ವಿಕ್ಟೋರಿಯಾ ಆಸ್ಪತ್ರೆ (Representative Image) 
ರಾಜ್ಯ

₹23.78 ಲಕ್ಷ ದುರುಪಯೋಗ: ವಿಕ್ಟೋರಿಯಾ ಆಸ್ಪತ್ರೆಯ ಎಂಟು ಹೊರಗುತ್ತಿಗೆ ಸಿಬ್ಬಂದಿ ವಿರುದ್ಧ FIR ದಾಖಲು

ಆರೋಪಿಗಳನ್ನು ಪ್ರೀತಿ, ಪುನಿತಾ, ಸಲ್ಮಾ, ಸತ್ಯ, ಶಶಿಕಲಾ, ಲಕ್ಷ್ಮಿಕಾಂತಮ್ಮ, ದರ್ಶನ್ ಮತ್ತು ಮಹೇಂದ್ರ ಎಂದು ಗುರುತಿಸಲಾಗಿದೆ.

ಬೆಂಗಳೂರು: ರಕ್ತ ಪರೀಕ್ಷೆಗಾಗಿ ರೋಗಿಗಳಿಂದ ಸಂಗ್ರಹಿಸಲಾದ ₹23.78 ಲಕ್ಷ ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪದ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ಇನ್ಫೋಸಿಸ್ ಲ್ಯಾಬ್ ಬಿಲ್ಲಿಂಗ್ ಕೌಂಟರ್‌ನಲ್ಲಿ ಕೆಲಸ ಮಾಡುತ್ತಿರುವ ಎಂಟು ಹೊರಗುತ್ತಿಗೆ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಆರೋಪಿಗಳು ಡೇಟಾ ಎಂಟ್ರಿ ಆಪರೇಟರ್‌ಗಳಾಗಿದ್ದು, ತಮ್ಮ UPI QR ಕೋಡ್ ಅನ್ನು ಇಡುವ ಮೂಲಕ ರೋಗಿಗಳಿಂದ ಬರುವ ಹಣ ವೈಯಕ್ತಿಕ ಖಾತೆಗೆ ಬರುವಂತೆ ನೋಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ದೀಪಕ್ ಎಸ್ ನೀಡಿರುವ ದೂರಿನ ಮೇರೆಗೆ ಫೆಬ್ರುವರಿ 3 ರಂದು ವಿಶ್ವೇಶ್ವರಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2025ರ ಜನವರಿ 1 ರಿಂದ ಮೇ 31ರ ನಡುವೆ ಆಸ್ಪತ್ರೆ ಆವರಣದಲ್ಲಿರುವ ಇನ್ಫೋಸಿಸ್ ಲ್ಯಾಬ್ ಕೌಂಟರ್‌ನಲ್ಲಿ ಈ ಅಪರಾಧ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ವಿಕ್ಟೋರಿಯಾ ಆಸ್ಪತ್ರೆಯ ಇನ್ಫೋಸಿಸ್ ಲ್ಯಾಬ್ ಬಿಲ್ಲಿಂಗ್ ಕೌಂಟರ್‌ಗಳಲ್ಲಿ, ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಆರೋಪಿಗಳು, ವಿವಿಧ ರಕ್ತ ಪರೀಕ್ಷೆಗಳಿಗಾಗಿ ರೋಗಿಗಳಿಂದ ಹಣವನ್ನು ಸಂಗ್ರಹಿಸಿದ್ದಾರೆ. ಸಂಗ್ರಹಿಸಿದ ₹23,78,693 ಹಣವನ್ನು ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ' ಎಂದು ಡಾ. ದೀಪಕ್ ಎಸ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳನ್ನು ಪ್ರೀತಿ, ಪುನಿತಾ, ಸಲ್ಮಾ, ಸತ್ಯ, ಶಶಿಕಲಾ, ಲಕ್ಷ್ಮಿಕಾಂತಮ್ಮ, ದರ್ಶನ್ ಮತ್ತು ಮಹೇಂದ್ರ ಎಂದು ಗುರುತಿಸಲಾಗಿದೆ.

ಆಸ್ಪತ್ರೆಯ ಸೂಪರಿಂಟೆಂಡೆಂಟ್‌ನಿಂದ ಬಂದ ದೂರಿನ ಆಧಾರದ ಮೇಲೆ, ಆರೋಪಿಗಳ ವಿರುದ್ಧ ವಂಚನೆ ಮತ್ತು ಕ್ರಿಮಿನಲ್ ನಂಬಿಕೆ ಉಲ್ಲಂಘನೆಗಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ಈ ಪ್ರಕರಣ ತನಿಖೆ ಹಂತದಲ್ಲಿದ್ದು, ಹಣಕಾಸಿನ ದಾಖಲೆಗಳು ಮತ್ತು ಹೇಳಿಕೆಗಳನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

WPL 2026: ಡೆಲ್ಲಿ ತಂಡವನ್ನು ಮಣಿಸಿ ಸತತ 2ನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡ RCB; ಇತಿಹಾಸ ನಿರ್ಮಿಸಿದ ತಂಡ!

'ನೀವು ಎಷ್ಟೇ ಕಿರುಚಾಡಿದ್ರು, ನನ್ನ ಸಮಾಧಿ ತೋಡಲು ಸಾಧ್ಯವಿಲ್ಲ'; ರಾಜ್ಯಸಭೆಯಲ್ಲಿ ವಿಪಕ್ಷಗಳ ವಿರುದ್ಧ ಮೋದಿ ಗುಡುಗು!

ವಾಷಿಂಗ್ ಟನ್ ಪೋಸ್ಟ್ ನ 300 ಪತ್ರಕರ್ತರ ಉದ್ಯೋಗ ಕಡಿತ; ನೌಕರಿ ಕಳೆದುಕೊಂಡ ಪುತ್ರನ ಬಗ್ಗೆ ಶಶಿ ತರೂರ್ ಹೇಳಿದ್ದೇನು?

Video: ಸ್ಪೀಕರ್ ಹಿಂದೆ ಅಡಗಿಕೊಂಡ ಪ್ರಧಾನಿ ಮೋದಿ; ಬೆದರಿಕೆ ಹೇಳಿಕೆ 'ಸಂಪೂರ್ಣ ಸುಳ್ಳು' ಎಂದ ಕಾಂಗ್ರೆಸ್

ಸತ್ಯಕ್ಕೆ ಹೆದರಿ, ಸುಳ್ಳಿನಲ್ಲಿ ಆಶ್ರಯ: ರಾಜ್ಯಸಭೆಯಲ್ಲಿನ ಪ್ರಧಾನಿ ಭಾಷಣದ ವಿರುದ್ಧ ರಾಹುಲ್ ಕಿಡಿ!

SCROLL FOR NEXT