ಸಿಜೆ ರಾಯ್ 
ರಾಜ್ಯ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: SITಯಿಂದ IT ಅಧಿಕಾರಿಗಳ ವಿಚಾರಣೆ ಸಾಧ್ಯತೆ..!

ಎಸ್‌ಐಟಿಗೆ ಐಟಿ ಅಧಿಕಾರಿಗಳನ್ನು ಪ್ರಶ್ನಿಸಿ ಅವರ ಹೇಳಿಕೆಗಳನ್ನು ದಾಖಲಿಸುವ ಅಧಿಕಾರ ಮಾತ್ರ ಇದೆ. ಆದರೆ, ತೆರಿಗೆ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವುದು ಐಟಿ ಅಧಿಕಾರಿಗಳ ಸ್ವೈಚ್ಛೆಗೆ ಒಳಪಟ್ಟಿದೆ.

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿಜೆ ರಾಯ್ ಅವರು ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿದೆ. ಆದರೆ, ಈ ಪ್ರಕರಣದಲ್ಲಿ ಆದಾಯ ತೆರಿಗೆ (ಐಟಿ) ಅಧಿಕಾರಿಗಳ ಪಾತ್ರದ ಕುರಿತು ತನಿಖೆಯ ವ್ಯಾಪ್ತಿ ಕುರಿತು ಚರ್ಚೆಗಳು ಶುರುವಾಗಿವೆ.

ಸಿಜೆ ರಾಯ್ ಕುಟುಂಬವು, “ಐಟಿ ಅಧಿಕಾರಿಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ” ಎಂದು ಗಂಭೀರ ಆರೋಪ ಮಾಡಿದ್ದು, ತೆರಿಗೆ ತಪ್ಪಿಸುವಿಕೆ ಸಂಬಂಧಿತ ಎಲ್ಲಾ ಕಡತಗಳು ಮತ್ತು ದಾಖಲೆಗಳು ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆಯ ವಶದಲ್ಲಿರುವುದರಿಂದ ಎಸ್‌ಐಟಿ ಸತ್ಯವನ್ನು ಬಯಲು ಮಾಡಲು ಸಾಧ್ಯವೇ ಎಂಬ ಪ್ರಶ್ನೆಗಳು ಶುರುವಾಗಿವೆ.

ಎಸ್‌ಐಟಿಗೆ ಐಟಿ ಅಧಿಕಾರಿಗಳನ್ನು ಪ್ರಶ್ನಿಸಿ ಅವರ ಹೇಳಿಕೆಗಳನ್ನು ದಾಖಲಿಸುವ ಅಧಿಕಾರ ಮಾತ್ರ ಇದೆ. ಆದರೆ, ತೆರಿಗೆ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವುದು ಐಟಿ ಅಧಿಕಾರಿಗಳ ಸ್ವೈಚ್ಛೆಗೆ ಒಳಪಟ್ಟಿದೆ ಎಂದು ಕಾನೂನು ತಜ್ಞರು ಮತ್ತು ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಐಟಿ ಅಧಿಕಾರಿಗಳು ಸಿಜೆ ರಾಯ್ ಅವರನ್ನು ವಿಚಾರಣೆ ಮಾಡುತ್ತಿರಲಿಲ್ಲ. ಹಲವು ತಿಂಗಳ ಮಾಹಿತಿ ಸಂಗ್ರಹದ ನಂತರ ಕೆಲವು ವಿಚಾರಗಳ ಬಗ್ಗೆ ಸ್ಪಷ್ಟತೆ ಪಡೆಯಲು ಮಾತುಕತೆ ನಡೆಸುತ್ತಿದ್ದರು. ಇದನ್ನು ವಿಚಾರಣೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಎಸ್‌ಐಟಿ ದಾಖಲೆಗಳನ್ನು ಬಲವಂತವಾಗಿ ಕೇಳಿದರೆ, ಐಟಿ ಅಧಿಕಾರಿಗಳು ನ್ಯಾಯಾಲಯದ ಮೆಟ್ಟಿಲೇರಬಹುದು. ಎಸ್‌ಐಟಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡ ದಿನ ನಾಲ್ವರು ಐಟಿ ಅಧಿಕಾರಿಗಳು ಅದೇ ಕಟ್ಟಡದಲ್ಲಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಖಂಡಿತವಾಗಿಯೂ ಎಸ್‌ಐಟಿಗೆ ಹೇಳಿಕೆ ನೀಡುವ ಸಾಧ್ಯತೆ ಇದೆ. ಆ ದಿನ ಕಚೇರಿಗೆ ಬಂದ ಉದ್ದೇಶ, ಸಿಜೆ ರಾಯ್ ಜೊತೆ ನಡೆದ ಮಾತುಕತೆ, ಯಾವುದೇ ಒತ್ತಡ ಅಥವಾ ಬೆದರಿಕೆ ಇದ್ದಿತೇ? ಎಂಬ ಅಂಶಗಳ ಕುರಿತು ವಿವರ ನೀಡಬೇಕಾಗುತ್ತದೆ ಎಂದು ಮತ್ತೊಬ್ಬ ತಜ್ಞರು ಹೇಳಿದ್ದಾರೆ.

ಹಿರಿಯ ವಕೀಲ ಎಸ್. ಶ್ಯಾಮಸುಂದರ್ ಮಾತನಾಡಿ, ಘಟನೆ ಐಟಿ ಅಧಿಕಾರಿಗಳ ಹಾಜರಿಯಲ್ಲಿ ನಡೆದಿರುವುದರಿಂದ, ಅವರನ್ನು ಪ್ರಶ್ನಿಸುವುದು ಎಸ್‌ಐಟಿಯ ಕರ್ತವ್ಯವೇ ಆಗಿದೆ. ಆದರೆ, ಅವರು ದಾಖಲೆ ನೀಡುವುದಕ್ಕೆ ಒಪ್ಪದೇ, ಎಸ್‌ಐಟಿಯು ಕೇವಲ ಅಪರಾಧ ಸಂಬಂಧಿತ ಅಂಶಗಳನ್ನೇ ಪರಿಶೀಲಿಸಲಿ ಎಂದು ಹೇಳಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ