ಕಳ್ಳತನಕ್ಕೆ ಬಂದು ಮನೆಯಲ್ಲಿಯೇ ಮಲಗಿದ ಖತರ್ನಾಕ್ ಕಳ್ಳ 
ರಾಜ್ಯ

ಕಳ್ಳತನಕ್ಕೆ ಬಂದು ಮನೆಯಲ್ಲಿ ಕಂಬಳಿ ಹೊದ್ದು ಮಲಗಿದ ಖತರ್ನಾಕ್ ಕಳ್ಳ!

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಹಳೇ RTO ಕಚೇರಿ ಬಳಿಯ ಪ್ರೇಮನಾಥ ಎಂಬುವರ ಮನೆಯಲ್ಲಿ ಕಳ್ಳತನ ನಡೆಸಲೆಂದು ಇಬ್ಬರು ಖದೀಮರು ತೆರಳಿದ್ದರು.

ಚಿಕ್ಕಬಳ್ಳಾಪುರ: ಕಳ್ಳತನಕ್ಕೆ ಹೋಗಿದ್ದ ಕಳ್ಳನೋರ್ವ ಮದ್ಯದ ಮತ್ತಿನಲ್ಲಿ ಮನೆಯಲ್ಲೇ ಕಂಬಳಿ ಹೊದ್ದು ಮಲಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ವರದಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಹಳೇ RTO ಕಚೇರಿ ಬಳಿಯ ಪ್ರೇಮನಾಥ ಎಂಬುವರ ಮನೆಯಲ್ಲಿ ಕಳ್ಳತನ ನಡೆಸಲೆಂದು ಇಬ್ಬರು ಖದೀಮರು ತೆರಳಿದ್ದರು. ಮನೆಯ ಮೇಲಿನ ರೇಕ್ ಕತ್ತರಿಸಿ ಒಳಗೆ ನುಗ್ಗಿದ್ದರು. ಬಳಿಕ ಮನೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು, ನಗದು ದೋಚಿದ್ದಾರೆ.

ಈ ವೇಳೆ ಓರ್ವ ಕಳ್ಳ ಪರಾರಿಯಾಗಿದ್ದು, ಆದರೆ ಮತ್ತೊಬ್ಬ ಕಳ್ಳ ಮನೆಯಲ್ಲಿ ನಿದ್ದೆಗೆ ಜಾರಿದ್ದಾನೆ. ಇತ್ತ ಮನೆಗೆ ಕಳ್ಳರು ನುಗ್ಗಿರುವ ಅನುಮಾನದಿಂದ ಮಾಲೀಕ ಪ್ರೇಮನಾಥನಿಗೆ ಕರೆ ಮಾಡಿ ನೆರೆ ಮನೆಯವರು ವಿಷಯ ತಿಳಿಸಿದ್ದಾರೆ. ಕೆಲಸದ ನಿಮಿತ್ತ ಹೈದರಾಬಾದ್ ಗೆ ತೆರಳಿದ್ದ ಅವರು, ರಾತ್ರೋ ರಾತ್ರಿ ಮನೆಗೆ ಹಿಂದಿರುಗಿದ್ದಾರೆ.

ಮನೆಗೆ ಪ್ರೇಮನಾಥ ವಾಪಸ್ ಆಗಿ ಬಾಗಿಲು ತೆಗೆದು ಒಳ ಪ್ರವೇಶಿಸುತ್ತಲೇ ಅಚ್ಚರಿ ಎದುರಾಗಿದೆ. ಕಳ್ಳತನಕ್ಕೆಂದು ಬಂದಾತ ಮನೆಯಲ್ಲೇ ಮಲಗಿದ್ದನ್ನು ನೋಡಿದ ಅವರು, ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ವ್ಯಕ್ತಿ ಗೌರಿಬಿದನೂರಿನ ನದಿದಡ ವಾರ್ಡ್​ನ ದೇವರಾಜು ಎಂಬುದು ಗೊತ್ತಾಗಿದ್ದು, ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿಯನ್ನೇ ಪದಚ್ಯುತಿಗೊಳಿಸುವ ಸಮಯ ಬಂದಿದೆ: ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬಿಜೆಪಿ ಕಿಡಿ

ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್​ಗೆ ಬಿಗ್ ಶಾಕ್​​; ಜಾಮೀನು‌ ಅರ್ಜಿ ವಜಾ, ಬಂಧನ ಭೀತಿ

ಖಯಾಮತ್ ಬರುವುದಿಲ್ಲ, ಬಾಬ್ರಿ ಮಸೀದಿ ಪುನರ್ ನಿರ್ಮಾಣ ಸಾಧ್ಯವಿಲ್ಲ: ಯುಪಿ ಸಿಎಂ ಯೋಗಿ

ಬಾಂಗ್ಲಾದೇಶ ಚುನಾವಣೆಗೆ 3 ದಿನ ಬಾಕಿ: ಹಿಂದೂ ಉದ್ಯಮಿ ಭೀಕರ ಹತ್ಯೆ!

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನೋಟಿಸ್ ಸಲ್ಲಿಸಿದ ಪ್ರತಿಪಕ್ಷಗಳು; 100 ಕ್ಕೂ ಹೆಚ್ಚು ಸಂಸದರ ಬೆಂಬಲವಿದೆ- ಕಾಂಗ್ರೆಸ್

SCROLL FOR NEXT