ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಇಂದು ಗುರುವಾರ ಬೆಳಗ್ಗೆ ಕ್ರೂಸರ್ ಮತ್ತು ಕ್ಯಾಂಟರ್ ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಜೇಂದ್ರಗಡದ ನಿವಾಸಿಗಳು ರೋಣ ಕಡೆಗೆ ತೆರಳುತ್ತಿದ್ದಾಗ ಸಂಭವಿಸಿದ ಈ ದುರ್ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತಪಟ್ಟವರನ್ನು ಗಜೇಂದ್ರಗಢ ಪಟ್ಟಣದ ಶಿವಾಜಿಪೇಟೆಯ ನಿವಾಸಿಗಳಾದ ಮರಿಯಂ ಹುನಗುಂದ(55ವ), ಅನ್ನಪೂರ್ಣ ಚಂಗಳಿ(45ವ) ಮತ್ತು ಸುಜಾತ ಹೊಸಮನಿ(30ವ) ಎಂದು ಗುರುತಿಸಲಾಗಿದೆ.
ಅಪಘಾತ ಸ್ಥಳಕ್ಕೆ ಗದಗ ಎಸ್ಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರು ಜನ ಕಾರ್ಮಿಕರಿಗೆ ಕೈ, ಕಾಲು ಮುರಿತವಾಗಿದ್ದು, ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ. ಗಾಯಾಳುಗಳ ಸ್ಥಿತಿ ಕಂಡು ಸಂಬಂಧಿಕರು ಕಣ್ಣೀರು ಹಾಕುವಂತಾಗಿದೆ.