ನಂದಿನಿ ರಾಯಭಾರಿಯಾಗಿ ಸುಧಾರಾಣಿ ನೇಮಕ 
ರಾಜ್ಯ

'ನಂದಿನಿ' ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ನೇಮಕ

ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಶ್ರೀಮತಿ ಸುಧಾ ರಾಣಿ ಅವರು ಆಯ್ಕೆಯಾಗಿದ್ದು, ಬಮೂಲ್‌ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ಡಿಕೆ ಸುರೇಶ್‌ ಅವರು ಬರೆದುಕೊಂಡಿದ್ದಾರೆ.

ಬೆಂಗಳೂರು: ರಾಜ್ಯದ ಹೆಮ್ಮೆಯ ಬ್ರ್ಯಾಂಡ್ 'ನಂದಿನಿ' ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.

ಈ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಪ್ರಮುಖ ಭಾಗವಾದ ಬೆಂಗಳೂರು ಹಾಲು ಒಕ್ಕೂಟ ನಟಿ ಸುಧಾರಾಣಿ ಅವರನ್ನು ನಂದಿನಿ ಉತ್ಪನ್ನಗಳ ನೂತನ ಪ್ರಚಾರದ ರಾಯಭಾರಿಯನ್ನಾಗಿ ನೇಮಿಸಲಾದ ಬಗ್ಗೆ ಅಧಿಕೃತವಾಗಿ ಘೋಷಿಸಿದೆ.

ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಶ್ರೀಮತಿ ಸುಧಾ ರಾಣಿ ಅವರು ಆಯ್ಕೆಯಾಗಿದ್ದು, ಬಮೂಲ್‌ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ಡಿಕೆ ಸುರೇಶ್‌ ಅವರು ಬರೆದುಕೊಂಡಿದ್ದಾರೆ.

ನಂದಿನಿ ಬ್ರ್ಯಾಂಡ್‌ನ ಮೌಲ್ಯಗಳನ್ನು ಜನರಿಗೆ ತಲುಪಿಸಲು ಸುಧಾರಾಣಿ ಅವರಂತಹ ವಿಶ್ವಾಸಾರ್ಹ ವ್ಯಕ್ತಿತ್ವದ ಅಗತ್ಯವಿತ್ತು. ಅವರ ಸರಳತೆ ಮತ್ತು ಕೌಟುಂಬಿಕ ಗೌರವ ನಂದಿನಿ ಉತ್ಪನ್ನಗಳ ಗುಣಮಟ್ಟಕ್ಕೆ ಹೊಸ ಮೆರುಗು ನೀಡಲಿದೆ” ಎಂದಿದ್ದಾರೆ. ತಲೆಮಾರುಗಳಿಂದ ಪ್ರತಿಯೊಬ್ಬ ಕನ್ನಡಿಗನ ನಂಬಿಕೆಯ ಪ್ರತೀಕ ನಂದಿನಿ. ರೈತರ ಸಹಕಾರಿ ಸಂಸ್ಥೆಯಾದ ಬಮುಲ್ ನಂದಿನಿ ಜೊತೆ ಒಡಗೂಡುವ ಅವಕಾಶ ನನಗೆ ಅತ್ಯಂತ ಗೌರವದ ವಿಷಯ.

ಡಾ. ರಾಜ್‌ಕುಮಾರ್, ಶಿವರಾಜ್‌ಕುಮಾರ್ ಹಾಗೂ ಪುನೀತ್ ರಾಜ್‌ಕುಮಾರ್ ಅವರಂತಹ ಮೇರು ವ್ಯಕ್ತಿಗಳ ಹಾದಿಯನ್ನು ಅನುಸರಿಸಿ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕೇವಲ ಅನುಕರಣೆಯಲ್ಲ ಧನ್ಯತೆ ಮತ್ತು ಹೆಮ್ಮೆಯ ಜವಾಬ್ದಾರಿ ಎಂದು ಸುಧಾರಾಣಿ ತಿಳಿಸಿದ್ದಾರೆ.

ನಮ್ಮ ದೇಸಿ ಹಸುಗಳನ್ನ ಸಂರಕ್ಷಿಸುವುದು, ರೈತರಿಗೆ ನ್ಯಾಯಸಮ್ಮತ ಬೆಲೆ ಖಚಿತಪಡಿಸುವುದು ಹಾಗೂ ಗ್ರಾಹಕರಿಗೆ ಗುಣಮಟ್ಟದ, ವಿಶ್ವಾಸಾರ್ಹ ಉತ್ಪನ್ನಗಳನ್ನ ತಲುಪಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ. ಈ ಹೊಸ ಅಧ್ಯಾಯದಲ್ಲಿ ದೇಸಿ ಹಸುಗಳಿಂದ ತಯಾರಿಸಿದ A2 ತುಪ್ಪ, A2 ಹಾಲು ಸೇರಿದಂತೆ ಹಲವು ಉತ್ಪನ್ನಗಳು ಸೇರಿದೆ. ಸಂಪ್ರದಾಯ, ಶುದ್ಧತೆ ಮತ್ತು ರೈತರ ಕಲ್ಯಾಣದ ಮೌಲ್ಯಗಳು ಅಡಕವಾಗಿರುವ, ರೈತರನ್ನ ಮನ್ನೆಲೆಗೆ ತರುವ, ನಮ್ಮ ಬೇರುಗಳನ್ನ ಗೌರವಿಸುವ ಮತ್ತು ಕರ್ನಾಟಕದ ಪರಂಪರೆಯನ್ನ ಮುಂದಿನ ಪೀಳಿಗೆಗಳಿಗೆ ಸಾಗಿಸುವ ಈ ಚಳವಳಿಗೆ ಬೆಂಬಲ ನೀಡಲು ನನಗೆ ಅಪಾರ ಹೆಮ್ಮೆಯಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅವಿಶ್ವಾಸ ನಿರ್ಣಯ ಚರ್ಚೆಯಾಗೋವರೆಗೂ ನಾನು ಸದನವನ್ನು ಪ್ರವೇಶಿಸಲ್ಲ, ಸ್ಪೀಕರ್ ಸ್ಥಾನದಲ್ಲಿ ಕೂರಲ್ಲ: ಓಂ ಬಿರ್ಲಾ ಪ್ರತಿಜ್ಞೆ

ನನ್ನ ಆತ್ಮಚರಿತ್ರೆ ಇನ್ನೂ ಪ್ರಕಟವಾಗಿಲ್ಲ: ಪ್ರಕಾಶಕರ ಬೆಂಬಲಕ್ಕೆ ನಿಂತ ಮಾಜಿ ಸೇನಾ ಮುಖ್ಯಸ್ಥ ನರವಾಣೆ

ಮದುವೆ, ಬ್ಲಾಕ್ ಮೇಲ್: ತಾಯಿ-ದೊಡ್ಡಮ್ಮ ಬೆ*ಲೆ ಫೋಟೋ ಕೇಸ್ ಗೆ ಟ್ವಿಸ್ಟ್

ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲ

ಟಿ20 ವಿಶ್ವಕಪ್ 2026: ತಾರಿಖ್ ಭರ್ಜರಿ ಬೌಲಿಂಗ್, USA ವಿರುದ್ಧ ಪಾಕಿಸ್ತಾನಕ್ಕೆ 32 ರನ್ ಜಯ

SCROLL FOR NEXT