೆಟಿನ್) ಕೇಬಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಸ್ಥಳದಿಂದ ಒಂದು ಟ್ರ್ಯಾಕ್ಟರ್, ನಿರ್ಮಾಣ ವಾಹನ ಮತ್ತು ಅಗೆಯುವ ಯಂತ್ರವನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ.., ಲೇ ಅರೆಸ್ಸೆಸ್ಸು.. ನಿಂಗೆ ಮಾನ ಮರ್ಯಾದೆ ಇದ್ಯಾ..': ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ; Video

ಚುನಾವಣೆಗೂ ಮುನ್ನ SIRಗೆ ಆತುರ ಏಕೆ?: ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆ

ಹುಡುಗರು ಒಪ್ತಿಲ್ಲ.. ಮದುವೆ ವಿಳಂಬ, ತಾಯಿ ಅನಾರೋಗ್ಯ: ಹುಸೇನ್ ಸಾಗರ್ ಗೆ ಹಾರಿ ಮಹಿಳಾ ಟೆಕ್ಕಿ ಆತ್ಮಹತ್ಯೆ!

ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

'ಟ್ರಂಪ್ ಗೆ ಯಾರ ಬಗ್ಗೆಯೂ ಕಾಳಜಿ ಇಲ್ಲ.. ಅವರಿಗೇನು ಬೇಕೋ ಅದನ್ನೇ ಮಾಡುವುದು': ಉಧ್ಯಮಿ ಮೋಹನ್ ದಾಸ್ ಪೈ

SCROLL FOR NEXT