ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನಲ್ಲಿ ಭಾನುವಾರ ಖಾಸಗಿ ತರಬೇತಿ ವಿಮಾನವೊಂದು ಪತನಗೊಂಡಿದ್ದು, ಪೈಲಟ್ ಸೇರಿದಂತೆ ಇಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಮಂಗಳೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಎರಡು ಆಸನಗಳ ತರಬೇತಿ ವಿಮಾನವೊಂದು ತೆರೆದ ಗದ್ದೆಯಲ್ಲಿ ಪತನಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಪಘಾತದ ಪರಿಣಾಮ ವಿಮಾನ ಮೂರು ಭಾಗಗಳಾಗಿ ಒಡೆದಿದೆ. ಪೈಲಟ್ ಸೇರಿದಂತೆ ಇಬ್ಬರು ಪ್ರಯಾಣಿಕರು ವಿಮಾನ ಪತನಗೊಳ್ಳುವುದಕ್ಕೂ ಮುನ್ನ ಹೊರಗೆ ಹಾರಿದ್ದಾರೆ.
ಇಬ್ಬರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತರಬೇತಿ ವಿಮಾನವು ಕಲಬುರಗಿಯಿಂದ ಬೆಳಗಾವಿಗೆ ತೆರಳುತಿತ್ತು ಎನ್ನಲಾಗಿದೆ. ಆದರೂ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.