ಸಾಧುಕೋಕಿಲಾ ಮತ್ತು ಮಂಡ್ಯರಮೇಶ್ 
ರಾಜ್ಯ

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಂಡ್ಯ ರಮೇಶ್ - ಸಾಧು ಕೋಕಿಲಾಗೆ ಬಿಗ್‌ ರಿಲೀಫ್; ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

2017ರಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಸಾಕ್ಷ್ಯಧಾರ ಕೊರತೆ ಹಿನ್ನೆಲೆ ರದ್ದು ಮಾಡಿ ಹೈಕೋರ್ಟ್‌ ಆದೇಶ ನೀಡಿದೆ. ಆ ಮೂಲಕ ಕನ್ನಡದ ಹಿರಿಯ ನಟರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಬೆಂಗಳೂರು: ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ ನಟ ಮಂಡ್ಯ ರಮೇಶ್ ವಿರುದ್ಧ ಮಾಡಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಹೈಕೋರ್ಟ್‌ ರಿಲೀಫ್‌ ನೀಡಿದೆ.

2017ರಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಸಾಕ್ಷ್ಯಧಾರ ಕೊರತೆ ಹಿನ್ನೆಲೆ ರದ್ದು ಮಾಡಿ ಹೈಕೋರ್ಟ್‌ ಆದೇಶ ನೀಡಿದೆ. ಆ ಮೂಲಕ ಕನ್ನಡದ ಹಿರಿಯ ನಟರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

2017ರಲ್ಲಿ ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್‌ ಅವರು ಮೈಸೂರಿನ ಪಾರ್ಲರ್‌ವೊಂದರಲ್ಲಿ ಮಸಾಜ್‌ ಮಾಡಿಸಿಕೊಂಡಿದ್ದರು. ಈ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಇಬ್ಬರು ನಟರು ತನಗೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆಂದು ಆರೋಪವನ್ನು ಮಾಡಿ, ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು.

ಆ ಸಮಯದಲ್ಲಿ ಪ್ರಕರಣ ಸಂಬಂಧ ಇಬ್ಬರು ನಟರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿತ್ತು. 20179ರಲ್ಲಿ ಹೈಕೋರ್ಟ್‌ ಪ್ರಕರಣದ ವಿಚಾರಣೆಗೆ ತಡೆ ನೀಡಿತ್ತು. ಇದೀಗ ಸಾಕ್ಷಾಧಾರಗಳ ಕೊರತೆಯ ಹಿನ್ನೆಲೆ ಪ್ರಕರಣವನ್ನು ರದ್ದು ಮಾಡಲಾಗಿದೆ.

ಎಫ್‌ಐಆರ್‌ನಲ್ಲಿ ಹೆಸರಿಲ್ಲ, ಹಾಗೂ ಆರೋಪಕ್ಕೆ ಸಾಕ್ಷ್ಯಗಳಿಲ್ಲವೆಂದು ಮಂಡ್ಯ ರಮೇಶ್ ಮತ್ತು ಸಾಧು ಕೋಕಿಲ ಪರವಾಗಿ ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ವಾದ ಮಂಡಿಸಿದ್ದರು. ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ 'ಕೇಂದ್ರ' ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಏರ್ ಪೋರ್ಟ್ ನಲ್ಲಿ ಬಿಜೆಪಿ MLA ಬೈರತಿ ಬಸವರಾಜ್ ಬಂಧನ!

ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಹೆಚ್ಚಳ: ಮಧ್ಯಮ ವರ್ಗ ತುಳಿಯುವ ಪ್ರಯತ್ನವೇ? ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಮಾರಾಟವಾಗದೇ ಉಳಿದದ್ದಾ? or ಕುಡಿದು ಉಳಿದದ್ದಾ?: ದೆಹಲಿ ಸ್ಟೇಡಿಯಂ ಸಿಬ್ಬಂದಿ ಪಾನೀಯ ತುಂಬುತ್ತಿರುವ Video Viral

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

SCROLL FOR NEXT