ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ಹುಬ್ಬಳ್ಳಿ: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಯೋಜನೆ; ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

200 ಕೋಟಿ ರೂ. ವೆಚ್ಚದಲ್ಲಿ ಬೆಣ್ಣೆಹಳ್ಳ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಪ್ರಾರಂಭಕ್ಕೆ ಶಾಸಕ ಎನ್.ಎಚ್. ಕೋನರಡ್ಡಿ ಅವರ ಒತ್ತಾಸೆ ಕಾರಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಹುಬ್ಬಳ್ಳಿ: ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ, 200 ಕೋಟಿ ರೂ. ವೆಚ್ಚದಲ್ಲಿ ಬೆಣ್ಣೆಹಳ್ಳ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಪ್ರಾರಂಭಕ್ಕೆ ಶಾಸಕ ಎನ್.ಎಚ್. ಕೋನರಡ್ಡಿ ಅವರ ಒತ್ತಾಸೆ ಕಾರಣ. ಈ ಹಿಂದೆ 1610 ಕೋಟಿ ರೂ. ಅಂದಾಜು ವೆಚ್ಚದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ವಿಳಂಬ ಮಾಡಿದ ನಂತರ 200 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗುತ್ತಿದೆ. ಜೊತೆಗೆ .150 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ ಎಂದು ಸುಳ್ಳು ಹರಡಲಾಗುತ್ತಿದೆ. ಆದರೆ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. 2018 ರಲ್ಲಿ ಸುಪ್ರೀಂ ಕೋರ್ಟ್ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ಸೂಚಿಸಿದೆ. ಈಗಾಗಲೇ ಕಳಸಾ ಬಂಡೂರಿ ಯೋಜನೆಗೆ ಟೆಂಡರ್ ಕರೆದು ಏಜೆನ್ಸಿಗೆ ಒಪ್ಪಿಸಲಾಗಿದೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ನಾಳೆನೇ ಕಾಮಗಾರಿ ಆರಂಭಿಸಲಾಗುವುದು ಎಂದರು.

ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸರ್ಕಾರದಿಂದ ನಿಂತು ಹೋಗಿದೆ. ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಮಾಡಬೇಕು. ಮೇಕೆದಾಟು ಯೋಜನೆಗೆ ಸಹ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಈಗಾಗಲೇ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. 65 ಟಿಎಂಸಿ ಕುಡಿಯುವ ನೀರಿನ ಯೋಜನೆ ಇದಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಕೊಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಯಾವುದೇ ಹಣ ಇದುವರೆಗೂ ನೀಡಿಲ್ಲ ಎಂದು ಆರೋಪಿಸಿದರು.

2005 ರಲ್ಲಿ ಮನ್ರೇಗಾ ಯೋಜನೆ ಜಾರಿ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ಕಳೆದ ಡಿಸೆಂಬರ್ ನಲ್ಲಿ ಈ ಯೋಜನೆಯನ್ನು ರದ್ದು ಮಾಡಿದೆ. ಈ ಮೂಲಕ ಯುವಕರಿಗೆ, ಮಹಿಳೆಯರಿಗೆ, ಕೆಲಸವಿಲ್ಲದವರಿಗೆ ಕೆಲಸ ಕೊಡುವ ಯೋಜನೆಯನ್ನು ಕೈ ಬಿಡಲಾಗಿದೆ. ಇದರಡಿ ಶೇ. 53 ಮಹಿಳೆಯರು, ಶೇ.17 ರಷ್ಟು ಪರಿಶಿಷ್ಟ ಜಾತಿ ಹಾಗೂ ಶೇ. 11ರಷ್ಟು ಪರಿಶಿಷ್ಟ ಪಂಗಡ ವರ್ಗದವರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲರೂ ವಿಬಿ ಜಿ ರಾಮ್ ಜಿ‌ ಇಂದ ಕೆಲಸ ಕಳೆದುಕೊಳ್ಳಲಿದ್ದಾರೆ. ಮನ್ರೇಗಾ ಯೋಜನೆಯನ್ನು ಮರುಸ್ಥಾಪನೆ ಮಾಡುವ ನಿಟ್ಟಿನಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ, ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್!

ವೀರ್ ಸಾವರ್ಕರ್‌ಗೆ 'ಭಾರತ ರತ್ನ' ನೀಡಿದರೆ, ಪ್ರಶಸ್ತಿಯ ಘನತೆ ಮತ್ತಷ್ಟು ಹೆಚ್ಚುತ್ತದೆ: ಮೋಹನ್ ಭಾಗವತ್

ಅಮೆರಿಕ-ಭಾರತ ನಡುವಿನ ವ್ಯಾಪಾರ ಒಪ್ಪಂದ: 72 ಕೋಟಿ ರೈತರ ಪಾಲಿಗೆ ಮರಣಶಾಸನ - ಸಿಎಂ ಸಿದ್ದರಾಮಯ್ಯ

ನಟರಿಗೆ ನಿರ್ಮಾಪಕರಿಂದ ಕಾಂಡೋಮ್ ಸಪ್ಲೈ ಹೇಳಿಕೆ: ಚಕ್ರವರ್ತಿ ಚಂದ್ರಚೂಡ್ ವಿರುದ್ಧ FIR ದಾಖಲು

T20 ವಿಶ್ವಕಪ್ 2026: ICC ಪತ್ರಕ್ಕೆ ಬಾಲ ಮುದುರಿಕೊಂಡ ಪಾಕ್, ಯು-ಟರ್ನ್!

SCROLL FOR NEXT