ಟ್ರಕ್ ನಲ್ಲಿ ಶಾಲಾ ಮಕ್ಕಳು 
ರಾಜ್ಯ

ಶಾಲಾ ಮಕ್ಕಳನ್ನು ಟ್ರಕ್ ನಲ್ಲಿ ತುಂಬಿಕೊಂಡು 'ಫೀಲ್ಡ್ ಟ್ರಿಪ್': ಮುಖ್ಯೋಪಾಧ್ಯಾಯ ಅಮಾನತು! Video

ಶಾಲಾ ಮಕ್ಕಳನ್ನು ಪಿಕಪ್ ಮತ್ತು ಟ್ರಕ್‌ನಲ್ಲಿ ಕರೆದೊಯ್ಯುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಬಳಿಕ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದರು.

ಬೆಳ್ತಂಗಡಿ: ಜೀನು ಕೃಷಿ ಅಧ್ಯಯನ ಪ್ರವಾಸದ ನೆಪದಲ್ಲಿ ಶಾಲಾ ಮಕ್ಕಳನ್ನು ಟ್ರಕ್ ನಲ್ಲಿ ಕರೆದೊಯ್ದ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ಬಳೆಂಜದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಲಾಗಿದೆ.

ಶಾಲಾ ಮಕ್ಕಳನ್ನು ಪಿಕಪ್ ಮತ್ತು ಟ್ರಕ್‌ನಲ್ಲಿ ಕರೆದೊಯ್ಯುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಬಳಿಕ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದರು.

ಈ ಕುರಿತು ಮಾತನಾಡಿದ ಬೆಳ್ತಂಗಡಿ ಬಿಇಒ ತಾರಕೇಸರಿ, ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್, ಫೆ.11ರಂದು 1.5 ಕಿಲೋಮೀಟರ್ ದೂರದಲ್ಲಿರುವ ಫಾರ್ಮ್ ಗೆ ಜೇನು ಕೃಷಿ ಅಧ್ಯಯನಕ್ಕೆಂದು ಪಿಕಟ್ ಮತ್ತು ಟಿಪ್ಪರ್ ನಲ್ಲಿ 70 ಮಕ್ಕಳನ್ನು ಮಣ್ಣು ತುಂಬಿಸಿದ ರೀತಿಯಲ್ಲಿ ಕರೆದೊಯ್ದಿದ್ದು, ಬಳಿಕ ಅದೇ ವಾಹನಗಳಲ್ಲಿ ಮಕ್ಕಳನ್ನು ಕರೆತರಲಾಗಿತ್ತು ಎಂದು ತಿಳಿಸಿದರು.

ಶಾಲೆಯ ಕೆಲವು ಹಳೆ ವಿದ್ಯಾರ್ಥಿಗಳು ಮಕ್ಕಳನ್ನು ಉಚಿತವಾಗಿ ಅಧ್ಯಯನ ಪ್ರವಾಸಕ್ಕೆ ಕರೆದೊಯ್ಯಲು ಮುಂದೆ ಬಂದಿದ್ದರು. ಪೋಷಕರು ಕೂಡಾ ಅದಕ್ಕೆ ಒಪ್ಪಿದ್ದರು ಎಂದು ಮುಖ್ಯೋಪಾಧ್ಯಾಯರು ಹೇಳಿರುವುದಾಗಿ ಬಿಇಒ ಹೇಳಿದರು.

ಇದೇ ವಿಡಿಯೋ ವೈರಲ್ ಆದ ಬಳಿಕ, ಟ್ರಕ್ ಮತ್ತು ಪಿಕಪ್ ವಾಹನಗಳಲ್ಲಿ ಮಕ್ಕಳನ್ನು ಸಾಗಿಸುವ ಮೂಲಕ ಮಕ್ಕಳ ಸುರಕ್ಷತೆಗೆ ಅಪಾಯ ತಂದೊಡ್ಡಿದ್ದಾರೆ ಎಂದು ಮುಖ್ಯೋಪಾಧ್ಯಾಯರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಕುರಿತು ಬೆಳ್ತಂಗಡಿ ಬಿಇಒಗೆ ಮೌಖಿಕ ದೂರು ನೀಡಿದ್ದು, ಡಿಡಿಪಿಐಗೆ ವರದಿ ಸಲ್ಲಿಸಿದ್ದಾರೆ.

ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು, 2021 ಮತ್ತು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ (ಕೆಎಸ್‌ಸಿಪಿಪಿ) ಅಡಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ದಕ್ಷಿಣ ಕನ್ನಡ ಜಿ ಎಸ್ ಶಶಿಧರ್ ಅವರು ಮುಖ್ಯೋಪಾಧ್ಯಾಯರ ವಿರುದ್ಧ ಅಮಾನತು ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RCB ಫ್ಯಾನ್ಸ್ ಗೆ ಸಿಹಿಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಯೋಜನೆಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್!

ಟಿ20 ವಿಶ್ವಕಪ್ 2026: ಇಶಾನ್, ಪಾಂಡ್ಯ ಅರ್ಧಶತಕ, ನಮೀಬಿಯಾಗೆ 210 ರನ್ ಗುರಿ ನೀಡಿದ ಭಾರತ! ಮಿಂಚಿದ ನಮೀಬಿಯಾ ನಾಯಕ Erasmus

ಟಿ20 ವಿಶ್ವಕಪ್ 2026: 6, 6, 6, 6, 4.. ಒಂದೇ ಓವರ್ ನಲ್ಲಿ 28 ರನ್, ದಾಖಲೆಗಳ ಮಳೆ, ಎಲೈಟ್ ಗ್ರೂಪ್ ಸೇರಿದ Ishan Kishan!

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಬಿಜೆಪಿ MLA ಬೈರತಿ ಬಸವರಾಜ್ ಬಂಧನ!

OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ 'ಕೇಂದ್ರ' ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!

SCROLL FOR NEXT