ಯಶಸ್ವಿನಿ ಗೌಡ  
ರಾಜ್ಯ

ಬೆಂಗಳೂರು: ಉದ್ಯಮಿ ಕಿಡ್ನಾಪ್ ಪ್ರಕರಣ; ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಬಂಧನ

ರಿಯಲ್‌ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಆ ಪ್ರಕರಣದಲ್ಲಿ ಯಶಸ್ವಿನಿಗೌಡ ಅವರ ಪಾತ್ರವಿರುವುದು ಕಂಡಬಂದಿತ್ತು.

ಬೆಂಗಳೂರು: ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿಗೆ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡಳನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6.30ರ ಸುಮಾರಿಗೆ ರಿಯಲ್‌ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಆ ಪ್ರಕರಣದಲ್ಲಿ ಯಶಸ್ವಿನಿಗೌಡ ಅವರ ಪಾತ್ರವಿರುವುದು ಕಂಡಬಂದಿತ್ತು. ಕೋಕಾ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ತನಿಖೆಯಲ್ಲಿ ರೌಡಿಶೀಟರ್ ಬೇಕರಿ ರಘು ಕೈವಾಡ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ, ಆತನನ್ನು ಸಹ ಇತ್ತೀಚೆಗೆ ಮಂಡ್ಯದಲ್ಲಿ ಬಂಧಿಸಲಾಗಿತ್ತು. ಆಗ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇಲೆ ಯಶಸ್ವಿನಿ ಗೌಡ ವಿರುದ್ಧ ಮಂಡ್ಯ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉದ್ಯಮಿ ಮನೋಜ್ ಕುಮಾರ್‌ ಅವರಿಗೆ ಪರಿಚಿತನಾಗಿದ್ದ ರಾಜೇಶ್‌ ಖ್ಯಾತ ಸಿನಿಮಾ ನಿರ್ದೇಶಕರೊಬ್ಬರಿಗೆ 1.20 ಲಕ್ಷ ರೂಪಾಯಿ ಸಾಲ ಕೊಡಿಸಿದ್ದ. ಆದರೆ ಒಂದು ವರ್ಷ ಕಳೆದರೂ ಸಾಲದ ಹಣವನ್ನು ನಿರ್ದೇಶಕ ಹಿಂತಿರುಗಿಸದಿದ್ದಾಗ ರಾಜೇಶ್ ಮೇಲೆ ಮನೋಜ್ ಕುಮಾರ್‌ ಒತ್ತಡ ಹೇರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದಲ್ಲೇ ಅಧಿವೇಶನಕ್ಕೆ ತೆರೆ: ಲೋಕಸಭೆ ಶೇ 19, ರಾಜ್ಯಸಭೆ ಶೇ 39ರಷ್ಟು ಕಲಾಪ ಫಲಪ್ರದ: ಕಿರಣ್ ರಿಜಿಜು ಮಾಹಿತಿ

ಮುಂಗಾರು ಅಧಿವೇಶನ ಆರಂಭ: ವಿಧಾನಸಭೆ ಹೊಸ್ತಿಲಿಗೆ, CM ಪೀಠಕ್ಕೆ ಶಿರಬಾಗಿ ನಮಸ್ಕರಿಸಿದ ಡಿಕೆ ಶಿವಕುಮಾರ್

‘ನನ್ನನ್ನು ಅಸ್ಪೃಶ್ಯನಂತೆ ಕಂಡು ಶುದ್ಧೀಕರಣ ಮಾಡಿದರು’: ಬಿಜೆಪಿ ವಿರುದ್ಧ Mallikarjun Kharge ಕಿಡಿ, ನಡ್ಡಾ ಪ್ರತಿಕ್ರಿಯೆ

ರಾಯಚೂರು ಪೊಲೀಸರ ಭರ್ಜರಿ ಬೇಟೆ; ಉಗ್ರರೊಂದಿಗೆ ಸಂಪರ್ಕ, ಟೀಂ ಅಂಗಡಿ ಮಾಲೀಕ Sahil ಬಂಧನ, ಶಸ್ತ್ರಾಸ್ತ್ರ ಪೂರೈಕೆ ಚರ್ಚೆ ಮಾಡಿದ್ದ ಭೂಪ!

'Time To Move On'.. ವಿವಾದ ಮುಂದುವರಿಸುವ ಸಮಯವಲ್ಲ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಮಹತ್ವದ ಸೂಚನೆ