ಕಾರು ಸರ್ವಿಸ್ ಸೆಂಟರ್  
ರಾಜ್ಯ

ವಿಜಯಪುರ: ಕಾರು ಸರ್ವಿಸ್ ಸೆಂಟರ್ ನಲ್ಲಿ ಅಗ್ನಿ ಅವಘಡ, 20ಕ್ಕೂ ಹೆಚ್ಚು ವಾಹನ ಭಸ್ಮ; Video

ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಕಾರಿನ ಬಿಡಿಭಾಗಗಳು ಕೂಡ ಬೆಂಕಿಗೆ ಆಹುತಿಯಾಗಿವೆ.

ವಿಜಯಪುರ: ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹೆಚ್‌ಎಂಕೆ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಸುಮಾರು 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ. ಹನುಮಂತ ಕನಮಡಿ ಅವರಿಗೆ ಸೇರಿದ ಈ ಸರ್ವೀಸ್ ಸೆಂಟರ್‌ನಲ್ಲಿ ರಿಪೇರಿ ಮತ್ತು ಸರ್ವಿಸ್‌ಗಾಗಿ ನಿಲ್ಲಿಸಲಾಗಿದ್ದ ವಿವಿಧ ಕಂಪನಿಗಳ ಕಾರುಗಳು ಬೆಂಕಿಗಾಹುತಿಯಾಗಿವೆ.

ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಕಾರಿನ ಬಿಡಿಭಾಗಗಳು ಕೂಡ ಬೆಂಕಿಗೆ ಆಹುತಿಯಾಗಿವೆ. ಸುಟ್ಟುಹೋದ ಕಾರುಗಳ ಒಟ್ಟು ಮೌಲ್ಯ ಒಂದು ಕೋಟಿ ರೂಪಾಯಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ದುರ್ಘಟನೆಯಲ್ಲಿ ಸರ್ವೀಸ್ ಸೆಂಟರ್‌ನಲ್ಲಿ ಯಾರೂ ಇಲ್ಲದಿರುವ ಕಾರಣ ಸಾವು-ನೋವು ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ಸುತ್ತಮುತ್ತ ವ್ಯಾಪಿಸದಂತೆ ಹರಸಾಹಸ ಪಟ್ಟು ನಿಯಂತ್ರಣಕ್ಕೆ ತಂದರು. ಘಟನಾ ಸ್ಥಳಕ್ಕೆ ಗೋಲಗುಂಬಜ್ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾನೂನು ಸುವ್ಯವಸ್ಥೆಗೂ GDPಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ನಾನು ಸಿಎಂ ಆಗಿ ಮೊದಲ ಸಂಪುಟ ಸಭೆಯಲ್ಲಿಯೇ ಮುಸ್ಲಿಂರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ: ಶಾಸಕ ಯತ್ನಾಳ್

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ, ಚಿಂತಿಸಬೇಡಿ: ಪಶ್ಚಿಮ-ಏಷ್ಯಾ ಯುದ್ಧದ ನಡುವೆ ಇರಾನ್ ಅಭಯ

ಮಾಲ್ಡಾದಲ್ಲಿ ಭಾರೀ ಅಶಾಂತಿ: 7 ನ್ಯಾಯಾಂಗ ಅಧಿಕಾರಿಗಳನ್ನು 9 ಗಂಟೆ ಒತ್ತೆಯಾಳಾಗಿಸಿದ ಉದ್ರಿಕ್ತರು; ದೀದಿ ವಿರುದ್ಧ CJI ಗರಂ

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕಚ್ಚಾ ತೈಲ ಬೆಲೆ ಏರಿಕೆ ಎಫೆಕ್ಟ್; ಆರಂಭಿಕ ವಹಿವಾಟಿನಲ್ಲಿ ಶೇ.2ರಷ್ಟು ಕುಸಿತ

SCROLL FOR NEXT