ಕಾಂಗ್ರೆಸ್ ಶಾಸಕ ಸತೀಶ್ ಸೈಲ್ 
ರಾಜ್ಯ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್​ಗೆ ಜಾಮೀನು

ವೈದ್ಯಕೀಯ ಕಾರಣ ನೀಡಿ ಸತೀಶ್ ಸೈಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೇಳಿದೆ.

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟ್ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ವೈದ್ಯಕೀಯ ಕಾರಣ ನೀಡಿ ಸತೀಶ್ ಸೈಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ. ಲಿವರ್ ಕಸಿ ಕುರಿತು ಎರಡು ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು‌ ಎಂಬ ನಿರ್ದೇಶನ ನೀಡಿ, ಜಾಮೀನು ಮಂಜೂರು ಮಾಡಿದೆ.

ಪ್ರಾಸಿಕ್ಯೂಷನ್ ಸಾಕ್ಷ್ಯದ ಮೇಲೆ ಪ್ರಭಾವ ಬೀರಬಾರದು. ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತೊಂದರೆ ಉಂಟು ಮಾಡಬಾರದು. ಐದು ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಒಂದು ಭದ್ರತಾ ಖಾತರಿ ಒದಗಿಸಬೇಕು ಎಂದು ಹೈಕೋರ್ಟ್‌ ಷರತ್ತು ವಿಧಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಕದ್ದು, ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್‌ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸಿಐಅರ್ ದಾಖಲಿಸಿಕೊಂಡಿದ್ದ ಇಡಿ ಸಹ ತನಿಖೆ ಆರಂಭಿಸಿತ್ತು. ಇದೇ ಆಗಸ್ಟ್‌ 13 ಮತ್ತು 14ರಂದು ಸತೀಶ್ ಅವರ ಕಾರವಾರ ಮತ್ತು ಬೆಂಗಳೂರಿನ ಮನೆಗಳ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ರೂ.13 ಕೋಟಿಯಷ್ಟು ನಗದು ಮತ್ತು ಚಿನ್ನಾಭರಣ ವಶಕ್ಕೆ ಪಡೆದಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಸೆಪ್ಟೆಂಬರ್ 10 ರಂದು ವಿಚಾರಣೆಗೆ ಹಾಜರಾಗಿದ್ದ ಸತೀಶ್‌ ಸೈಲ್ ಅವರನ್ನು ಇಡಿ ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'

‘ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ಮತ್ತೆ ಪ್ರತಿಭಟನೆ!’: ಕೇಂದ್ರಕ್ಕೆ ಬಾಬಾ ರಾಮದೇವ್ ಖಡಕ್ ಎಚ್ಚರಿಕೆ

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಪಶ್ಚಿಮ ಬಂಗಾಳ: ದೇವಸ್ಥಾನ ಸಮೀಪದ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ: 7 ಯಾತ್ರಿಕರು ಸಜೀವ ದಹನ