ಸಾವಿಗೀಡಾದ ಬಾಡಿಬಿಲ್ಡರ್ ಕಿರಣ್ 
ರಾಜ್ಯ

ಬೆಂಗಳೂರು: ಬೇರೆಯವರೊಂದಿಗೆ ಪ್ರೇಯಸಿಗೆ ನಿಶ್ಚಿತಾರ್ಥ; ನೊಂದು ಆತ್ಮಹತ್ಯೆಗೆ ಶರಣಾದ ಬಾಡಿ ಬಿಲ್ಡರ್!

ಕೊಠಡಿಯಿಂದ ಹೊರಬರದಿದ್ದಾಗ, ಅವರ ಕುಟುಂಬ ಸದಸ್ಯರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು: ನಗರದ 26 ವರ್ಷದ ದೇಹದಾರ್ಢ್ಯ ಪಟುಯೊಬ್ಬರು ಬೇರೊಬ್ಬ ವ್ಯಕ್ತಿಯೊಂದಿಗೆ ತನ್ನ ಮದುವೆ ನಿಶ್ಚಯವಾಗಿದೆ ಎಂದು ಪ್ರೇಯಸಿ ತಿಳಿಸಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ವೃತ್ತಿಯಲ್ಲಿ ಬಾಡಿಬಿಲ್ಡರ್ ಮತ್ತು ಜಿಮ್ ಟ್ರೈನರ್ ಆಗಿರುವ ಕಿರಣ್ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದರು. ಶನಿವಾರ, ಆತ ತನ್ನ ಪ್ರೇಯಸಿಯನ್ನು ಭೇಟಿಯಾದಾಗ, ಆಕೆ ಇನ್ನೊಬ್ಬ ವ್ಯಕ್ತಿಯೊಂದಿಗೆ ತನಗೆ ನಿಶ್ಚಿತಾರ್ಥವಾಗಿರುವ ಬಗ್ಗೆ ತಿಳಿಸಿದ್ದಾರೆ.

ಈ ಸುದ್ದಿಯಿಂದ ಅಸಮಾಧಾನಗೊಂಡ ಆತ, ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಮನೆಗೆ ಮರಳಿದ್ದಾರೆ. ತನ್ನ ಕೊಠಡಿಯೊಳಗೆ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ.

ಕೊಠಡಿಯಿಂದ ಹೊರಬರದಿದ್ದಾಗ, ಅವರ ಕುಟುಂಬ ಸದಸ್ಯರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಕಿರಣ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಿರಣ್ ಅವರ ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಯೋತ್ಪಾದನೆ ಬಗ್ಗೆ ಭಾರತ ಯಾವುದೇ ದ್ವಿಮುಖ ನೀತಿಯನ್ನು ಹೊಂದಿಲ್ಲ, ರಾಜಿಯ ಪ್ರಶ್ನೆಯೇ ಇಲ್ಲ: ಪ್ರಧಾನಿ ಮೋದಿ-Video

ಆಪ್ತ ಮಿತ್ರನಿಗೆ ಕೈ ಕೊಟ್ಟ ಭಾರತ?; ಅಮೆರಿಕಾ ಹೇಳಿದ್ದೇ ನಿಜವಾಯ್ತಾ?

ಡಿ-ಕೋಡ್: ಕಂಬಳಿ ಹುಳದಿಂದ ಚಿಟ್ಟೆಯಾಗುವ ಕಡೆಗೆ 'ಬಿಜೆಪಿ' ರೂಪಾಂತರ

300ಕ್ಕೂ ಹೆಚ್ಚು ಪತ್ರಕರ್ತರ ಉದ್ಯೋಗಕ್ಕೆ ಕತ್ತರಿ: ಆಕ್ರೋಶ ಬೆನ್ನಲ್ಲೇ 'The Washington Post' CEO ವಿಲ್ ಲೂಯಿಸ್ ರಾಜೀನಾಮೆ

ಹಂಪಿ ಬಳಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳು ದೋಷಿ ಎಂದು ಕೋರ್ಟ್ ಮಹತ್ವದ ತೀರ್ಪು, ಫೆ.16ಕ್ಕೆ ಶಿಕ್ಷೆ ಪ್ರಮಾಣ ಪ್ರಕಟ..!

SCROLL FOR NEXT