ರಾಜ್ಯ

ದುಬೈ ಬಿಗ್ ಟಿಕೆಟ್ ಲಕ್ಕಿ ಡ್ರಾ: ಉಡುಪಿಯ ಯುವಕನಿಗೆ ಹೊಡೆಯಿತು ಭರ್ಜರಿ 49 ಕೋಟಿ ರೂ. ಲಾಟ್ರಿ!

ಓಮನ್​​​ನಲ್ಲಿ ಚಿಲ್ಲರೆ ವ್ಯಾಪಾರದ ಸೇಲ್ಸ್​​ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಉಡುಪಿಯ ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಾಂತನು ಶೆಟ್ಟಿಗಾರ್ ಅವರಿಗೆ ಬರೋಬ್ಬರಿ 49 ಕೋಟಿ ರೂ. ಲಾಟರಿ ಹೊಡೆದಿದೆ.

ಉಡುಪಿ: ದುಬೈನ ಪ್ರತಿಷ್ಠಿತ ಲಾಟರಿಯಾದ ಬಿಗ್ ಟಿಕೆಟ್ ನ ಲಕ್ಕಿ ಡ್ರಾದಲ್ಲಿ ಉಡುಪಿಯ ಯುವಕನಿಗೆ ಭರ್ಜರಿ 49 ಕೋಟಿ ರೂ. ಬಹುಮಾನ ಸಿಕ್ಕಿದೆ.

ಓಮನ್​​​ನಲ್ಲಿ ಚಿಲ್ಲರೆ ವ್ಯಾಪಾರದ ಸೇಲ್ಸ್​​ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಉಡುಪಿಯ ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಾಂತನು ಶೆಟ್ಟಿಗಾರ್ ಅವರಿಗೆ ಬರೋಬ್ಬರಿ 49 ಕೋಟಿ ರೂ. ಲಾಟರಿ ಹೊಡೆದಿದೆ.

33 ವರ್ಷದ ಶಾಂತನು ಅವರು ಓಮನ್​​​ನಲ್ಲಿ ರಿಟೇಲ್‌ ವಲಯದ ಉದ್ಯೋಗದಲ್ಲಿದ್ದು, ಇದೇ ಜನವರಿ 20ರಂದು ಬಿಗ್‌ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಬಿಗ್‌ ಟಿಕೆಟ್ ಡ್ರಾ ಆಗಿದ್ದು, ಇದರಲ್ಲಿ ಶಂತನು ಅವರಿಗೆ ಅದೃಷ್ಟ ಖುಲಾಯಿಸಿದೆ.

ಶಾಂತನು ತನ್ನ ಸ್ನೇಹಿತನ ಜೊತೆ ಸೇರಿ ಈ ಟಿಕೆಟ್ ಖರೀದಿಸಿದ್ದರು. ಹೀಗಾಗಿ ಬಹುಮಾನವನ್ನು ಸಹ ಸ್ನೇಹಿತನ ಜೊತೆ ಹಂಚಿಕೊಳ್ಳಲು ನಿರ್ಧರಿಸಿದ್ದಾರೆ.

ಒಟ್ಟು 49 ಕೋಟಿ ರೂಪಾಯಿನಲ್ಲಿ ಇಬ್ಬರೂ ತಲಾ 24.5 ಕೋಟಿ ರೂ. ಹಂಚಿಕೊಳ್ಳಲು ನಿರ್ಧರಿಸಿರುವುದಾಗಿ ಸ್ವತಃ ಶಾಂತನು ಹೇಳಿಕೊಂಡಿದ್ದಾರೆ.

2021ರಿಂದಲೂ ಬಿಗ್‌ ಟಿಕೆಟ್‌ ರಾಫಲ್‌ಗಳಲ್ಲಿ ಭಾಗವಹಿಸುತ್ತಿದ್ದೆ. ಈ ಗೆಲುವು ತುಂಬಾ ಅನಿರೀಕ್ಷಿತವಾಗಿತ್ತು. ನನಗೆ ಸಿಕ್ಕಿರುವುದಕ್ಕೆ ತುಂಬಾ ಖುಷಿಯಾಗಿದೆ ಎಂದಿರುವ ಶಾಂತನು, ಬಹುಮಾನದಿಂದ ಬಂದ ಹಣವನ್ನು ಹೇಗೆ ಬಳಸಬೇಕೆಂದು ಇದುವರೆಗೆ ಯೋಚಿಸಿಲ್ಲ ಎಂದಿದ್ದಾರೆ.

1992ರಲ್ಲಿ ಯುಎಇನಲ್ಲಿ ಈ ಬಿಗ್‌ ಟಿಕೆಟ್‌ ಲಕ್ಕಿ ಡ್ರಾ ಪ್ರಾರಂಭವಾಯಿತು. ಆರಂಭದಲ್ಲಿ ಸುಮಾರು 2 ಕೋಟಿ ರೂ.ನಿಂದ ಆರಂಭವಾದ ಲಾಟರಿ ಇದೀಗ 49 ಕೋಟಿ ರರೂ.ಗೆ ಏರಿಕೆಯಾಗಿದ್ದು, ದೇಶದ ಪ್ರಮುಖ ಲಾಟರಿ ಡ್ರಾಗಳಲ್ಲಿ ಒಂದೆನಿಸಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯ ಅಂಗೀಕಾರ; ವಿಪಕ್ಷಗಳ ತೀವ್ರ ಗದ್ದಲ, ಮಧ್ಯಾಹ್ನ 3 ಗಂಟೆಗೆ ಲೋಕಸಭೆ ಕಲಾಪ ಮುಂದೂಡಿಕೆ

ಭಾರತೀಯ ವಾಯುಪಡೆಗೆ ಹಸ್ತಾಂತರಿಸಲು 5 ತೇಜಸ್ ಜೆಟ್‌ಗಳು ಸಿದ್ಧ: HAL

Thank you, Pakistan: ಭಾರತದ ವಿರುದ್ಧ ಬಾಂಗ್ಲಾದೇಶದ ಹಗೆತನ ಬಟ್ಟ ಬಯಲು!

ಗಂಡ-ಹೆಂಡತಿ ಜಗಳ: ಒಂದು ಮಾಡಲು ಹೋದ ಹಿಂದೂ ವ್ಯಕ್ತಿ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ!

ನಮ್ಮ ರಾಜಕೀಯ ಶಕ್ತಿಯನ್ನು HDKಗೆ ಧಾರೆ ಎರೆದಿದ್ದೇವೆ: ನಾವು ಬಾಯ್ಬಿಟ್ರೆ ಬ್ಲಾಸ್ಟ್ ಆಗುತ್ತೆ, ಅಭ್ಯರ್ಥಿ ಘೋಷಣೆ ಮಾಡಲು ನಿಖಿಲ್ ಗೆ ಏನು ಅಧಿಕಾರವಿದೆ?

SCROLL FOR NEXT