ಸಾವಿಗೀಡಾದ ಬಾಡಿಬಿಲ್ಡರ್ ಕಿರಣ್ 
ರಾಜ್ಯ

ಬೆಂಗಳೂರು: ಬೇರೆಯವರೊಂದಿಗೆ ಪ್ರೇಯಸಿಗೆ ನಿಶ್ಚಿತಾರ್ಥ; ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ!

ಕೊಠಡಿಯಿಂದ ಹೊರಬರದಿದ್ದಾಗ, ಅವರ ಕುಟುಂಬ ಸದಸ್ಯರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು: ನಗರದ 26 ವರ್ಷದ ದೇಹದಾರ್ಢ್ಯ ಪಟುಯೊಬ್ಬರು ಬೇರೊಬ್ಬ ವ್ಯಕ್ತಿಯೊಂದಿಗೆ ತನ್ನ ಮದುವೆ ನಿಶ್ಚಯವಾಗಿದೆ ಎಂದು ಪ್ರೇಯಸಿ ತಿಳಿಸಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ವೃತ್ತಿಯಲ್ಲಿ ಬಾಡಿಬಿಲ್ಡರ್ ಮತ್ತು ಜಿಮ್ ಟ್ರೈನರ್ ಆಗಿರುವ ಕಿರಣ್ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದರು. ಶನಿವಾರ, ಆತ ತನ್ನ ಪ್ರೇಯಸಿಯನ್ನು ಭೇಟಿಯಾದಾಗ, ಆಕೆ ಇನ್ನೊಬ್ಬ ವ್ಯಕ್ತಿಯೊಂದಿಗೆ ತನಗೆ ನಿಶ್ಚಿತಾರ್ಥವಾಗಿರುವ ಬಗ್ಗೆ ತಿಳಿಸಿದ್ದಾರೆ.

ಈ ಸುದ್ದಿಯಿಂದ ಅಸಮಾಧಾನಗೊಂಡ ಆತ, ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಮನೆಗೆ ಮರಳಿದ್ದಾರೆ. ತನ್ನ ಕೊಠಡಿಯೊಳಗೆ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ.

ಕೊಠಡಿಯಿಂದ ಹೊರಬರದಿದ್ದಾಗ, ಅವರ ಕುಟುಂಬ ಸದಸ್ಯರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಕಿರಣ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಿರಣ್ ಅವರ ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!