ತುಮಕೂರು: ವಿಧಾನಸಭೆಯ ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯಲಿದೆ. ಮೈತ್ರಿ ಅನಿವಾರ್ಯವಾಗಿದೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೈತ್ರಿ ಕುರಿತು ಈಗಾಗಲೇ ನವದೆಹಲಿಯಲ್ಲಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಬಳಿ ಮಾತನಾಡಿ ಆಗಿದೆ ಎಂದು ಹೇಳಿದರು.
ಮೆಟ್ರೊ ಪ್ರಯಾಣ ದರ ಹೆಚ್ಚಳ ಸರಿಯಲ್ಲ. ಈಗಾಗಲೇ ಜನಸಾಮಾನ್ಯರು ಬದುಕುವುದು ಕಷ್ಟಕರವಾಗಿದೆ. ಹೆಚ್ಚಿಸಿರುವ ದರವನ್ನು ತಕ್ಷಣ ವಾಪಸ್ ಪಡೆಯಬೇಕುಎಂದು ಆಗ್ರಹಿಸಿದರು.
ರಾಜ್ಯದ ಜನರು ಬದಲಾವಣೆ ಬಯಸುತ್ತಿದ್ದಾರೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿ(ಎಸ್) ಮೈತ್ರಿಕೂಟ ಗೆದ್ದು ಸರ್ಕಾರ ರಚಿಸುತ್ತದೆ ಎಂದು ಯಡಿಯೂರಪ್ಪ ಹೇಳಿದರು. ನಮ್ಮ ಮೆಟ್ರೋ ದರ ಏರಿಕೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ ಯಡಿಯೂರಪ್ಪ, "ಜನರು ವಿವಿಧ ಸರಕುಗಳ ಬೆಲೆ ಏರಿಕೆಯನ್ನು ನಿಭಾಯಿಸಲು ಹೆಣಗಾಡುತ್ತಿದ್ದಾರೆ ಎಂದು ಹೇಳಿದ್ದಾರೆ.