ಸಾಂದರ್ಭಿಕ ಚಿತ್ರ 
ರಾಜ್ಯ

ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ: ಸಬ್ ರಿಜಿಸ್ಟ್ರಾರ್ ಸೇರಿ ಇಬ್ಬರ ಬಂಧನ

ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿರು 2.1 ಎಕರೆ ಜಮೀನಿಗೆ ಬಂಧಿತರು ನಕಲಿ ದಾಖಲೆ ಸೃಷ್ಟಿಸಿ ಹುಕ್ಕೇರಿ ಉಪನೋಂದಣಿ ಕಚೇರಿಯಲ್ಲಿ ಬೇರೆ ವ್ಯಕ್ತಿಯ ಹೆಸರಿನಲ್ಲಿ ನೋಂದಣಿ ಮಾಡಿಸಿ ಮಾರಾಟ ಮಾಡಿದ್ದರು.

ಬೆಳಗಾವಿ: ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಹುಕ್ಕೇರಿ ಪೊಲೀಸರು ಸಬ್ ರಿಜಿಸ್ಟ್ರಾರ್ ಮತ್ತು ಬಾಂಡ್ ರೈಟರ್'ನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಸಬ್ ರಿಜಿಸ್ಟ್ರಾರ್ ಮಡಿವಾಳಯ್ಯ ಬಾನಿಮಠ (34) ಹಾಗೂ ಬಾಂಡ್ ರೈಟರ್ ಆನಂದ ದಡ್ಡಿಮನಿ (35) ಬಂಧಿತ ಆರೋಪಿಗಳು.

ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿರು 2.1 ಎಕರೆ ಜಮೀನಿಗೆ ಬಂಧಿತರು ನಕಲಿ ದಾಖಲೆ ಸೃಷ್ಟಿಸಿ ಹುಕ್ಕೇರಿ ಉಪನೋಂದಣಿ ಕಚೇರಿಯಲ್ಲಿ ಬೇರೆ ವ್ಯಕ್ತಿಯ ಹೆಸರಿನಲ್ಲಿ ನೋಂದಣಿ ಮಾಡಿಸಿ ಮಾರಾಟ ಮಾಡಿದ್ದರು.

ಈ ಅಕ್ರಮಕ್ಕೆ ಉಪನೋಂದಣಿ ಅಧಿಕಾರಿ ಸೇರಿ ಹಲವರು ಭಾಗಿಯಾಗಿರುವ ಕುರಿತು ಕುರಣಿವಾಡಿ ಗ್ರಾಮದ ಶಿವಾನಂದ ಮಾನಗಾಂವಿ ಎಂಬುವವರು ಹುಕ್ಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದೇ ಪ್ರಕರಣದ ಅಡಿಯಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದರು. ಆದರೆ, ಉಪ ನೋಂದಣಿ ಅಧಿಕಾರಿ, ಬಾಂಡ್ ರೈಟರ್ ಇಬ್ಬರು ಪರಾರಿಯಾಗಿ ಜಾಮೀನಿಗೆ ಅರ್ಜಿ ಹಾಕಿದ್ದರು. ಭಾನುವಾರ ಇಬ್ಬರಿಗೆ ನ್ಯಾಯಾಲಯ ಮಂಜೂರು ಮಾಡಿತ್ತು.

ಬಳಿಕ ಪೊಲೀಸ್ ಠಾಣೆಗೆ ಇಬ್ಬರು ಹಾಜರಾಗಿ ಜಾಮೀನು ಪಡೆಯುವ ಸಂದರ್ಭದಲ್ಲಿ ಪೊಲೀಸರು ಮತ್ತೊಂದು ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿರುವ ಪ್ರಕರಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಬಳಿಕ ನ್ಯಾಯಾಲಯವು ಇಬ್ಬರನ್ನು ಗೋಕಾಕ ಸಬ್ ಜೈಲಿಗೆ ಕಳುಹಿಸಿ ವಿಚಾರಣೆ ಮುಂದೂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

'ನಿಮ್ದೊಂದೆರಡು ಕಿತ್ತೋದ ವಿಮಾನವಾಹಕ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ, ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

SCROLL FOR NEXT