ಆರೋಪಿ ರೋಹನ್ ಚಂದ್ರ ಭಟ್ 
ರಾಜ್ಯ

ಬೆಂಗಳೂರು: ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ತಂದೆ, ದಂತವೈದ್ಯೆ ತಾಯಿಯನ್ನು ಕೊಂದ ಟೆಕ್ಕಿ!

ಮೃತರನ್ನು ನವೀನ್ ಚಂದ್ರ ಭಟ್ ಮತ್ತು ಅವರ ಪತ್ನಿ ದಂತವೈದ್ಯೆ ಡಾ. ಶ್ಯಾಮಲಾ ಭಟ್ ಎಂದು ಗುರುತಿಸಲಾಗಿದ್ದು, ಅವರ ಮಗ, ಆರೋಪಿ ರೋಹನ್ ಚಂದ್ರ ಭಟ್(33)ನನ್ನು ಬಂಧಿಸಲಾಗಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಜೋಡಿ ಕೊಲೆ ನಡೆದಿದ್ದು, ಎಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಜ್ಞಾನ್ ನಗರದಲ್ಲಿ ಬುಧವಾರ ಬೆಳಗ್ಗೆ ಟೆಕ್ಕಿಯೊಬ್ಬ ತನ್ನ ತಂದೆ, 60 ವರ್ಷದ ನಿವೃತ್ತ ನೌಕಾಪಡೆಯ ಕ್ಯಾಪ್ಟನ್ ಮತ್ತು ಹೆತ್ತ ತಾಯಿ, 55 ವರ್ಷದ ದಂತ ವೈದ್ಯೆಯನ್ನು ಇರಿದು ಕೊಂದಿದ್ದಾನೆ.

ಮೃತರನ್ನು ನವೀನ್ ಚಂದ್ರ ಭಟ್ ಮತ್ತು ಅವರ ಪತ್ನಿ ದಂತವೈದ್ಯೆ ಡಾ. ಶ್ಯಾಮಲಾ ಭಟ್ ಎಂದು ಗುರುತಿಸಲಾಗಿದ್ದು, ಅವರ ಮಗ, ಆರೋಪಿ ರೋಹನ್ ಚಂದ್ರ ಭಟ್(33)ನನ್ನು ಬಂಧಿಸಲಾಗಿದೆ.

ಪೊಲೀಸರ ಪ್ರಕಾರ, ಆದರ್ಶ್ ವಿಸ್ಟಾದ ವಿಲ್ಲಾ ಸಂಖ್ಯೆ 112 ರಲ್ಲಿ ಬುಧವಾರ ಬೆಳಗ್ಗೆ 7.30 ರ ಸುಮಾರಿಗೆ ರೋಹನ್ ತನ್ನ ಹೆತ್ತವರನ್ನು ಅಡುಗೆಮನೆಯ ಚಾಕುವಿನಿಂದ ಮಾರಾಣಾಂತಿಕ ಹಲ್ಯೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಬೆಳಗ್ಗೆ 8.15 ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನೆರೆಮನೆಯವರು ಮತ್ತು ಖಾಸಗಿ ಆಸ್ಪತ್ರೆಯ ವೈದ್ಯೆ ಡಾ. ಮಾಧವಿ ನಾಯರ್ ನೀಡಿದ ದೂರಿನ ಆಧಾರದ ಮೇಲೆ, ರೋಹನ್ ವಿರುದ್ಧ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಶವಗಳನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ದಂಪತಿಯ ಮಗಳು ಅಮೆರಿಕದಿಂದ ಆಗಮಿಸುತ್ತಿದ್ದು, ಅವರು ಬಂದ ನಂತರ ಶವಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್