ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿರುವ ತಾಲ್ಲೂಕು ಕಚೇರಿಯ ಮುಂದೆ ಮಂಗಳವಾರ ಪ್ರಸನ್ನ ಕುಮಾರ್ ಪ್ರತಿಭಟನೆ ಮಾಡಿದರು.  
ರಾಜ್ಯ

'ಅಧಿಕಾರಿಗಳಿಗೆ ಲಂಚ ಕೊಡಲು ನನ್ನ ಬಳಿ ಹಣವಿಲ್ಲ, ಈ ಮೂಲಂಗಿಯನ್ನೇ ಕೊಡುತ್ತೇನೆ': ಮೈಕ್ ಮೂಲಕ ಘೋಷಣೆ ಮಾಡಿದ ರೈತ! Video

ಲೋಕಾಯುಕ್ತರು ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದರೂ ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳು ರಸ್ತೆ ಯೋಜನೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ.

ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕಿನ ರೈತರೊಬ್ಬರು ಹತಾಶೆಯಿಂದ ಅಧಿಕಾರಿಗಳ ಗಮನ ಸೆಳೆಯಲು ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಿ ಸುದ್ದಿಯಾಗಿದ್ದಾರೆ. ಗ್ರಾಮದಲ್ಲಿ ತನ್ನ ಜಮೀನನ್ನು ಹೆದ್ದಾರಿಗೆ ಸಂಪರ್ಕಿಸುವ ರಸ್ತೆ ನಿರ್ಮಿಸಲು ಅನುಮತಿ ನೀಡಲು ನಿರಾಕರಿಸಿದ ಕಂದಾಯ ಅಧಿಕಾರಿಗೆ ಮೂಲಂಗಿ ಕಟ್ಟು ನೀಡುವ ಮೂಲಕ ಹೊಸ ರೀತಿಯ ಪ್ರತಿಭಟನೆ ನಡೆಸಿದ್ದಾರೆ.

ಜಕ್ಕೇನಹಳ್ಳಿ ಗ್ರಾಮದ ನಿವಾಸಿ ಪ್ರಸನ್ನ ಕುಮಾರ್ ಮಂಗಳವಾರ ತಮ್ಮ ಜಮೀನಿನಲ್ಲಿ ಬೆಳೆದ ಮೂಲಂಗಿಯನ್ನು ತಾಲ್ಲೂಕು ಕಚೇರಿಗೆ ತಂದು, ಸಂಬಂಧಪಟ್ಟ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರಿಗೆ ಲಂಚ ನೀಡಲು ತಮ್ಮ ಬಳಿ ಹಣವಿಲ್ಲದ ಕಾರಣ, ಮೂಲಂಗಿಯನ್ನೇ ಲಂಚವಾಗಿ ನೀಡುವುದಾಗಿ ಪೋರ್ಟಬಲ್ ಧ್ವನಿವರ್ಧಕದ ಮೂಲಕ ಘೋಷಿಸಿದರು.

ಲೋಕಾಯುಕ್ತರು ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದರೂ ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳು ರಸ್ತೆ ಯೋಜನೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ.

ಅಧಿಕಾರಿಗಳಿಗೆ ಲಂಚ ನೀಡಲು ನನ್ನ ಬಳಿ ಹಣವಿಲ್ಲ. ಬದಲಿಗೆ, ನನ್ನ ಜಮೀನಿನಲ್ಲಿ ಬೆಳೆದ ಮೂಲಂಗಿಯನ್ನು ಲಂಚವಾಗಿ ನೀಡುತ್ತೇನೆ ಎಂದು ಹೇಳಿದರು. ರೈತ ತನ್ನ ಸ್ವಂತ ಭೂಮಿಯಲ್ಲಿ ತರಕಾರಿ ಮತ್ತು ಇತರ ಕೃಷಿ ಉತ್ಪನ್ನಗಳನ್ನು ಬೆಳೆಯುತ್ತಾನೆ. ಈಗಿರುವ ರಸ್ತೆಯ ಮೇಲಿನ ಅತಿಕ್ರಮಣವನ್ನು ತೆಗೆದುಹಾಕಬೇಕು ಅಥವಾ ಹೊಸದನ್ನು ನಿರ್ಮಿಸಬೇಕು ಎಂಬ ನನ್ನ ಮನವಿಗೆ ಅಧಿಕಾರಿಗಳು ಗಮನ ಕೊಡದ ಕಾರಣ ನಾನು ಲೋಕಾಯುಕ್ತ ನ್ಯಾಯಾಲಯವನ್ನು ಸಂಪರ್ಕಿಸಿದ್ದೆ" ಎಂದು ಪ್ರಸನ್ನ ಕುಮಾರ್ ಹೇಳಿದರು.

ಒಂದು ತಿಂಗಳೊಳಗೆ ರೈತನ ಭೂಮಿಗೆ ಹೊಸ ರಸ್ತೆ ನಿರ್ಮಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಆದೇಶಿಸಿದರು, ಆದರೆ ಅವರು ಇನ್ನೂ ಸ್ಥಳ ಪರಿಶೀಲನೆ ನಡೆಸಿಲ್ಲ. ತಹಶೀಲ್ದಾರ್‌ಗೆ ಮಾಡಿದ ಮನವಿಗೂ ಇದುವರೆಗೆ ಪ್ರತಿಕ್ರಿಯೆ ಸಿಕ್ಕಿಲ್ಲ. ಕೆಲಸ ಪೂರ್ಣಗೊಳಿಸಲು ಶಿವನಗೆರೆ ಗ್ರಾಮ ಲೆಕ್ಕಪತ್ರಗಾರರು ಹಣಕ್ಕಾಗಿ ತಮಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ಮಧುಗುರಿಯ ಸಹಾಯಕ ಆಯುಕ್ತ ಶಿವಪ್ಪ ಗೋಟೂರು ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ(The New Indian Express) ಜೊತೆ ಮಾತನಾಡಿದ್ದಾರೆ, ಈಗಾಗಲೇ ರಸ್ತೆ ನಿರ್ಮಿಸಲಾಗಿದೆ. ಆದರೆ ರೈತ ಪ್ರಸನ್ನ ಕುಮಾರ್ ತಮ್ಮ ಅನುಕೂಲಕ್ಕಾಗಿ ತನ್ನ ಸಹೋದರನ ಜಮೀನಿನ ಮೂಲಕ ಅದನ್ನು ಹಾಕಬೇಕೆಂದು ಒತ್ತಾಯಿಸುತ್ತಿದ್ದಾರೆ. "ಸಂಬಂಧಪಟ್ಟ ತಹಶೀಲ್ದಾರ್‌ಗೆ ಸ್ಥಳ ಭೇಟಿ ನೀಡಿ ವರದಿ ಸಲ್ಲಿಸಲು ನಾನು ಸೂಚಿಸುತ್ತೇನೆ. ಅಧಿಕಾರಿಗಳು ತಪ್ಪಿತಸ್ಥರಾಗಿದ್ದರೆ, ನಾನು ಸೂಕ್ತ ಕ್ರಮ ಕೈಗೊಳ್ಳುತ್ತೇನೆ" ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

WPL 2026: ಡೆಲ್ಲಿ ತಂಡವನ್ನು ಮಣಿಸಿ ಸತತ 2ನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡ RCB; ಇತಿಹಾಸ ನಿರ್ಮಿಸಿದ ತಂಡ!

'ನೀವು ಎಷ್ಟೇ ಕಿರುಚಾಡಿದ್ರು, ನನ್ನ ಸಮಾಧಿ ತೋಡಲು ಸಾಧ್ಯವಿಲ್ಲ'; ರಾಜ್ಯಸಭೆಯಲ್ಲಿ ವಿಪಕ್ಷಗಳ ವಿರುದ್ಧ ಮೋದಿ ಗುಡುಗು!

ವಾಷಿಂಗ್ ಟನ್ ಪೋಸ್ಟ್ ನ 300 ಪತ್ರಕರ್ತರ ಉದ್ಯೋಗ ಕಡಿತ; ನೌಕರಿ ಕಳೆದುಕೊಂಡ ಪುತ್ರನ ಬಗ್ಗೆ ಶಶಿ ತರೂರ್ ಹೇಳಿದ್ದೇನು?

Video: ಸ್ಪೀಕರ್ ಹಿಂದೆ ಅಡಗಿಕೊಂಡ ಪ್ರಧಾನಿ ಮೋದಿ; ಬೆದರಿಕೆ ಹೇಳಿಕೆ 'ಸಂಪೂರ್ಣ ಸುಳ್ಳು' ಎಂದ ಕಾಂಗ್ರೆಸ್

ಸತ್ಯಕ್ಕೆ ಹೆದರಿ, ಸುಳ್ಳಿನಲ್ಲಿ ಆಶ್ರಯ: ರಾಜ್ಯಸಭೆಯಲ್ಲಿನ ಪ್ರಧಾನಿ ಭಾಷಣದ ವಿರುದ್ಧ ರಾಹುಲ್ ಕಿಡಿ!

SCROLL FOR NEXT