ಒಳಾಂಗಣ ಕ್ರೀಡಾಂಗಣದಲ್ಲಿ ವಿನೋದಕ್ಕೆ ಕ್ರಿಕೆಟ್ ಆಟವಾಡಿದ ಸತೀಶ್ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳ್ಕರ್  
ರಾಜ್ಯ

ಲಕ್ಷ್ಮಿಹೆಬ್ಬಾಳಕರ್ ಬೌಲ್‌ಗೆ ಸತೀಶ್ ಜಾರಕಿಹೊಳಿ ಕ್ಲೀನ್ ಬೋಲ್ಡ್!

ಉದ್ಘಾಟನಾ ಸಮಾರಂಭ ವೇಳೆ ಸತೀಶ್ ಜಾರಕಿಹೊಳಿ ಬ್ಯಾಟ್ ಹಿಡಿದು ಮೈದಾನಕ್ಕಿಳಿದರೆ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೌಲ್ ಹಿಡಿದು ಚೆಂಡು ಎಸೆದು ಪ್ರೇಕ್ಷಕರನ್ನು ರಂಜಿಸಿದರು.

ಬೆಳಗಾವಿ: ಬೆಳಗಾವಿಯ ಶ್ರೀನಗರದಲ್ಲಿರುವ ಜಿಲ್ಲಾ ಬಾಲಭವನದಲ್ಲಿ ನೂತನವಾಗಿ ನಿರ್ಮಿಸಲಾದ ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟನೆಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ನೆರವೇರಿಸಿ ಮಿನಿ ಕ್ರಿಕೆಟ್ ಆಡಿ ನೆರೆದಿದ್ದವರಿಗೆ ಮನರಂಜನೆ ನೀಡಿದರು.

ಉದ್ಘಾಟನಾ ಸಮಾರಂಭ ವೇಳೆ ಸತೀಶ್ ಜಾರಕಿಹೊಳಿ ಬ್ಯಾಟ್ ಹಿಡಿದು ಮೈದಾನಕ್ಕಿಳಿದರೆ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೌಲ್ ಹಿಡಿದು ಚೆಂಡು ಎಸೆದು ಪ್ರೇಕ್ಷಕರನ್ನು ರಂಜಿಸಿದರು.

ಹೆಬ್ಬಾಳಕರ್ ಬೌಲ್‌ಗೆ ಕ್ಲೀನ್ ಬೋಲ್ಡ್ ಆದ ಜಾರಕಿಹೊಳಿ: ಸಚಿವೆ ಹೆಬ್ಬಾಳಕರ್ ಎಸೆದ ಚೆಂಡಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್ ಸೇಠ್ ಕ್ಲೀನ್ ಬೋಲ್ಡ್ ಆಗಿದ್ದು, ಈ ದೃಶ್ಯ ಎಲ್ಲರಿಗೂ ಮನರಂಜನೆ ನೀಡಿತು. ಬಳಿಕ, ಸಚಿವೆ ಹೆಬ್ಬಾಳಕರ್‌ ಕೂಡ ಬ್ಯಾಟಿಂಗ್‌ ಮಾಡಿದರು. ಈ ವೇಳೆ, ಸತೀಶ್‌ ಜಾರಕಿಹೊಳಿ ಕೀಪಿಂಗ್‌ ಮಾಡಿದರು. ಈ ಆಟ ತಮಾಷೆಗಾಗಿ ನಡೆದಿದ್ದರೂ, ಸಚಿವರು ಹಾಗೂ ಶಾಸಕರ ಆಟದ ಶೈಲಿಯನ್ನು ನೋಡಿ ಅಲ್ಲಿದ್ದ ಗಣ್ಯರು ಮತ್ತು ಸಾರ್ವಜನಿಕರು ಕೆಲಕಾಲ ಖುಷಿಯನ್ನು ಕಣ್ತುಂಬಿಕೊಂಡರು.

ಮಕ್ಕಳಿಗೆ ಕ್ರೀಡಾ ಪ್ರೋತ್ಸಾಹದ ಉದ್ದೇಶ: ಜಿಲ್ಲಾ ಬಾಲಭವನದಲ್ಲಿ ನಿರ್ಮಿಸಲಾದ ಬಾಕ್ಸ್ ಕ್ರಿಕೆಟ್ ಮೈದಾನವು ಮಕ್ಕಳಿಗೆ ಮತ್ತು ಯುವಜನತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಲಿದೆ. ಸರ್ಕಾರದ ಈ ಪ್ರಯತ್ನದಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರವಾಗಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ - ಅಮೆರಿಕ ಒಪ್ಪಂದ ನಮ್ಮ ರೈತರ ಹಿತಾಸಕ್ತಿ ರಕ್ಷಿಸುತ್ತದೆ; ರಷ್ಯಾ ತೈಲ ಖರೀದಿ ಬಗ್ಗೆ MEA ಮಾಹಿತಿ: ಗೋಯಲ್

ಟಿ20 ವಿಶ್ವಕಪ್ 2026: ಅಮೆರಿಕ ಬೌಲರ್ ಗಳ ಎದುರು ಪರದಾಡಿದ ಭಾರತ, ಸೂರ್ಯ ಏಕಾಂಗಿ ಹೋರಾಟ, USAಗೆ 162 ರನ್ ಸವಾಲಿನ ಗುರಿ!

ಕೇರಳ: ಸಿಜೆ ರಾಯ್ ಬೆನ್ನಲ್ಲೇ ಕರ್ನಾಟಕ ಮೂಲದ ಮತ್ತೊಬ್ಬ ಉದ್ಯಮಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!

ಪಶ್ಚಿಮ ಬಂಗಾಳ: SIRನಲ್ಲಿ ಬಿಜೆಪಿ ಹಸ್ತಕ್ಷೇಪದ ವಿರುದ್ಧ 'ಡೆಡ್' ಮತದಾರರಿಂದ ಪ್ರತಿಭಟನೆ!

ವಿದ್ರಾವಕ: 20 ರೂ ಪ್ರಕರಣ, 30 ವರ್ಷ ಜೈಲು, ನಿರಪರಾಧಿ ಎಂದು ತೀರ್ಪು ಬಂದ ಮಾರನೇ ದಿನವೇ ಸಾವು!

SCROLL FOR NEXT