ತುಮಕೂರು ಅಪಘಾತ 
ರಾಜ್ಯ

ತುಮಕೂರಿನಲ್ಲಿ ಸರಣಿ ಅಪಘಾತ: ಇಬ್ಬರ ದುರ್ಮರಣ, Dysp ಸೇರಿ 9 ಮಂದಿಗೆ ಗಾಯ

ಘಟನೆಯಲ್ಲಿ ಡಿವೈಎಸ್ಪಿ ರಾಮಕೃಷ್ಣಪ್ಪ ಸೇರಿ 9 ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಗೊಂಡವರಲ್ಲಿ ಓರ್ವ ಮಹಿಳೆಯೂ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು: ತುಮಕೂರು–ಕುಣಿಗಲ್ ರಾಜ್ಯ ಹೆದ್ದಾರಿಯ ಬಾಣಾವರ ಗೇಟ್ ಸಮೀಪದ ನಾಗವಳ್ಳಿ ಗ್ರಾಮ ಬಳಿ ನಡೆದ ಸರಣಿ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಡಿವೈಎಸ್ಪಿ ಸೇರಿ ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಯಾದವನಗರದ ರಿಯಲ್ ಎಸ್ಟೇಟ್ ಉದ್ಯಮಿ ಸುರೇಶ್ (55) ಹಾಗೂ ಅಶೋಕನಗರದ ಗುತ್ತಿಗೆದಾರ ಮುರಳಿ (60) ಎಂದು ಗುರ್ತಿಸಲಾಗಿದೆ.

ಘಟನೆಯಲ್ಲಿ ಡಿವೈಎಸ್ಪಿ ರಾಮಕೃಷ್ಣಪ್ಪ ಸೇರಿ 9 ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಗೊಂಡವರಲ್ಲಿ ಓರ್ವ ಮಹಿಳೆಯೂ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗಮಂಗಲ ತಾಲೂಕು ಆದಿಚುಂಚನಗಿರಿ ಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಚಿತ್ತದುರ್ಗದಿಂದ ಮೈಸೂರು ಕಡೆ ತೆರಳುತ್ತಿದ್ದ ಕಾರೊಂದು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡಲು ಯತ್ನಿಸಿದಾಗ, ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಹೆಬ್ಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಳಸಾ-ಬಂಡೂರಿ, ಮೇಕೆದಾಟು ಯೋಜನೆ ವಿಳಂಬಕ್ಕೆ ಕೇಂದ್ರ ಸರ್ಕಾರವೇ ಕಾರಣ: ಸಿಎಂ ಸಿದ್ದರಾಮಯ್ಯ

ಬಳ್ಳಾರಿ: ತೆಕ್ಕಲಕೋಟೆ ಉತ್ಖನನದಲ್ಲಿ ಮಾನವ ಅಸ್ಥಿಪಂಜರ ಪತ್ತೆ, 3,000-5,000 ವರ್ಷ ಹಳೆಯದೆಂದು ತಜ್ಞರ ಅಂದಾಜು

ನಿಯತ್ತು ನಿಷ್ಠೆ ಇಲ್ಲದವರನ್ನು ಇಟ್ಟುಕೊಳ್ಳಬೇಕಾ? GTD ನಮ್ಮ ಜೊತೆಯಲ್ಲಿಲ್ಲ; ಸಮಯ ಬಂದಾಗ ರಾಜ್ಯ ರಾಜಕೀಯಕ್ಕೆ ವಾಪಸ್!

ಪೈಲಟ್ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ನಲ್ಲಿ ಗೊಂದಲ! ಅಧಿಕಾರಿಗಳ ಗಲಿಬಿಲಿ

'ಸಿ ಗ್ರೇಡ್ ಸಿನಿಮಾಗಿಂತ ಕಳಪೆ': ಪಾಕ್ ಸಂಪರ್ಕ ಆರೋಪಕ್ಕೆ ಗೊಗೋಯ್ ತಿರುಗೇಟು!

SCROLL FOR NEXT