ಮಂಡ್ಯ: ಕಾವೇರಿ ನದಿಗೆ ಹಾರಿ ವೃದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ನಡೆದಿದೆ.
ಚಾಮರಾಜನಗರದ ಬೆಂಡರವಾಡಿಯ ಗುಂಡಮ್ಮ(78) ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆ. ಕುಟುಂಬ ಕಲಹದಿಂದ ಬೇಸತ್ತು ಪಟ್ಟಣಕ್ಕೆ ಬಂದು ನದಿಗೆ ಬಿದ್ದು ಆತ್ಮಹತ್ಯೆ ಯತ್ನಿಸಿದ್ದಾರೆ.
ನದಿಗೆ ಬಿದ್ದು ಒದ್ದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದರಿಂದ ಸ್ಥಳೀಯರಾದ ವಿ. ಸುರೇಶ್ ಮತ್ತು ನಿಸಾರ್ ಅಹ್ಮದ್ ನದಿಗೆ ಹಾರಿ ಮಹಿಳೆಯನ್ನು ರಕ್ಷಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.