ಪಿ ರಾಮಯ್ಯ 
ರಾಜ್ಯ

ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲ

ಪಿ. ರಾಮಯ್ಯ ಅವರು ವಿವಿಧ ಅಂಗಾಂಗ ವೈಫಲ್ಯದಿಂದಾಗಿ ಇಂದು ರಾತ್ರಿ 9 ಗಂಟೆಗೆ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಪುತ್ರ ಡಾ ಬಾಲಾಜಿ ತಿಳಿಸಿದ್ದಾರೆ.

ಬೆಂಗಳೂರು: ಹಿರಿಯ ಪತ್ರಕರ್ತ ಹಾಗು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ ರಾಮಯ್ಯ (93 )ಅವರು ಇಂದು ನಿಧನರಾಗಿದ್ದಾರೆ.

ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ. ರಾಮಯ್ಯ ಅವರು ವಿವಿಧ ಅಂಗಾಂಗ ವೈಫಲ್ಯದಿಂದಾಗಿ ಇಂದು ರಾತ್ರಿ 9 ಗಂಟೆಗೆ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಪುತ್ರ ಡಾ ಬಾಲಾಜಿ ತಿಳಿಸಿದ್ದಾರೆ .

1933 ಸೆಪ್ಟೆಂಬರ್ 12 ರಂದು ಜನಿಸಿದ ರಾಮಯ್ಯ ಅವರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗು ಸೊಸೆಯಂದಿರು ಹಾಗು ಮೊಮ್ಮಕಳನ್ನು ಅಗಲಿದ್ದಾರೆ.

ಪಿ ರಾಮಯ್ಯ ಅವರು, "ದಿ ಹಿಂದೂ " ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೆ ರಾಮಯ್ಯ ಅವರು ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗು ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ ಅವರು ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿದ್ದರು .

ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥೀವ ಶರೀರವನ್ನು ನಾಳೆ ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರ ಕ್ಲಬ್ ಸಮೀಪದಲ್ಲಿ ವಾಸವಾಗಿದ್ದ ಮನೆ 295/12/1, 7ನೇ ಮೇನ್, 16 ನೇ ಕ್ರಾಸ್ ವಿಳಾಸದಲ್ಲಿ ಇಡಲಾಗುವುದು ಎಂದು ಗಿರೀಶ್ ಲಿಂಗಣ್ಣ ಸೋದರಳಿಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!