ಬಿಜೆಪಿ ನಾಯಕರ ಪ್ರತಿಭಟನೆ  
ರಾಜ್ಯ

ವಿಧಾನಸಭೆಯಲ್ಲಿ ತೀವ್ರ ಗದ್ದಲ, ಕೋಲಾಹಲ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ; ಕಲಾಪ ಮುಂದೂಡಿಕೆ

ನಿನ್ನೆ ಮಂಗಳವಾರ, ತಿಮ್ಮಾಪುರ ಅವರು ತಮ್ಮ ಹಾಗೂ ತಮ್ಮ ಪುತ್ರನ ವಿರುದ್ಧ ಮದ್ಯ ಪರವಾನಗಿ ನೀಡಿಕೆ ಮತ್ತು ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರಾಕರಿಸಿದ ನಂತರ, ವಿರೋಧ ಪಕ್ಷ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದರು.

ಬುಧವಾರ ಕರ್ನಾಟಕ ವಿಧಾನಸಭೆಯಲ್ಲಿ ಭಾರೀ ಗದ್ದಲದ ವಾತಾವರಣ ಕಂಡುಬಂದವು. ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸದನದ ಮಧ್ಯಭಾಗದಲ್ಲಿ (Well of the house) ಪ್ರತಿಭಟನೆ ನಡೆಸಿ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಯನ್ನು ಆಗ್ರಹಿಸಿದರು. ಅವರ ಇಲಾಖೆಯಲ್ಲಿ ಬಹುಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ನಿನ್ನೆ ಮಂಗಳವಾರ, ತಿಮ್ಮಾಪುರ ಅವರು ತಮ್ಮ ಹಾಗೂ ತಮ್ಮ ಪುತ್ರನ ವಿರುದ್ಧ ಮದ್ಯ ಪರವಾನಗಿ ನೀಡಿಕೆ ಮತ್ತು ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರಾಕರಿಸಿದ ನಂತರ, ವಿರೋಧ ಪಕ್ಷ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದರು.

ಇಂದು ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ, ಸದನದ ಮಧ್ಯಭಾಗದಲ್ಲಿದ್ದ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಗೆ ನಾಯಕತ್ವ ನೀಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ಅಬಕಾರಿ ಇಲಾಖೆಯಲ್ಲಿ ಪರವಾನಗಿ ನೀಡಲು ಹಾಗೂ ವರ್ಗಾವಣೆ ಸುಗಮಗೊಳಿಸಲು ಲಂಚ ಪಡೆಯಲಾಗುತ್ತಿದೆ ಎಂದು ಆರೋಪಿಸಿದರು.

ಮದ್ಯ ವ್ಯಾಪಾರಿಗಳ ಸಂಘವು ಅಬಕಾರಿ ಇಲಾಖೆಯ ಹಗರಣವು ಸುಮಾರು 6,000 ಕೋಟಿ ರೂಪಾಯಿ ಮೊತ್ತದಷ್ಟು ಇದೆ ಎಂದು ಆರೋಪಿಸಿದ್ದು, ಸಂಬಂಧಿತ ಆಡಿಯೋ ದಾಖಲೆಗಳನ್ನು ಬಿಡುಗಡೆ ಮಾಡಲಾಗಿದೆ. ಲೋಕಾಯುಕ್ತರಿಗೆ ದೂರುಗಳು ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

ಅವರು ಮತ್ತೊಂದು ಆರೋಪವಾಗಿ, ಲೂಟಿ ಮಾಡಿದ ಹಣವನ್ನು ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವು ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಪಕ್ಷದ ಹಣಕಾಸು ನೆರವಿಗೆ ಬಳಸುತ್ತಿದೆ ಎಂದು ಹೇಳಿದರು.

ರಾಜೀನಾಮೆ ಕೊಡಲಿ

ಅಬಕಾರಿ ಇಲಾಖೆಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಆಡಿಯೋ ಸಾಕ್ಷ್ಯಗಳನ್ನು ಒಳಗೊಂಡ ಮೂರು ಪೆನ್ ಡ್ರೈವ್‌ಗಳನ್ನು ಸದನದಲ್ಲಿ ನಾನು ನೀಡಿದ್ದೇನೆ. ಅಬಕಾರಿ ಉಪ ಆಯುಕ್ತರೊಬ್ಬರು ಸಚಿವರಿಗೆ ಕಮಿಷನ್ ಹೋಗುತ್ತದೆ ಎಂಬ ಹೇಳಿಕೆಯೂ ನೀಡಿದ್ದಾರೆ ಎಂದು ಆರ್ ಅಶೋಕ್ ಹೇಳಿದರು. ತಿಮ್ಮಾಪುರ ಅವರು ತಕ್ಷಣ ರಾಜೀನಾಮೆ ನೀಡಬೇಕು, ತನಿಖೆ ನಡೆಯಬೇಕು ಎಂದು ಅವರು ಒತ್ತಾಯಿಸಿದರು.

ಮುಖ್ಯಮಂತ್ರಿಗಳು ತಕ್ಷಣ ಸಚಿವರ ರಾಜೀನಾಮೆ ಪಡೆಯಲಿ. ತನಿಖೆ ನಡೆಯಲಿ. ಮೂರು ತಿಂಗಳ ನಂತರ ಅವರು ನಿರ್ದೋಷಿ ಎಂದು ಸಾಬೀತಾದರೆ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಅಶೋಕ್ ಒತ್ತಾಯಿಸಿದರು.

ಹಿಂದೆ ಕಾಂಗ್ರೆಸ್‌ನ ಕೆ.ಜೆ. ಜಾರ್ಜ್ ಹಾಗೂ ಬಿಜೆಪಿಯಲ್ಲಿದ್ದ ಕೆ.ಎಸ್. ಈಶ್ವರಪ್ಪ ಅವರು ಆರೋಪಗಳ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದು ನೆನಪಿಸಿದರು. ಸಚಿವರ ವಿರುದ್ಧ ಆರೋಪಗಳಿದ್ದರೂ ಕ್ರಮ ಕೈಗೊಳ್ಳದಿರುವುದರಿಂದ ಈ ಹಗರಣದಲ್ಲಿ ಮುಖ್ಯಮಂತ್ರಿಯ ಪಾಲು ಏನು ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ ಎಂದು ಅಶೋಕ ಹೇಳಿದರು.

ಸಿದ್ದರಾಮಯ್ಯ ಅವರು ನೈತಿಕತೆ ಬಗ್ಗೆ ಮಾತನಾಡುತ್ತಾರೆ. ಆದರೆ ಅವರಿಗೆ ನೈತಿಕತೆ ಇದೆಯೇ ಎಂದು ಅವರು ಪ್ರಶ್ನಿಸಿದರು.

ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಹಣವನ್ನು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಬಳಸಿಕೊಂಡಿದೆ ಎಂದು ಅವರು ಆರೋಪಿಸಿದರು.

ಈಗ ಅಸ್ಸಾಂ ಚುನಾವಣೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಚುನಾವಣಾ ಉಸ್ತುವಾರಿಯಾಗಿದ್ದಾರೆ. ಕೇರಳಕ್ಕೆ ಕೆ.ಜೆ. ಜಾರ್ಜ್ ಉಸ್ತುವಾರಿಯಾಗಿದ್ದಾರೆ. ಈ ಚುನಾವಣೆಗಳಿಗೆ ಬಳಸುತ್ತಿರುವ ಹಣ ಕರ್ನಾಟಕ ಅಬಕಾರಿ ಇಲಾಖೆಯಿಂದ ಬಂದಿದೆ. ಕಾಂಗ್ರೆಸ್ ಕರ್ನಾಟಕವನ್ನು ತನ್ನ ಎಟಿಎಂ ಎಂದು ಬಳಸುತ್ತಿದೆ ಎಂದು ನಾವು ಹೇಳುತ್ತಿದ್ದೇವೆ. ಆದರೆ ಈಗ ಕಾಂಗ್ರೆಸ್ ನಾಯಕತ್ವಕ್ಕೆ ಕರ್ನಾಟಕ ಒಂದು ರಿಸರ್ವ್ ಬ್ಯಾಂಕ್ ಆಗಿದೆ ಎಂದು ಆರೋಪಿಸಿದರು.

ಬಳಿಕ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸದನದ ಮಧ್ಯಭಾಗದಲ್ಲಿ ಪ್ರತಿಭಟನೆ ಮುಂದುವರಿಸಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಕೆಲ ಘೋಷಣೆಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೂ ಕೇಳಿಬಂದವು.

ವಿರೋಧ ಪಕ್ಷವನ್ನು ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮನವರಿಕೆ ಮಾಡಲು ಸ್ಪೀಕರ್ ಯು.ಟಿ. ಖಾದರ್ ಅವರ ಹಲವು ಬಾರಿ ಮನವಿ ಮಾಡಿಕೊಂಡರೂ ವಿಫಲವಾದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಮಂಡಿಸಿದ್ದ ನಿರ್ಣಯದ ಚರ್ಚೆಯನ್ನು ಮುಂದುವರಿಸಲು ಕಾಂಗ್ರೆಸ್ ಸದಸ್ಯರಿಗೆ ಅವಕಾಶ ನೀಡಿದರು.

ಈ ನಿರ್ಣಯದಲ್ಲಿ ಕೇಂದ್ರ ಸರ್ಕಾರವು ತಕ್ಷಣವೇ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ರದ್ದುಗೊಳಿಸಿ ಮನ್ರೇಗಾ ಪುನರ್ ಸ್ಥಾಪಿಸಬೇಕು ಎಂದು ಆಗ್ರಹಿಸಲಾಗಿದೆ.

ಸ್ವಲ್ಪ ಸಮಯದ ಬಳಿಕ ಘೋಷಣೆಗಳು ಮತ್ತು ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಾಗ, ಉಪ ಸ್ಪೀಕರ್ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸದನವನ್ನು ಕೆಲಕಾಲ ಮುಂದೂಡಿದರು.

ಇಲಾಖೆಯಲ್ಲಿ ಸುಧಾರಣೆ ತಂದಿದ್ದೇನೆ, ರಾಜೀನಾಮೆ ನೀಡುವುದಿಲ್ಲ

ನಾನು ಅಬಕಾರಿ ಸಚಿವನಾದ ಮೇಲೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಗಳನ್ನು ತಂದಿದ್ದೇನೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದೇನೆ. ನಾನು ಸಚಿವನಾದ ನಂತರ, ನಾನು ಪ್ರಕ್ರಿಯೆಯನ್ನು ಸರಳೀಕರಿಸಿದೆ ಮತ್ತು ಕೌನ್ಸೆಲಿಂಗ್ ವ್ಯವಸ್ಥೆಯನ್ನು ತಂದಿದ್ದೇನೆ. ಪ್ರತಿ ಐದು ವರ್ಷಗಳಿಗೊಮ್ಮೆ ನವೀಕರಣಕ್ಕಾಗಿ ನಾನು ನಿಬಂಧನೆಯನ್ನು ಮಾಡಿದ್ದೇನೆ, ಅದನ್ನು ವಾರ್ಷಿಕವಾಗಿ ಮಾಡುವುದರಿಂದ ಅದು ಸಮಸ್ಯೆಯಾಗುತ್ತದೆ. CL-7 ಗೆ 16 ಲಾಗಿನ್ ಅಗತ್ಯವಿತ್ತು, ಅಲ್ಲಿ ಎಲ್ಲರೂ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದ್ದರು. ನಾನು ಈ ಲಾಗಿನ್‌ಗಳನ್ನು ಏಳಕ್ಕೆ ಇಳಿಸಿದೆ ಎಂದು ತಿಮ್ಮಾಪುರ ಹೇಳಿದ್ದಾರೆ.

25 ಲಕ್ಷ ಲಂಚ ಪಡೆದ ಆರೋಪದ ಮೇಲೆ ಲೋಕಾಯುಕ್ತರಿಂದ ಸಿಕ್ಕಿಬಿದ್ದ ಅಧಿಕಾರಿಯೊಬ್ಬರು ನನ್ನ ಹೆಸರು ಉಲ್ಲೇಖಿಸಿದ್ದಾರೆ ಎಂದು ಹೇಳಿಕೊಂಡ ಆಡಿಯೊ ಕ್ಲಿಪ್ ಮೂಲಕ ಬಿಜೆಪಿ ಆರೋಪ ಮಾಡುತ್ತಿದೆ. ಅಧಿಕಾರಿ ನನ್ನ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಆಳ್ವಿಕೆಯಲ್ಲಿ ನಡೆದ ಹಗರಣಗಳನ್ನು ಪಟ್ಟಿ ಮಾಡಿದ ಸಚಿವರು, ಎಷ್ಟು ಸಚಿವರು ಆಗ ರಾಜೀನಾಮೆ ನೀಡಿದ್ದರು, ಯಾರೂ ರಾಜೀನಾಮೆ ನೀಡಿಲ್ಲ. ಸಿಎಂ ಜೊತೆ ಚರ್ಚಿಸಿದ ನಂತರ ನಾನು ಅನೇಕ ಸುಧಾರಣೆಗಳನ್ನು ಪರಿಚಯಿಸಿದೆ. ನಾನು ಯಾವ ತಪ್ಪು ಮಾಡಿದ್ದೇನೆ ಭ್ರಷ್ಟಾಚಾರದಲ್ಲಿ ನಾನು ಭಾಗಿಯಾಗಿದ್ದೇನೆ ಎನ್ನುವುದು ಸುಳ್ಳು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ.., ಲೇ ಅರೆಸ್ಸೆಸ್ಸು.. ನಿಂಗೆ ಮಾನ ಮರ್ಯಾದೆ ಇದ್ಯಾ..': ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇ ಗೌಡ

ಚುನಾವಣೆಗೂ ಮುನ್ನ SIRಗೆ ಆತುರ ಏಕೆ?: ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆ

VIDEO: ಅತ್ತಿಬೆಲೆ ಬಳಿ ಭಾರೀ ರಸ್ತೆ ಕುಸಿತ; ಬೆಂಗಳೂರು-ಹೊಸೂರು ವಾಹನ ಸಂಚಾರ ಅಸ್ತವ್ಯಸ್ತ!

Operation KIYA: ಉಧಂಪುರದಲ್ಲಿ ಎನ್ಕೌಂಟರ್; ಗುಹೆಯಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರ ಸದೆಬಡಿದ ಭಾರತೀಯ ಸೇನೆ..! Video

‘ಸ್ಸಾರಿ ಅಮ್ಮ-ಅಪ್ಪಾ': ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದು ಮೂವರು ಅಪ್ರಾಪ್ತ ಸೋದರಿಯರು ಆತ್ಮಹತ್ಯೆ; Video

SCROLL FOR NEXT